ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸೋನಾಕ್ಷಿ ಸಿನ್ಹಾ ಸಂಭ್ರಮ: ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿದ ನಟಿ

ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ರಾಜಿನಾಮೆ ನೀಡಿರುವುದು ಸೋನಾಕ್ಷಿ ಸಿಹ್ನಾ ಅವರಿಗೆ ಸಂತಸ ತಂದಿದೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿರುವ ಸೋನಾಕ್ಷಿ ಸಿನ್ಹಾ ಅವರು ಜಿನ್ ಜಿ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸೋನಾಕ್ಷಿ ಸಿನ್ಹಾ ಸಂಭ್ರಮ: ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿದ ನಟಿ
Sonakshi Sinha

Updated on: Jul 26, 2026 | 11:01 AM

ನೀಟ್ ಪರೀಕ್ಷೆಗಳ ಅಕ್ರಮ ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ತೀವ್ರ ಪ್ರತಿಭಟನೆಯ (Student Protest) ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ನಿರ್ಧಾರವು ವಿದ್ಯಾರ್ಥಿಗಳು ಹಾಗೂ ಹೋರಾಟಗಾರರಲ್ಲಿ ಸಂತಸ ತಂದಿದ್ದು, ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊ ಹಂಚಿಕೊಳ್ಳುವ ಮೂಲಕ ‘ಜೆನ್ ಜಿ’ (Gen Z) ಯುವಜನತೆಯ ಹೋರಾಟದ ಗೆಲುವನ್ನು ಕೊಂಡಾಡಿದ್ದಾರೆ. ಅಲ್ಲದೇ ಅವರ ಬಳಿ ಕ್ಷಮೆ ಕೂಡ ಹೇಳಿದ್ದಾರೆ.

ಕಳೆದ ಕೆಲವು ವಾರಗಳಿಂದ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬಹಿರಂಗ ಬೆಂಬಲ ಸೂಚಿಸುತ್ತಿದ್ದ ಸೋನಾಕ್ಷಿ, ಜುಲೈ 20ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗವನ್ನು ತೀವ್ರವಾಗಿ ಖಂಡಿಸಿದ್ದರು. ಸಚಿವರ ರಾಜೀನಾಮೆ ಸುದ್ದಿ ಹೊರಬಿದ್ದ ಬಳಿಕ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಹಂಚಿಕೊಂಡ ಸೋನಾಕ್ಷಿ ಅವರು ಯುವಜನತೆಗೆ ತಮಾಷೆಯಾಗಿ ಕ್ಷಮೆಯಾಚಿಸಿದ್ದಾರೆ.

‘ತುಂಬಾ ಹಗುರವಾಗಿ ಪರಿಗಣಿಸಿದ್ದೆ’

ವೀಡಿಯೊದಲ್ಲಿ ತೀವ್ರ ಸಂತಸ ವ್ಯಕ್ತಪಡಿಸಿದ ಸೋನಾಕ್ಷಿ, ‘ಸ್ನೇಹಿತರೇ, ನೀವು ಇಂದು ಏನು ಸಾಧಿಸಿದ್ದೀರಿ ಎಂಬುದು ನಿಮಗೆ ಗೊತ್ತಿಲ್ಲ. ನಾನು ಕೇವಲ ಒಬ್ಬ ಕಲಾವಿದೆ, ಆದರೆ ಈ ‘ಜೆನ್ ಜಿ’ ಯುವಜನತೆಯೇ ನಿಜವಾದ ಕಲೆ. ನಾನು ಮೊದಲು ಈ ಯುವಸಮುದಾಯವನ್ನು ತುಂಬಾ ಹಗುರವಾಗಿ ಪರಿಗಣಿಸಿದ್ದೆ. ನಾಲ್ಕು ಗಂಟೆ ಕೆಲಸ ಮಾಡಿ ಸುಸ್ತಾಗುತ್ತಾರೆ, ಇವರಿಂದೇನೂ ಆಗುವುದಿಲ್ಲ ಎಂದುಕೊಂಡಿದ್ದೆ. ಅದಕ್ಕಾಗಿ ಕ್ಷಮೆ ಇರಲಿ. ಆದರೆ ನಿಮ್ಮ ಈ ಸಾಧನೆಗೆ ನನ್ನದೊಂದು ಬಿಗ್ ಸಲ್ಯೂಟ್. ನನ್ನನ್ನು ನೋಡಿ, ನಾನೂ ಈಗ ನಿಮ್ಮಂತೆ ‘ಜೆನ್ ಜಿ’ ಆಗಲು ಬಯಸುತ್ತೇನೆ. ನೀವೆಲ್ಲರೂ ಮಾಡಿದ್ದು ನಿಜಕ್ಕೂ ನಂಬಲಾಗದ ಸಂಗತಿ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ:

ಪರೀಕ್ಷಾ ಅಕ್ರಮಗಳ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಸುದೀರ್ಘ ವಿದ್ಯಾರ್ಥಿ ಹೋರಾಟ ಹಾಗೂ ಒತ್ತಡಕ್ಕೆ ಮಣಿದು ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್, ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ದೇಶದ ಯುವಜನತೆಯ ಸೇವೆ ಮಾಡುವುದು ತಮ್ಮ ನೈತಿಕ ಜವಾಬ್ದಾರಿಯಾಗಿತ್ತು ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಜಹೀರ್ ಇಕ್ಬಾಲ್ನ ಪ್ರೀತಿಸಿ ಸಲ್ಮಾನ್ ಖಾನ್ ಎದುರು ರೆಡ್​ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದ ಸೋನಾಕ್ಷಿ ಸಿನ್ಹಾ

ಕೇವಲ ಸೋನಾಕ್ಷಿ ಸಿನ್ಹಾ ಮಾತ್ರವಲ್ಲದೆ, ಚಿತ್ರರಂಗದ ಇನ್ನು ಕೆಲವು ಪ್ರಮುಖ ಸೆಲೆಬ್ರಿಟಿಗಳು ಸಹ ಈ ವಿದ್ಯಾರ್ಥಿ ಹೋರಾಟಕ್ಕೆ ಬಹಿರಂಗ ಬೆಂಬಲ ಸೂಚಿಸಿದ್ದರು. ಜ್ಯೋತಿಕಾ, ಪ್ರಕಾಶ್ ರಾಜ್, ಶಬಾನಾ ಆಜ್ಮಿ, ನಸೀರುದ್ದೀನ್ ಶಾ, ಸಲ್ಮಾನ್ ಖಾನ್, ಟ್ವಿಂಕಲ್ ಖನ್ನಾ, ಅತುಲ್ ಕುಲಕರ್ಣಿ, ಕಿಶೋರ್ ಸೇರಿದಂತೆ ಹಲವರು ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us