AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆದ ಎರಡೇ ದಿನಕ್ಕೆ ಪ್ರೆಗ್ನೆಂಟ್​ ಎಂಬ ಸುದ್ದಿ ಹರಡಿದ್ದಕ್ಕೆ ಸೋನಾಕ್ಷಿ ಪ್ರತಿಕ್ರಿಯೆ

ಮದುವೆ ಮತ್ತು ರಿಸೆಪ್ಷನ್​ ಮುಗಿಯುತ್ತಿದ್ದಂತೆಯೇ ನಟಿ ಸೋನಾಕ್ಷಿ ಸಿನ್ಹಾ ಅವರು ಗಂಡನ ಜೊತೆ ಆಸ್ಪತ್ರೆಗೆ ಬಂದಿದ್ದರು. ಹಾಗಾಗಿ ಅವರು ಪ್ರೆಗ್ನೆಂಟ್​ ಆಗಿರಬಹುದು ಎಂದು ಗಾಸಿಪ್​ ಹರಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋನಾಕ್ಷಿ ಸಿನ್ಹಾ ಅವರು ಈಗ ಪ್ರತಿಕ್ರಿಯಿಸಿದ್ದಾರೆ. ನಿಜಕ್ಕೂ ಸೋನಾಕ್ಷಿ ಸಿನ್ಹಾ ಅವರು ಗರ್ಭಿಣಿ ಆಗಿದ್ದು ಹೌದು? ಅಭಿಮಾನಿಗಳ ಮನದಲ್ಲಿ ಇರುವ ಪ್ರಶ್ನೆಗೆ ಇಲ್ಲಿದೆ ಉತ್ತರ..

ಮದುವೆ ಆದ ಎರಡೇ ದಿನಕ್ಕೆ ಪ್ರೆಗ್ನೆಂಟ್​ ಎಂಬ ಸುದ್ದಿ ಹರಡಿದ್ದಕ್ಕೆ ಸೋನಾಕ್ಷಿ ಪ್ರತಿಕ್ರಿಯೆ
ಝಹೀರ್​ ಇಖ್ಬಾಲ್​, ಸೋನಾಕ್ಷಿ ಸಿನ್ಹಾ
ಮದನ್​ ಕುಮಾರ್​
|

Updated on: Jul 05, 2024 | 10:57 PM

Share

ನಟಿ ಸೋನಾಕ್ಷಿ ಸಿನ್ಹಾ ಅವರು ಕೆಲವೇ ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳೆಯ ಝಹೀರ್​ ಇಖ್ಬಾಲ್​ ಜೊತೆ ಅವರ ಮದುವೆ ನೆರವೇರಿತು. ಮದುವೆ ಆದ ಎರಡೇ ದಿನಗಳ ಬಳಿಕ ಸೋನಾಕ್ಷಿ ಸಿನ್ಹಾ ಅವರು ಪ್ರೆಗ್ನೆಂಟ್​ ಎಂಬ ಗಾಸಿಪ್​ ಹಬ್ಬಿತ್ತು. ಅದಕ್ಕೆ ಕಾರಣ ಆಗಿದ್ದು ಒಂದು ಘಟನೆ. ಮದುವೆ ಆದ ಬಳಿಕ ಸೋನಾಕ್ಷಿ ಸಿನ್ಹಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರಿಂದ ಈ ವದಂತಿ ಹರಡಿತ್ತು. ಅದಕ್ಕೆ ಈಗ ಸೋನಾಕ್ಷಿ ಸಿನ್ಹಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಟೈಮ್ಸ್​ ನೌ’ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಮದುವೆ ಬಳಿಕ ಜೀವನ ಹೇಗಿದೆ ಎಂದು ಕೇಳಿದ್ದಕ್ಕೆ ಸೋನಾಕ್ಷಿ ಸಿನ್ಹಾ ಅವರು ಉತ್ತರ ನೀಡಿದ್ದಾರೆ. ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್​ ಇಖ್ಬಾಲ್​ ಅವರು ಕಳೆದ 7 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹಾಗಾಗಿ ಅವರು ಬೆಸ್ಟ್​ ಫ್ರೆಂಡ್ಸ್​ ರೀತಿ ಇದ್ದಾರೆ. ಈ ಕಾರಣದಿಂದಾಗಿ ಮದುವೆ ಬಳಿಕ ಜೀವನ ತುಂಬ ಬದಲಾಗಿದೆ ಎಂದು ಸೋನಾಕ್ಷಿ ಸಿನ್ಹಾಗೆ ಅನಿಸುತ್ತಿಲ್ಲ. ಈಗ ಅವರ ಜೀವನ ಬದಲಾಗಿರುವುದು ಗಾಸಿಪ್​ಗಳ ವಿಷಯದಲ್ಲಿ ಮಾತ್ರ!

‘ಮದುವೆ ನಂತರ ಆಗಿರುವ ಒಂದೇ ಒಂದು ಬದಲಾವಣೆ ಏನೆಂದರೆ, ಈಗ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಆಸ್ಪತ್ರೆಗೆ ಬಂದ ತಕ್ಷಣ ಜನರಿಗೆ ನಾನು ಪ್ರೆಗ್ನೆಂಟ್​ ಆಗಿದ್ದೇನೆ ಎನಿಸುತ್ತದೆ’ ಎಂದು ಸೋನಾಕ್ಷಿ ಸಿನ್ಹಾ ಹೇಳಿದ್ದಾರೆ. ಆ ಮೂಲಕ ಇತ್ತೀಚೆಗೆ ಹರಡಿದ್ದ ಗಾಸಿಪ್​ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಈಗ ಪ್ರೆಗ್ನೆಂಟ್​ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಅಷ್ಟಕ್ಕೂ ಸೋನಾಕ್ಷಿ ಸಿನ್ಹಾ ಅವರು ಮದುವೆ ನಂತರ ಆಸ್ಪತ್ರೆಗೆ ಹೋಗಿದ್ದು ಯಾಕೆ ಎಂಬುದಕ್ಕೂ ಉತ್ತರ ಸಿಕ್ಕಿದೆ.

ಇದನ್ನೂ ಓದಿ: ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ

ಸೋನಾಕ್ಷಿ ಸಿನ್ಹಾ ಅವರ ಮದುವೆಯ ಬಳಿಕ ಅವರ ತಂದೆ ಶತ್ರುಘ್ನ ಸಿನ್ಹಾ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಆದ್ದರಿಂದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರನ್ನು ನೋಡುವ ಸಲುವಾಗಿ ಸೋನಾಕ್ಷಿ ಸಿನ್ಹಾ ಮತ್ತು ಝಹೀರ್​ ಇಖ್ಬಾಲ್​ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಗ ಅವರನ್ನು ನೋಡಿದ ಅನೇಕರು ತಪ್ಪಾಗಿ ಅರ್ಥ ಮಾಡಿಕೊಂಡರು. ಸೋನಾಕ್ಷಿ ಪ್ರೆಗ್ನೆಂಟ್​ ಆದ್ದರಿಂದ ಆಸ್ಪತ್ರೆಗೆ ಗಂಡನ ಜೊತೆ ಬಂದಿದ್ದಾರೆ ಎಂದು ಗಾಸಿಪ್​ ಹಬ್ಬಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?