ಮದುವೆ ಆದ ಎರಡೇ ದಿನಕ್ಕೆ ಪ್ರೆಗ್ನೆಂಟ್​ ಎಂಬ ಸುದ್ದಿ ಹರಡಿದ್ದಕ್ಕೆ ಸೋನಾಕ್ಷಿ ಪ್ರತಿಕ್ರಿಯೆ

ಮದುವೆ ಮತ್ತು ರಿಸೆಪ್ಷನ್​ ಮುಗಿಯುತ್ತಿದ್ದಂತೆಯೇ ನಟಿ ಸೋನಾಕ್ಷಿ ಸಿನ್ಹಾ ಅವರು ಗಂಡನ ಜೊತೆ ಆಸ್ಪತ್ರೆಗೆ ಬಂದಿದ್ದರು. ಹಾಗಾಗಿ ಅವರು ಪ್ರೆಗ್ನೆಂಟ್​ ಆಗಿರಬಹುದು ಎಂದು ಗಾಸಿಪ್​ ಹರಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋನಾಕ್ಷಿ ಸಿನ್ಹಾ ಅವರು ಈಗ ಪ್ರತಿಕ್ರಿಯಿಸಿದ್ದಾರೆ. ನಿಜಕ್ಕೂ ಸೋನಾಕ್ಷಿ ಸಿನ್ಹಾ ಅವರು ಗರ್ಭಿಣಿ ಆಗಿದ್ದು ಹೌದು? ಅಭಿಮಾನಿಗಳ ಮನದಲ್ಲಿ ಇರುವ ಪ್ರಶ್ನೆಗೆ ಇಲ್ಲಿದೆ ಉತ್ತರ..

ಮದುವೆ ಆದ ಎರಡೇ ದಿನಕ್ಕೆ ಪ್ರೆಗ್ನೆಂಟ್​ ಎಂಬ ಸುದ್ದಿ ಹರಡಿದ್ದಕ್ಕೆ ಸೋನಾಕ್ಷಿ ಪ್ರತಿಕ್ರಿಯೆ
ಝಹೀರ್​ ಇಖ್ಬಾಲ್​, ಸೋನಾಕ್ಷಿ ಸಿನ್ಹಾ
Follow us
|

Updated on: Jul 05, 2024 | 10:57 PM

ನಟಿ ಸೋನಾಕ್ಷಿ ಸಿನ್ಹಾ ಅವರು ಕೆಲವೇ ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳೆಯ ಝಹೀರ್​ ಇಖ್ಬಾಲ್​ ಜೊತೆ ಅವರ ಮದುವೆ ನೆರವೇರಿತು. ಮದುವೆ ಆದ ಎರಡೇ ದಿನಗಳ ಬಳಿಕ ಸೋನಾಕ್ಷಿ ಸಿನ್ಹಾ ಅವರು ಪ್ರೆಗ್ನೆಂಟ್​ ಎಂಬ ಗಾಸಿಪ್​ ಹಬ್ಬಿತ್ತು. ಅದಕ್ಕೆ ಕಾರಣ ಆಗಿದ್ದು ಒಂದು ಘಟನೆ. ಮದುವೆ ಆದ ಬಳಿಕ ಸೋನಾಕ್ಷಿ ಸಿನ್ಹಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರಿಂದ ಈ ವದಂತಿ ಹರಡಿತ್ತು. ಅದಕ್ಕೆ ಈಗ ಸೋನಾಕ್ಷಿ ಸಿನ್ಹಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಟೈಮ್ಸ್​ ನೌ’ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಮದುವೆ ಬಳಿಕ ಜೀವನ ಹೇಗಿದೆ ಎಂದು ಕೇಳಿದ್ದಕ್ಕೆ ಸೋನಾಕ್ಷಿ ಸಿನ್ಹಾ ಅವರು ಉತ್ತರ ನೀಡಿದ್ದಾರೆ. ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್​ ಇಖ್ಬಾಲ್​ ಅವರು ಕಳೆದ 7 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹಾಗಾಗಿ ಅವರು ಬೆಸ್ಟ್​ ಫ್ರೆಂಡ್ಸ್​ ರೀತಿ ಇದ್ದಾರೆ. ಈ ಕಾರಣದಿಂದಾಗಿ ಮದುವೆ ಬಳಿಕ ಜೀವನ ತುಂಬ ಬದಲಾಗಿದೆ ಎಂದು ಸೋನಾಕ್ಷಿ ಸಿನ್ಹಾಗೆ ಅನಿಸುತ್ತಿಲ್ಲ. ಈಗ ಅವರ ಜೀವನ ಬದಲಾಗಿರುವುದು ಗಾಸಿಪ್​ಗಳ ವಿಷಯದಲ್ಲಿ ಮಾತ್ರ!

‘ಮದುವೆ ನಂತರ ಆಗಿರುವ ಒಂದೇ ಒಂದು ಬದಲಾವಣೆ ಏನೆಂದರೆ, ಈಗ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಆಸ್ಪತ್ರೆಗೆ ಬಂದ ತಕ್ಷಣ ಜನರಿಗೆ ನಾನು ಪ್ರೆಗ್ನೆಂಟ್​ ಆಗಿದ್ದೇನೆ ಎನಿಸುತ್ತದೆ’ ಎಂದು ಸೋನಾಕ್ಷಿ ಸಿನ್ಹಾ ಹೇಳಿದ್ದಾರೆ. ಆ ಮೂಲಕ ಇತ್ತೀಚೆಗೆ ಹರಡಿದ್ದ ಗಾಸಿಪ್​ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಈಗ ಪ್ರೆಗ್ನೆಂಟ್​ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಅಷ್ಟಕ್ಕೂ ಸೋನಾಕ್ಷಿ ಸಿನ್ಹಾ ಅವರು ಮದುವೆ ನಂತರ ಆಸ್ಪತ್ರೆಗೆ ಹೋಗಿದ್ದು ಯಾಕೆ ಎಂಬುದಕ್ಕೂ ಉತ್ತರ ಸಿಕ್ಕಿದೆ.

ಇದನ್ನೂ ಓದಿ: ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ

ಸೋನಾಕ್ಷಿ ಸಿನ್ಹಾ ಅವರ ಮದುವೆಯ ಬಳಿಕ ಅವರ ತಂದೆ ಶತ್ರುಘ್ನ ಸಿನ್ಹಾ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಆದ್ದರಿಂದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರನ್ನು ನೋಡುವ ಸಲುವಾಗಿ ಸೋನಾಕ್ಷಿ ಸಿನ್ಹಾ ಮತ್ತು ಝಹೀರ್​ ಇಖ್ಬಾಲ್​ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಗ ಅವರನ್ನು ನೋಡಿದ ಅನೇಕರು ತಪ್ಪಾಗಿ ಅರ್ಥ ಮಾಡಿಕೊಂಡರು. ಸೋನಾಕ್ಷಿ ಪ್ರೆಗ್ನೆಂಟ್​ ಆದ್ದರಿಂದ ಆಸ್ಪತ್ರೆಗೆ ಗಂಡನ ಜೊತೆ ಬಂದಿದ್ದಾರೆ ಎಂದು ಗಾಸಿಪ್​ ಹಬ್ಬಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್