Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಒಳಗೇ ಇದ್ದ ಕಳ್ಳರು; ಸೋನಂ ಕಪೂರ್​ ನಿವಾಸದಿಂದ ಕೋಟಿಕೋಟಿ ಕದ್ದವರು ಅರೆಸ್ಟ್​

ಹರೀಶ್ ಅಹುಜಾ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಅವರು ವಂಚನೆಗೆ ಒಳಗಾಗಿದ್ದರು. ಆನಂದ್ ಅವರಿಗೆ 27 ಕೋಟಿ ರೂಪಾಯಿ ವಂಚನೆ ನಡೆದಿತ್ತು.

ಮನೆ ಒಳಗೇ ಇದ್ದ ಕಳ್ಳರು; ಸೋನಂ ಕಪೂರ್​ ನಿವಾಸದಿಂದ ಕೋಟಿಕೋಟಿ ಕದ್ದವರು ಅರೆಸ್ಟ್​
ಸೋನಮ್​ ಕಪೂರ್​, ಆನಂದ್​ ಅಹುಜಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 13, 2022 | 5:38 PM

ಸೋನಂ ಕಪೂರ್ (Sonam Kapoor) ಹಾಗೂ ಆನಂದ್ ಅಹುಜಾ (Anand Ahuja) ದೆಹಲಿ ನಿವಾಸದಲ್ಲಿ ಕಳ್ಳತನವಾಗಿತ್ತು. ಅತ್ಯಮೂಲ್ಯ ವಸ್ತುಗಳು ಹಾಗೂ ನಗದನ್ನು ಕದ್ದೊಯ್ಯಲಾಗಿತ್ತು. ಈ ಕುರಿತಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿತ್ತು. ಈ ದಂಪತಿ ಕುಟುಂಬದವರು ಕೋಟ್ಯಂತರ ರೂಪಾಯಿ ನಗದು ಹಾಗೂ ಜ್ಯುವೆಲರಿಗಳನ್ನು ಕಳೆದುಕೊಂಡಿದ್ದರು. ಈಗ ತನಿಖೆ ವೇಳೆ ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಇವರ ಮನೆಯಲ್ಲಿ ನರ್ಸ್​ ಆಗಿದ್ದ ಅಪರ್ಣಾ ವಿಲ್ಸನ್ ಹಾಗೂ ಅವಳ ಗಂಡ ನರೇಶ್ ಕುಮಾರ್ ಈ ಕಳ್ಳತನ ಮಾಡಿದ್ದರು. ಅವರು ಈಗ ಜೈಲು ಪಾಲಾಗಿದ್ದಾರೆ.

ದೆಹಲಿ ಮನೆಯಲ್ಲಿ ಸೋನಂ ವಾಸ ಮಾಡುತ್ತಿಲ್ಲ. ಆದರೆ, ಅವರ ಮಾವ ಹರೀಶ್ ಅಹುಜಾ ಹಾಗೂ ಅವರ ಅತ್ತೆ ಪ್ರಿಯಾ ಅಹುಜಾ ವಾಸವಾಗಿದ್ದಾರೆ. ಇವರ ಜತೆಗೆ ಆನಂದ್​ ಅವರ ಅಜ್ಜಿ ಸರಳಾ ಅಹುಜಾ ಕೂಡ ಇವರ ಜತೆಗೇ ಇದ್ದಾರೆ. ಇತ್ತೀಚೆಗೆ ಪ್ರಿಯಾ ಅವರು ಕಬೋರ್ಡ್​ ತೆಗೆದು ನೋಡಿದ್ದರು. ಈ ವೇಳೆ ಜ್ಯುವೆಲರಿ ಹಾಗೂ ನಗದು ಕಾಣೆ ಆಗಿರುವುದು ಗಮನಕ್ಕೆ ಬಂದಿತ್ತು. ಕಳೆದ ಎರಡು ವರ್ಷಗಳಿಂದ ಕೊವಿಡ್ ಇದ್ದ ಕಾರಣ ಪ್ರಿಯಾ ಹೆಚ್ಚು ಸುತ್ತಾಟ ನಡೆಸಿಲ್ಲ. ಈ ಕಾರಣಕ್ಕೆ ಅವರು ಜ್ಯುವೆಲರಿ ಬಳಕೆ ಮಾಡಿರಲಿಲ್ಲ. ಜ್ಯುವೆಲರಿ ಇರುವ ಕಬೋರ್ಡ್​ ಕೊನೆಯ ಬಾರಿ ತಾವು ​ಪರಿಶೀಲಿಸಿದ್ದು ಎರಡು ವರ್ಷಗಳ ಹಿಂದೆ ಎಂದು ಅವರು ಹೇಳಿಕೊಂಡಿದ್ದರು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ದೆಹಲಿ ಮನೆಯಲ್ಲಿ 25 ಜನರನ್ನು ಕೆಲಸಕ್ಕೆ ಇಟ್ಟುಕೊಳ್ಳಲಾಗಿದೆ. ಈ ಪೈಕಿ ಅಪರ್ಣಾ ಈ ಕಳ್ಳತನದ ಮುಖ್ಯ ರುವಾರಿ. ಈಕೆ ಪ್ರಿಯಾ ಅಹುಜಾ ಅವರ ಆರೈಕೆ ನೋಡಿಕೊಳ್ಳೋಕೆ ಇವರ ಮನೆಯಲ್ಲಿ ವಾಸವಾಗಿದ್ದಳು.  ಅವಳು ಈ ಹಣ ಹಾಗೂ ಚಿನ್ನವನ್ನು ಕದ್ದಿದ್ದಳು. ಈ ಕೃತ್ಯಕ್ಕೆ ಅವಳ ಪತಿ ಸುರೇಶ್ ಸಹಾಯ ಮಾಡಿದ್ದ.

ಹರೀಶ್ ಅಹುಜಾ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಅವರು ವಂಚನೆಗೆ ಒಳಗಾಗಿದ್ದರು. ಆನಂದ್ ಅವರಿಗೆ 27 ಕೋಟಿ ರೂಪಾಯಿ ವಂಚನೆ ನಡೆದಿತ್ತು. ಈ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿತ್ತು.

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಗುತ್ತಿದೆ. ಪ್ರೆಗ್ನೆನ್ಸಿ​ ಫೋಟೋ ಹಂಚಿಕೊಂಡು ಸೋನಂ​ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಹೊಸ ರೀತಿಯಲ್ಲಿ ಪ್ರೆಗ್ನೆನ್ಸಿ ಫೋಟೋಶೂಟ್​ ಮಾಡಿಸಿ ಗಮನ ಸೆಳೆದ ಸೋನಂ ಕಪೂರ್

ಸೋನಂ ಕಪೂರ್ ಮಾವನಿಗೆ ಬರೋಬ್ಬರಿ ₹ 27 ಕೋಟಿ ವಂಚಿಸಿದ್ದ ಸೈಬರ್ ವಂಚಕರ ಬಂಧನ; ಓರ್ವ ಆರೋಪಿ ಕರ್ನಾಟಕದವನು!

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?