AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ

Sonal Chauhan Appeal to PM Modi: ಕನ್ನಡದ ‘ಶಿವಲಿಂಗ’ ಸೇರಿದಂತೆ ಹಿಂದಿ, ತೆಲುಗು ಸಿನಿಮಾಗಳಲ್ಲಿಯೂ ಸಹ ನಟಿಸಿರುವ ನಟಿ ಸೋನಲ್ ಚೌಹಾಣ್ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದು, ಯುದ್ಧ ಭೀತಿಯಿಂದ ತತ್ತರಿಸಿದ್ದಾರೆ. ಭಾರತಕ್ಕೆ ಬರಲಾರದೆ ಚಿಂತಿತರಾಗಿರುವ ನಟಿ ಸೋನಲ್, ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿದ್ದು, ತಮ್ಮನ್ನ ಕಾಪಾಡುವಂತೆ ಮನವಿ ಮಾಡಿದ್ದಾರೆ.

‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ
Narendra Modi Sonal
ಮಂಜುನಾಥ ಸಿ.
|

Updated on: Mar 01, 2026 | 7:15 PM

Share

ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೇಲೆ ಅಮೆರಿಕ (America) ಮತ್ತು ಇಸ್ರೇಲ್ ಜಂಟಿ ದಾಳಿ ಮಾಡುತ್ತಿವೆ. ಇರಾನ್ ಸಹ ಪ್ರತಿದಾಳಿ ಮಾಡುತ್ತಿದೆ. ಯುದ್ಧದ ಭೀತಿ ಮಧ್ಯಪ್ರಾಚ್ಯದ ಹಲವು ದೇಶಗಳನ್ನು ಆವರಿಸಿದ್ದು, ಅದರಲ್ಲಿ ಯುಎಇ ಸಹ ಒಂದಾಗಿದೆ. ಯುಎಇಯ ದುಬೈ, ಅಬುದಾಭಿ ಇನ್ನೂ ಕೆಲವು ನಗರಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಭಯದಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ವಿಮಾನ ಹಾರಾಟ ರದ್ದಾಗಿರುವ ಕಾರಣ ಭಾರತಕ್ಕೆ ಬರಲಾರದೆ ಒದ್ದಾಡುತ್ತಿದ್ದಾರೆ. ಇದೀಗ ದುಬೈನಲ್ಲಿ ಸಿಲುಕಿಕೊಂಡಿರುವ ನಟಿಯೊಬ್ಬರು ತಮ್ಮನ್ನು ಕಾಪಾಡುವಂತೆ ಪ್ರಧಾನಿ ಮೋದಿ ಅವರಲ್ಲಿ ಕೇಳಿಕೊಂಡಿದ್ದಾರೆ. ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ಬಾಲಿವುಡ್ ನಟಿ ಸೋನಲ್ ಚೌಹಾಣ್ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಯಾನ ಸೇವೆಗಳು ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ, ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕನ್ನಡದ ‘ಶಿವಲಿಂಗ’ ಸೇರಿದಂತೆ ಹಿಂದಿ, ತೆಲುಗು ಸಿನಿಮಾಗಳಲ್ಲಿಯೂ ಸಹ ನಟಿಸಿರುವ ನಟಿ ಸೋನಲ್ ಚೌಹಾಣ್ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದು, ಯುದ್ಧ ಭೀತಿಯಿಂದ ತತ್ತರಿಸಿದ್ದಾರೆ. ಭಾರತಕ್ಕೆ ಬರಲಾರದೆ ಚಿಂತಿತರಾಗಿರುವ ನಟಿ ಸೋನಲ್, ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿದ್ದು, ತಮ್ಮನ್ನ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಸೋನಲ್ ಚೌಹಾಣ್ ಅವರು ತಮ್ಮ ಪೋಸ್ಟ್‌ನಲ್ಲಿ,ಪ್ರಧಾನಿ ನರೇಂದ್ರ ಮೋದಿ ಅವರೇ, ನಾನು ಪ್ರಸ್ತುತ ದುಬೈನಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ ಸಿಲುಕಿಕೊಂಡಿದ್ದೇನೆ. ವಿಮಾನಗಳನ್ನು ರದ್ದುಗೊಳಿಸಲಾಗಿದೆ ಮತ್ತು ಭಾರತಕ್ಕೆ ಮರಳಲು ಸ್ಪಷ್ಟ ಮಾರ್ಗವಿಲ್ಲ. ನಾನು ಸುರಕ್ಷಿತವಾಗಿ ಮನೆಗೆ ಮರಳಲು ಸರ್ಕಾರದ ಮಾರ್ಗದರ್ಶನ ಮತ್ತು ಬೆಂಬಲವನ್ನು ಬಯಸುತ್ತಿದ್ದೇನೆ. ಸರ್ಕಾರದಿಂದ ಯಾವುದೇ ಸಹಾಯ ಮತ್ತು ಸುರಕ್ಷಿತ ವಾಪಸಾತಿಗೆ ಮಾರ್ಗದರ್ಶನಕ್ಕಾಗಿ ನಾನು ತುಂಬಾ ಕೃತಜ್ಞಳಾಗಿರುತ್ತೇನೆ’ ಎಂದಿರುವ ನಟಿ, ತಮ್ಮ ಟ್ವೀಟ್ ಅನ್ನು ಪ್ರಧಾನಿ ಕಚೇರಿ (PMO) ಮತ್ತು ವಿದೇಶಾಂಗ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ:‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ

ಸೋನಲ್ ಚೌಹಾಣ್ ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ಮತ್ತು ಮಾಡೆಲ್ ಆಗಿದ್ದಾರೆ. 2008ರಲ್ಲಿ ಇಮ್ರಾನ್ ಹಶ್ಮಿ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಜನ್ನತ್’ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟರು. ಈ ಚಿತ್ರದ ‘ಜರಾ ಸಾ’ ಹಾಡಿನ ಮೂಲಕ ಅವರು ಸಖತ್ ಜನಪ್ರಿಯತೆ ಗಳಿಸಿದರು. ಕೇವಲ ಹಿಂದಿ ಮಾತ್ರವೇ ಅಲ್ಲದೆ ತೆಲುಗು ಮತ್ತು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಕನ್ನಡದಲ್ಲಿ ಶಿವ ರಾಜ್‌ಕುಮಾರ್ ಅವರ ಜೊತೆ ‘ಶಿವಲಿಂಗ’ ಚಿತ್ರದ ಪ್ರಮುಖ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ತೆಲುಗಿನಲ್ಲಿ ಬಾಲಕೃಷ್ಣ ಅವರ ಜೊತೆ ‘ಲೆಜೆಂಡ್’ ಮತ್ತು ‘ಡಿಕ್ಟೇಟರ್’ ನಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಅಭಿನಯದ ಅದ್ದೂರಿ ಚಿತ್ರ ‘ಆದಿಪುರುಷ್’ ನಲ್ಲಿ ಶೇಷನಾಗನ ಪತ್ನಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಯುದ್ಧ ಭೀತಿ ಇರುವ ಕಾರಣದಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ದುಬೈ ಸೇರಿದಂತೆ ಹಲವು ಅರಬ್ ರಾಷ್ಟ್ರಗಳ ವೈಮಾನಿಕ ಮಾರ್ಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಆಕಾಶದಲ್ಲಿ ಕ್ಷಿಪಣಿಗಳು ಸಂಚರಿಸುತ್ತಿರುವ ವಿಡಿಯೋಗಳು ಹರಿದಾಡುತ್ತಿದ್ದು, ಪ್ರವಾಸಿಗರಲ್ಲಿ ಭೀತಿ ಮೂಡಿಸಿದೆ.ಸೋನಲ್ ಅವರಂತೆ ಸಾವಿರಾರು ಭಾರತೀಯ ಪ್ರಜೆಗಳು ಅಲ್ಲಿ ಸಿಲುಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು