AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ರೈಲ್ವೆ ಅಧಿಕಾರಿಗಳ ಬಳಿ ಕ್ಷಮೆ ಕೇಳಿದ ಸೋನು ಸೂದ್​; ನಟ ಮಾಡಿದ ತಪ್ಪೇನು?

Sonu Sood Viral Video | Indian Railways: ಸೋನು ಸೂದ್​ ಅವರ ವೈರಲ್​ ವಿಡಿಯೋ ಕಂಡು ರೈಲ್ವೆ ಅಧಿಕಾರಿಗಳು ಬುದ್ಧಿಮಾತು ಹೇಳಿದ್ದಾರೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದು, ಟ್ವಿಟರ್​ ಮೂಲಕ ಕ್ಷಮೆ ಕೇಳಿದ್ದಾರೆ.

Sonu Sood: ರೈಲ್ವೆ ಅಧಿಕಾರಿಗಳ ಬಳಿ ಕ್ಷಮೆ ಕೇಳಿದ ಸೋನು ಸೂದ್​; ನಟ ಮಾಡಿದ ತಪ್ಪೇನು?
ಸೋನು ಸೂದ್
TV9 Web
| Edited By: |

Updated on: Jan 06, 2023 | 7:30 AM

Share

ಬಹುಭಾಷಾ ನಟ ಸೋನು ಸೂದ್​ (Sonu Sood) ಅವರು ‘ರಿಯಲ್​ ಹೀರೋ’ ಎಂದೇ ಫೇಮಸ್​ ಆಗಿದ್ದಾರೆ. ಅವರ ಕಾರ್ಯಗಳು ಅನೇಕರಿಗೆ ಸ್ಫೂರ್ತಿ ನೀಡುತ್ತವೆ. ಮೊದಲ ಲಾಕ್​ ಡೌನ್​ ಆರಂಭ ಆದಾಗಿನಿಂದ ಈ ತನಕವೂ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದಾರೆ. ಅವರಿಂದ ನೆರವು ಪಡೆದವರಿಗೆ ಲೆಕ್ಕವೇ ಇಲ್ಲ. ಆದರೆ ಇಷ್ಟೆಲ್ಲ ಒಳ್ಳೆಯ ಕೆಲಸ ಮಾಡಿದ ಅವರು ಒಂದು ತಪ್ಪು ಮಾಡಿದ್ದಾರೆ. ಅದಕ್ಕಾಗಿ ರೈಲ್ವೆ (Indian Railways) ಇಲಾಖೆಯ ಅಧಿಕಾರಿಗಳ ಬಳಿ ಅವರು ಕ್ಷಮೆ ಕೇಳಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ತಪ್ಪನ್ನು ಸೋನು ಸೂದ್​ ಒಪ್ಪಿಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಈ ಸ್ಟೋರಿ ಓದಿ..

ಕೆಲವೇ ದಿನಗಳ ಹಿಂದೆ ಸೋನು ಸೂದ್​ ಅವರು ಒಂದು ವಿಡಿಯೋ ಪೋಸ್ಟ್​ ಮಾಡಿದ್ದರು. ರೈಲು ಬೋಗಿಯ ಮೆಟ್ಟಿಲಿನ ಸಮೀಪದಲ್ಲಿ ಅವರು ಕುಳಿತುಕೊಂಡಿದ್ದರು. ರೈಲು ಜೋರಾಗಿ ಚಲಿಸುತ್ತಿರುವಾಗ ತುದಿಗಾಲಿನಲ್ಲಿ ಕುಳಿತು ಅವರು ವಿಡಿಯೋಗೆ ಪೋಸ್​ ನೀಡಿದ್ದರು. ಆ ವಿಡಿಯೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು​ ಹಂಚಿಕೊಂಡಿದ್ದರು. ಅದಕ್ಕೆ ರೈಲ್ವೆ ಅಧಿಕಾರಿಗಳು ಈಗ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
ಕೆಟ್ಟ ಹಿಂದಿ ಚಿತ್ರಗಳನ್ನು ಮಾಡದಂತೆ ಸೌತ್​ ನನ್ನನ್ನು ಉಳಿಸುತ್ತಿದೆ ಎಂದ ಸೋನು ಸೂದ್
Image
Sonu Sood: ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಸೋನು ಸೂದ್​ಗೆ ಹಣ ಬರೋದು ಎಲ್ಲಿಂದ? ಪೂರ್ತಿ ವಿವರ ನೀಡಿದ ನಟ
Image
ಬಿಯರ್​ ದಾನ ಮಾಡಿ ಎಂದು ಸೋನು ಸೂದ್​ಗೆ ಮನವಿ ಮಾಡಿದ ಭೂಪ; ರಿಯಲ್​ ಹೀರೋ ಉತ್ತರ ಏನು?
Image
ಕಾಂಗ್ರೆಸ್​ ಸೇರಿದ ತಂಗಿ ಪರ ಪ್ರಚಾರಕ್ಕೆ ಇಳಿದ ಸೋನು ಸೂದ್​; ನೀವು ಮಾತು ತಪ್ಪಿದಿರಿ ಎಂದ ಫ್ಯಾನ್ಸ್​

ಇದನ್ನೂ ಓದಿ: Graduate Chaiwali: ಟೀ ಮಾರುವ ‘ಪದವೀಧರೆ ಚಾಯ್​ವಾಲಿ’ ಪ್ರಿಯಾಂಕಾ ಗುಪ್ತಾ ಕಣ್ಣೀರಿಗೆ ಕರಗಿದ ಸೋನು ಸೂದ್​

‘ಸೋನು ಸೂದ್ ಅವರೇ, ಲಕ್ಷಾಂತರ ಜನರಿಗೆ ನೀವು ಮಾದರಿ ವ್ಯಕ್ತಿ ಆಗಿದ್ದೀರಿ. ರೈಲಿನ ಮೆಟ್ಟಿಲುಗಳಲ್ಲಿ ಕುಳಿತು ಪ್ರಯಾಣಿಸುವುದು ಆಪಾಯಕಾರಿ. ಇಂಥ ವಿಡಿಯೋ ನಿಮ್ಮ ಅಭಿಮಾನಿಗಳಿಗೆ ತಪ್ಪು ಸಂದೇಶ ನೀಡುತ್ತದೆ. ಈ ರೀತಿ ಮಾಡಬೇಡಿ. ಸುರಕ್ಷಿತ ಪ್ರಯಾಣವನ್ನು ಎಂಜಾಯ್​ ಮಾಡಿ’ ಎಂದು ರೈಲ್ವೆ ಅಧಿಕಾರಿಗಳು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ರಕ್ತದಲ್ಲಿ ಚಿತ್ರ ಬಿಡಿಸಿ ಸೋನು ಸೂದ್​ಗೆ ನೀಡಿದ ಕಲಾವಿದ; ಅಂದುಕೊಂಡಿದ್ದೇ ಒಂದು ಆಗಿದ್ದೇ ಇನ್ನೊಂದು

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸೋನು ಸೂದ್​ ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕ್ಷಮೆ ಕೇಳುತ್ತೇನೆ. ರೈಲಿನ ಬಾಗಿಲಿನಲ್ಲಿ ಜೀವನ ಕಳೆಯುವ ಲಕ್ಷಾಂತರ ಬಡ ಜನರ ಭಾವನೆಯನ್ನು ತಿಳಿದುಕೊಳ್ಳಲು ನಾನು ಅಲ್ಲಿ ಕುಳಿತೆ. ಈ ಸಂದೇಶಕ್ಕಾಗಿ ಮತ್ತು ರೈಲಿನಲ್ಲಿ ಹಲವು ವ್ಯವಸ್ಥೆ ಮಾಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ.

ಜನರ ದೃಷ್ಟಿಯಲ್ಲಿ ಸೋನು ಸೂದ್​ ಅವರು ರಿಯಲ್​ ಹೀರೋ ಆಗಿದ್ದಾರೆ. ಲಾಕ್​ ಡೌನ್​ ಸಮಯದಲ್ಲಿ ಬಡವರಿಗೆ ಸಹಾಯ ಮಾಡುವ ಮೂಲಕ ಅವರು ಜನರ ಹೃದಯ ಗೆದ್ದರು. ಈಗಲೂ ತಮ್ಮ ಚಾರಿಟಿ ಫೌಂಡೇಷನ್​ ಮೂಲಕ ಅನೇಕರಿಗೆ ಸಹಾಯ ಮಾಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರ ಇಮೇಜ್​ ಬದಲಾಗಿದೆ. ಮೊದಲೆಲ್ಲ ವಿಲನ್​ ಪಾತ್ರ ಮಾಡುತ್ತಿದ್ದ ಅವರು ಈಗ ಅಂಥ ಪಾತ್ರಗಳಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲ. ಅವರನ್ನು ನೆಗೆಟಿವ್​ ಪಾತ್ರದಲ್ಲಿ ನೋಡಲು ಜನರು ಇಷ್ಟಪಡುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!