ಮನೆ ಒಳಗೇ ಇದ್ದ ಕಳ್ಳರು; ಸೋನಂ ಕಪೂರ್​ ನಿವಾಸದಿಂದ ಕೋಟಿಕೋಟಿ ಕದ್ದವರು ಅರೆಸ್ಟ್​

ಹರೀಶ್ ಅಹುಜಾ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಅವರು ವಂಚನೆಗೆ ಒಳಗಾಗಿದ್ದರು. ಆನಂದ್ ಅವರಿಗೆ 27 ಕೋಟಿ ರೂಪಾಯಿ ವಂಚನೆ ನಡೆದಿತ್ತು.

ಮನೆ ಒಳಗೇ ಇದ್ದ ಕಳ್ಳರು; ಸೋನಂ ಕಪೂರ್​ ನಿವಾಸದಿಂದ ಕೋಟಿಕೋಟಿ ಕದ್ದವರು ಅರೆಸ್ಟ್​
ಸೋನಮ್​ ಕಪೂರ್​, ಆನಂದ್​ ಅಹುಜಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 13, 2022 | 5:38 PM

ಸೋನಂ ಕಪೂರ್ (Sonam Kapoor) ಹಾಗೂ ಆನಂದ್ ಅಹುಜಾ (Anand Ahuja) ದೆಹಲಿ ನಿವಾಸದಲ್ಲಿ ಕಳ್ಳತನವಾಗಿತ್ತು. ಅತ್ಯಮೂಲ್ಯ ವಸ್ತುಗಳು ಹಾಗೂ ನಗದನ್ನು ಕದ್ದೊಯ್ಯಲಾಗಿತ್ತು. ಈ ಕುರಿತಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿತ್ತು. ಈ ದಂಪತಿ ಕುಟುಂಬದವರು ಕೋಟ್ಯಂತರ ರೂಪಾಯಿ ನಗದು ಹಾಗೂ ಜ್ಯುವೆಲರಿಗಳನ್ನು ಕಳೆದುಕೊಂಡಿದ್ದರು. ಈಗ ತನಿಖೆ ವೇಳೆ ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಇವರ ಮನೆಯಲ್ಲಿ ನರ್ಸ್​ ಆಗಿದ್ದ ಅಪರ್ಣಾ ವಿಲ್ಸನ್ ಹಾಗೂ ಅವಳ ಗಂಡ ನರೇಶ್ ಕುಮಾರ್ ಈ ಕಳ್ಳತನ ಮಾಡಿದ್ದರು. ಅವರು ಈಗ ಜೈಲು ಪಾಲಾಗಿದ್ದಾರೆ.

ದೆಹಲಿ ಮನೆಯಲ್ಲಿ ಸೋನಂ ವಾಸ ಮಾಡುತ್ತಿಲ್ಲ. ಆದರೆ, ಅವರ ಮಾವ ಹರೀಶ್ ಅಹುಜಾ ಹಾಗೂ ಅವರ ಅತ್ತೆ ಪ್ರಿಯಾ ಅಹುಜಾ ವಾಸವಾಗಿದ್ದಾರೆ. ಇವರ ಜತೆಗೆ ಆನಂದ್​ ಅವರ ಅಜ್ಜಿ ಸರಳಾ ಅಹುಜಾ ಕೂಡ ಇವರ ಜತೆಗೇ ಇದ್ದಾರೆ. ಇತ್ತೀಚೆಗೆ ಪ್ರಿಯಾ ಅವರು ಕಬೋರ್ಡ್​ ತೆಗೆದು ನೋಡಿದ್ದರು. ಈ ವೇಳೆ ಜ್ಯುವೆಲರಿ ಹಾಗೂ ನಗದು ಕಾಣೆ ಆಗಿರುವುದು ಗಮನಕ್ಕೆ ಬಂದಿತ್ತು. ಕಳೆದ ಎರಡು ವರ್ಷಗಳಿಂದ ಕೊವಿಡ್ ಇದ್ದ ಕಾರಣ ಪ್ರಿಯಾ ಹೆಚ್ಚು ಸುತ್ತಾಟ ನಡೆಸಿಲ್ಲ. ಈ ಕಾರಣಕ್ಕೆ ಅವರು ಜ್ಯುವೆಲರಿ ಬಳಕೆ ಮಾಡಿರಲಿಲ್ಲ. ಜ್ಯುವೆಲರಿ ಇರುವ ಕಬೋರ್ಡ್​ ಕೊನೆಯ ಬಾರಿ ತಾವು ​ಪರಿಶೀಲಿಸಿದ್ದು ಎರಡು ವರ್ಷಗಳ ಹಿಂದೆ ಎಂದು ಅವರು ಹೇಳಿಕೊಂಡಿದ್ದರು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ದೆಹಲಿ ಮನೆಯಲ್ಲಿ 25 ಜನರನ್ನು ಕೆಲಸಕ್ಕೆ ಇಟ್ಟುಕೊಳ್ಳಲಾಗಿದೆ. ಈ ಪೈಕಿ ಅಪರ್ಣಾ ಈ ಕಳ್ಳತನದ ಮುಖ್ಯ ರುವಾರಿ. ಈಕೆ ಪ್ರಿಯಾ ಅಹುಜಾ ಅವರ ಆರೈಕೆ ನೋಡಿಕೊಳ್ಳೋಕೆ ಇವರ ಮನೆಯಲ್ಲಿ ವಾಸವಾಗಿದ್ದಳು.  ಅವಳು ಈ ಹಣ ಹಾಗೂ ಚಿನ್ನವನ್ನು ಕದ್ದಿದ್ದಳು. ಈ ಕೃತ್ಯಕ್ಕೆ ಅವಳ ಪತಿ ಸುರೇಶ್ ಸಹಾಯ ಮಾಡಿದ್ದ.

ಹರೀಶ್ ಅಹುಜಾ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಅವರು ವಂಚನೆಗೆ ಒಳಗಾಗಿದ್ದರು. ಆನಂದ್ ಅವರಿಗೆ 27 ಕೋಟಿ ರೂಪಾಯಿ ವಂಚನೆ ನಡೆದಿತ್ತು. ಈ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿತ್ತು.

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಗುತ್ತಿದೆ. ಪ್ರೆಗ್ನೆನ್ಸಿ​ ಫೋಟೋ ಹಂಚಿಕೊಂಡು ಸೋನಂ​ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಹೊಸ ರೀತಿಯಲ್ಲಿ ಪ್ರೆಗ್ನೆನ್ಸಿ ಫೋಟೋಶೂಟ್​ ಮಾಡಿಸಿ ಗಮನ ಸೆಳೆದ ಸೋನಂ ಕಪೂರ್

ಸೋನಂ ಕಪೂರ್ ಮಾವನಿಗೆ ಬರೋಬ್ಬರಿ ₹ 27 ಕೋಟಿ ವಂಚಿಸಿದ್ದ ಸೈಬರ್ ವಂಚಕರ ಬಂಧನ; ಓರ್ವ ಆರೋಪಿ ಕರ್ನಾಟಕದವನು!

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ