AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್​ ವಿಚಾರಕ್ಕೆ ತಲೆ ಹಾಕಿದ ಸೋನಂ ಕಪೂರ್​; ಇನ್ನೊಂದು ಧರ್ಮವನ್ನು ಪ್ರಶ್ನಿಸಿ ಟೀಕೆಗೆ ಗುರಿಯಾದ ನಟಿ

Turban and Hijab: ಹಿಜಾಬ್​ ಮತ್ತು ಸಿಖ್ಖರ ಪೇಟವನ್ನು ಹೋಲಿಕೆ ಮಾಡಿದ್ದಕ್ಕಾಗಿ ಸೋನಂ ಕಪೂರ್​​ ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗುತ್ತಿದ್ದಾರೆ. ಅನೇಕರಿಂದ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ.

ಹಿಜಾಬ್​ ವಿಚಾರಕ್ಕೆ ತಲೆ ಹಾಕಿದ ಸೋನಂ ಕಪೂರ್​; ಇನ್ನೊಂದು ಧರ್ಮವನ್ನು ಪ್ರಶ್ನಿಸಿ ಟೀಕೆಗೆ ಗುರಿಯಾದ ನಟಿ
ಸೋನಮ್ ಕಪೂರ್
TV9 Web
| Edited By: |

Updated on: Feb 12, 2022 | 8:15 AM

Share

ಹಿಜಾಬ್​ ಕುರಿತಂತೆ ಕರ್ನಾಟಕದಲ್ಲಿ ಉಂಟಾಗಿರುವ ವಿವಾದದ (Hijab Controversy) ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಅದೇ ರೀತಿ ನಟಿ ಸೋನಂ ಕಪೂರ್​ (Sonam Kapoor) ಕೂಡ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದರು. ಆದರೆ ಅದಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋನಂ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ. ಅಷ್ಟಕ್ಕೂ ಸೋನಂ ಕಪೂರ್​ ಮಾಡಿದ ತಪ್ಪೇನು? ಹಿಜಾಬ್​ ವಿಚಾರದಲ್ಲಿ ಸಿಖ್​ ಧರ್ಮದ ವಿಚಾರವನ್ನು ಎಳೆದು ತಂದಿದ್ದು! ಹೌದು, ಹಿಜಾಬ್​ ಕುರಿತಂತೆ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಒಂದು ಫೋಟೋ ಶೇರ್​ ಮಾಡಿಕೊಂಡರು. ಪೇಟ (Turban) ಧರಿಸಿದ ಸಿಖ್​ ವ್ಯಕ್ತಿ ಮತ್ತು ಹಿಜಾಬ್​ ಧರಿಸಿದ ಮುಸ್ಲಿಂ ಮಹಿಳೆಯ ನಡುವೆ ಹೋಲಿಕೆ ಇರುವಂತಹ ಆ ಪೋಸ್ಟ್​ ಕಂಡು ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಸೋನಮ್​ ಕಪೂರ್​ ಅದನ್ನು ಈಗ ಡಿಲೀಟ್​ ಮಾಡಿದ್ದಾರೆ. ಹಿಜಾಬ್​ ಮತ್ತು ಸಿಖ್ಖರ ಪೇಟವನ್ನು ಹೋಲಿಕೆ ಮಾಡಿದ್ದಕ್ಕಾಗಿ ಅನಿಲ್​ ಕಪೂರ್​ ಪುತ್ರಿ ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗುತ್ತಿದ್ದಾರೆ.

ಸಿಖ್​ ಧರ್ಮದವರು ಪೇಟ ಧರಿಸುವುದು ಸಂಪ್ರದಾಯ. ‘ಇದಕ್ಕೆ ಅವಕಾಶ ಇದೆ ಎಂದಾದರೆ, ಹಿಜಾಬ್​ ಧರಿಸಲು ಯಾಕೆ ಅವಕಾಶ ಇಲ್ಲ’ ಎಂಬ ಅರ್ಥದಲ್ಲಿ ಸೋನಮ್​ ಕಪೂರ್​ ಅವರು ಪ್ರಶ್ನೆ ಮಾಡಿದರು. ಇದಕ್ಕೆ ಸಿಖ್​ ಧರ್ಮದವರಿಂದ ಕಟು ಟೀಕೆ ಕೇಳಿಬಂದಿದೆ. ಈ ಎರಡರ ನಡುವೆ ಹೋಲಿಕೆ ಸರಿಯಲ್ಲ ಎಂದು ಅನೇಕರು ಗುಡುಗಿದ್ದಾರೆ.

ಬಾಲಿವುಡ್​, ಕಾಲಿವುಡ್​ ಸೇರಿದಂತೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಿಜಾಬ್​ ವಿವಾದದ ಬಗ್ಗೆ ಧ್ವನಿ ಎತ್ತಿದ್ದಾರೆ. ಇತ್ತೀಚೆಗೆ ಕಮಲ್​ ಹಾಸನ್​, ರಮ್ಯಾ, ಕಂಗನಾ ರಣಾವತ್​, ಜಾವೇದ್​ ಅಖ್ತರ್​ ಮುಂತಾದವರು ಈ ಕುರಿತು ಪೋಸ್ಟ್​ ಮಾಡಿದ್ದರು.

‘ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಶಾಂತಿ ಕಡದಲು ಪ್ರಚೋದಿಸುತ್ತಿವೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣವಾಗುತ್ತಿದೆ. ಪಕ್ಕದ ರಾಜ್ಯದಲ್ಲಿ ನಡೆಯುತ್ತಿರುವುದು ತಮಿಳುನಾಡಿಗೆ ಬರಬಾರದು. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕಾದ ಸಮಯವಿದು’ ಎಂದು ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಪರಸ್ಪರ ಕಾದಾಡುತ್ತಿರುವ ವಿಡಿಯೋವನ್ನು ರಮ್ಯಾ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಭಾರತದ ಯುವಜನತೆ ಈ ರೀತಿ ಎರಡು ಭಾಗವಾಗಿರುವುದನ್ನು ನೋಡಲು ದುಃಖವಾಗುತ್ತದೆ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಯಾವ ಬಟ್ಟೆ ಧರಿಸಬೇಕು ಎಂಬುದು ಮಹಿಳೆಯರ ಸ್ವಾತಂತ್ರ್ಯ ಎಂದು ಕೆಲವರು ಹೇಳುತ್ತಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇರಬೇಕು ಎಂದು ಇನ್ನೂ ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ‘ನಾನು ಕೂಡ ಇಸ್ಲಾಂ ಕುಟುಂಬದಲ್ಲಿ ಬೆಳೆದವಳು. ನಾನು ಹಿಜಾಬ್​ ಹಾಕಲ್ಲ. ಹಾಗಂತ ನಾನು ಹಿಬಾಬ್ ಹಾಕುವವರ ವಿರೋಧಿ ಕೂಡ ಅಲ್ಲ. ಬಟ್ಟೆ ಎಂಬುದು ಅವರವರ ವೈಯಕ್ತಿಕ ವಿಚಾರ. ನಾನು ಹಿಜಾಬ್​ ಹಾಕಲ್ಲ ಅಂತ ಅನೇಕ ಪರ-ವಿರೋಧ ಚರ್ಚೆ ನಡೆದಿದೆ. ನನ್ನ ನಿಲುವು ಏನೆಂದರೆ, ಹಿಜಾಬ್​ ಅಥವಾ ಯಾವುದೇ ಬಟ್ಟೆ ಆದರೂ ಇದನ್ನು ಹಾಕಬೇಕು-ಹಾಕಬಾರದು ಎಂದು ಒತ್ತಾಯ ಮಾಡುವ ಹಕ್ಕು ಯಾರಿಗೂ ಇಲ್ಲ. ಅದು ಆ ವ್ಯಕ್ತಿಯ ಸ್ವಾತಂತ್ರ್ಯ’ ಎಂದು ಗಾಯಕಿ ಸುಹಾನಾ ಸೈಯದ್ ಇತ್ತೀಚೆಗೆ​​ ಹೇಳಿದ್ದರು.

ಇದನ್ನೂ ಓದಿ:

ಹಿಜಾಬ್​ ಮುಖ್ಯ ಅಲ್ಲ; ಶಿಕ್ಷಣ ಎಲ್ಲದನ್ನ ಮೀರಿದೆ -ಗಾಯಕಿ ಸುಹಾನಾ ಸೈಯದ್

ಹಿಜಾಬ್‌ ವಿವಾದದ ಅತಿದೊಡ್ಡ ಎಕ್ಸ್‌ಕ್ಲೂಸಿವ್‌ ಸುದ್ದಿ: ನವೆಂಬರ್ ತಿಂಗಳಲ್ಲೇ ನಡೆದಿತ್ತು ಹಿಜಾಬ್ ವಿವಾದಕ್ಕೆ ಮಾಸ್ಟರ್ ಪ್ಲಾನ್!?

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ