AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್​ ವಿಚಾರಕ್ಕೆ ತಲೆ ಹಾಕಿದ ಸೋನಂ ಕಪೂರ್​; ಇನ್ನೊಂದು ಧರ್ಮವನ್ನು ಪ್ರಶ್ನಿಸಿ ಟೀಕೆಗೆ ಗುರಿಯಾದ ನಟಿ

Turban and Hijab: ಹಿಜಾಬ್​ ಮತ್ತು ಸಿಖ್ಖರ ಪೇಟವನ್ನು ಹೋಲಿಕೆ ಮಾಡಿದ್ದಕ್ಕಾಗಿ ಸೋನಂ ಕಪೂರ್​​ ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗುತ್ತಿದ್ದಾರೆ. ಅನೇಕರಿಂದ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ.

ಹಿಜಾಬ್​ ವಿಚಾರಕ್ಕೆ ತಲೆ ಹಾಕಿದ ಸೋನಂ ಕಪೂರ್​; ಇನ್ನೊಂದು ಧರ್ಮವನ್ನು ಪ್ರಶ್ನಿಸಿ ಟೀಕೆಗೆ ಗುರಿಯಾದ ನಟಿ
ಸೋನಮ್ ಕಪೂರ್
TV9 Web
| Edited By: |

Updated on: Feb 12, 2022 | 8:15 AM

Share

ಹಿಜಾಬ್​ ಕುರಿತಂತೆ ಕರ್ನಾಟಕದಲ್ಲಿ ಉಂಟಾಗಿರುವ ವಿವಾದದ (Hijab Controversy) ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಅದೇ ರೀತಿ ನಟಿ ಸೋನಂ ಕಪೂರ್​ (Sonam Kapoor) ಕೂಡ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದರು. ಆದರೆ ಅದಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋನಂ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ. ಅಷ್ಟಕ್ಕೂ ಸೋನಂ ಕಪೂರ್​ ಮಾಡಿದ ತಪ್ಪೇನು? ಹಿಜಾಬ್​ ವಿಚಾರದಲ್ಲಿ ಸಿಖ್​ ಧರ್ಮದ ವಿಚಾರವನ್ನು ಎಳೆದು ತಂದಿದ್ದು! ಹೌದು, ಹಿಜಾಬ್​ ಕುರಿತಂತೆ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಒಂದು ಫೋಟೋ ಶೇರ್​ ಮಾಡಿಕೊಂಡರು. ಪೇಟ (Turban) ಧರಿಸಿದ ಸಿಖ್​ ವ್ಯಕ್ತಿ ಮತ್ತು ಹಿಜಾಬ್​ ಧರಿಸಿದ ಮುಸ್ಲಿಂ ಮಹಿಳೆಯ ನಡುವೆ ಹೋಲಿಕೆ ಇರುವಂತಹ ಆ ಪೋಸ್ಟ್​ ಕಂಡು ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಸೋನಮ್​ ಕಪೂರ್​ ಅದನ್ನು ಈಗ ಡಿಲೀಟ್​ ಮಾಡಿದ್ದಾರೆ. ಹಿಜಾಬ್​ ಮತ್ತು ಸಿಖ್ಖರ ಪೇಟವನ್ನು ಹೋಲಿಕೆ ಮಾಡಿದ್ದಕ್ಕಾಗಿ ಅನಿಲ್​ ಕಪೂರ್​ ಪುತ್ರಿ ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗುತ್ತಿದ್ದಾರೆ.

ಸಿಖ್​ ಧರ್ಮದವರು ಪೇಟ ಧರಿಸುವುದು ಸಂಪ್ರದಾಯ. ‘ಇದಕ್ಕೆ ಅವಕಾಶ ಇದೆ ಎಂದಾದರೆ, ಹಿಜಾಬ್​ ಧರಿಸಲು ಯಾಕೆ ಅವಕಾಶ ಇಲ್ಲ’ ಎಂಬ ಅರ್ಥದಲ್ಲಿ ಸೋನಮ್​ ಕಪೂರ್​ ಅವರು ಪ್ರಶ್ನೆ ಮಾಡಿದರು. ಇದಕ್ಕೆ ಸಿಖ್​ ಧರ್ಮದವರಿಂದ ಕಟು ಟೀಕೆ ಕೇಳಿಬಂದಿದೆ. ಈ ಎರಡರ ನಡುವೆ ಹೋಲಿಕೆ ಸರಿಯಲ್ಲ ಎಂದು ಅನೇಕರು ಗುಡುಗಿದ್ದಾರೆ.

ಬಾಲಿವುಡ್​, ಕಾಲಿವುಡ್​ ಸೇರಿದಂತೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಿಜಾಬ್​ ವಿವಾದದ ಬಗ್ಗೆ ಧ್ವನಿ ಎತ್ತಿದ್ದಾರೆ. ಇತ್ತೀಚೆಗೆ ಕಮಲ್​ ಹಾಸನ್​, ರಮ್ಯಾ, ಕಂಗನಾ ರಣಾವತ್​, ಜಾವೇದ್​ ಅಖ್ತರ್​ ಮುಂತಾದವರು ಈ ಕುರಿತು ಪೋಸ್ಟ್​ ಮಾಡಿದ್ದರು.

‘ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಶಾಂತಿ ಕಡದಲು ಪ್ರಚೋದಿಸುತ್ತಿವೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣವಾಗುತ್ತಿದೆ. ಪಕ್ಕದ ರಾಜ್ಯದಲ್ಲಿ ನಡೆಯುತ್ತಿರುವುದು ತಮಿಳುನಾಡಿಗೆ ಬರಬಾರದು. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕಾದ ಸಮಯವಿದು’ ಎಂದು ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಪರಸ್ಪರ ಕಾದಾಡುತ್ತಿರುವ ವಿಡಿಯೋವನ್ನು ರಮ್ಯಾ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಭಾರತದ ಯುವಜನತೆ ಈ ರೀತಿ ಎರಡು ಭಾಗವಾಗಿರುವುದನ್ನು ನೋಡಲು ದುಃಖವಾಗುತ್ತದೆ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಯಾವ ಬಟ್ಟೆ ಧರಿಸಬೇಕು ಎಂಬುದು ಮಹಿಳೆಯರ ಸ್ವಾತಂತ್ರ್ಯ ಎಂದು ಕೆಲವರು ಹೇಳುತ್ತಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇರಬೇಕು ಎಂದು ಇನ್ನೂ ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ‘ನಾನು ಕೂಡ ಇಸ್ಲಾಂ ಕುಟುಂಬದಲ್ಲಿ ಬೆಳೆದವಳು. ನಾನು ಹಿಜಾಬ್​ ಹಾಕಲ್ಲ. ಹಾಗಂತ ನಾನು ಹಿಬಾಬ್ ಹಾಕುವವರ ವಿರೋಧಿ ಕೂಡ ಅಲ್ಲ. ಬಟ್ಟೆ ಎಂಬುದು ಅವರವರ ವೈಯಕ್ತಿಕ ವಿಚಾರ. ನಾನು ಹಿಜಾಬ್​ ಹಾಕಲ್ಲ ಅಂತ ಅನೇಕ ಪರ-ವಿರೋಧ ಚರ್ಚೆ ನಡೆದಿದೆ. ನನ್ನ ನಿಲುವು ಏನೆಂದರೆ, ಹಿಜಾಬ್​ ಅಥವಾ ಯಾವುದೇ ಬಟ್ಟೆ ಆದರೂ ಇದನ್ನು ಹಾಕಬೇಕು-ಹಾಕಬಾರದು ಎಂದು ಒತ್ತಾಯ ಮಾಡುವ ಹಕ್ಕು ಯಾರಿಗೂ ಇಲ್ಲ. ಅದು ಆ ವ್ಯಕ್ತಿಯ ಸ್ವಾತಂತ್ರ್ಯ’ ಎಂದು ಗಾಯಕಿ ಸುಹಾನಾ ಸೈಯದ್ ಇತ್ತೀಚೆಗೆ​​ ಹೇಳಿದ್ದರು.

ಇದನ್ನೂ ಓದಿ:

ಹಿಜಾಬ್​ ಮುಖ್ಯ ಅಲ್ಲ; ಶಿಕ್ಷಣ ಎಲ್ಲದನ್ನ ಮೀರಿದೆ -ಗಾಯಕಿ ಸುಹಾನಾ ಸೈಯದ್

ಹಿಜಾಬ್‌ ವಿವಾದದ ಅತಿದೊಡ್ಡ ಎಕ್ಸ್‌ಕ್ಲೂಸಿವ್‌ ಸುದ್ದಿ: ನವೆಂಬರ್ ತಿಂಗಳಲ್ಲೇ ನಡೆದಿತ್ತು ಹಿಜಾಬ್ ವಿವಾದಕ್ಕೆ ಮಾಸ್ಟರ್ ಪ್ಲಾನ್!?

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್