Sonu Sood: ರೈಲ್ವೆ ಅಧಿಕಾರಿಗಳ ಬಳಿ ಕ್ಷಮೆ ಕೇಳಿದ ಸೋನು ಸೂದ್​; ನಟ ಮಾಡಿದ ತಪ್ಪೇನು?

Sonu Sood Viral Video | Indian Railways: ಸೋನು ಸೂದ್​ ಅವರ ವೈರಲ್​ ವಿಡಿಯೋ ಕಂಡು ರೈಲ್ವೆ ಅಧಿಕಾರಿಗಳು ಬುದ್ಧಿಮಾತು ಹೇಳಿದ್ದಾರೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದು, ಟ್ವಿಟರ್​ ಮೂಲಕ ಕ್ಷಮೆ ಕೇಳಿದ್ದಾರೆ.

Sonu Sood: ರೈಲ್ವೆ ಅಧಿಕಾರಿಗಳ ಬಳಿ ಕ್ಷಮೆ ಕೇಳಿದ ಸೋನು ಸೂದ್​; ನಟ ಮಾಡಿದ ತಪ್ಪೇನು?
ಸೋನು ಸೂದ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 06, 2023 | 7:30 AM

ಬಹುಭಾಷಾ ನಟ ಸೋನು ಸೂದ್​ (Sonu Sood) ಅವರು ‘ರಿಯಲ್​ ಹೀರೋ’ ಎಂದೇ ಫೇಮಸ್​ ಆಗಿದ್ದಾರೆ. ಅವರ ಕಾರ್ಯಗಳು ಅನೇಕರಿಗೆ ಸ್ಫೂರ್ತಿ ನೀಡುತ್ತವೆ. ಮೊದಲ ಲಾಕ್​ ಡೌನ್​ ಆರಂಭ ಆದಾಗಿನಿಂದ ಈ ತನಕವೂ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದಾರೆ. ಅವರಿಂದ ನೆರವು ಪಡೆದವರಿಗೆ ಲೆಕ್ಕವೇ ಇಲ್ಲ. ಆದರೆ ಇಷ್ಟೆಲ್ಲ ಒಳ್ಳೆಯ ಕೆಲಸ ಮಾಡಿದ ಅವರು ಒಂದು ತಪ್ಪು ಮಾಡಿದ್ದಾರೆ. ಅದಕ್ಕಾಗಿ ರೈಲ್ವೆ (Indian Railways) ಇಲಾಖೆಯ ಅಧಿಕಾರಿಗಳ ಬಳಿ ಅವರು ಕ್ಷಮೆ ಕೇಳಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ತಪ್ಪನ್ನು ಸೋನು ಸೂದ್​ ಒಪ್ಪಿಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಈ ಸ್ಟೋರಿ ಓದಿ..

ಕೆಲವೇ ದಿನಗಳ ಹಿಂದೆ ಸೋನು ಸೂದ್​ ಅವರು ಒಂದು ವಿಡಿಯೋ ಪೋಸ್ಟ್​ ಮಾಡಿದ್ದರು. ರೈಲು ಬೋಗಿಯ ಮೆಟ್ಟಿಲಿನ ಸಮೀಪದಲ್ಲಿ ಅವರು ಕುಳಿತುಕೊಂಡಿದ್ದರು. ರೈಲು ಜೋರಾಗಿ ಚಲಿಸುತ್ತಿರುವಾಗ ತುದಿಗಾಲಿನಲ್ಲಿ ಕುಳಿತು ಅವರು ವಿಡಿಯೋಗೆ ಪೋಸ್​ ನೀಡಿದ್ದರು. ಆ ವಿಡಿಯೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು​ ಹಂಚಿಕೊಂಡಿದ್ದರು. ಅದಕ್ಕೆ ರೈಲ್ವೆ ಅಧಿಕಾರಿಗಳು ಈಗ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
ಕೆಟ್ಟ ಹಿಂದಿ ಚಿತ್ರಗಳನ್ನು ಮಾಡದಂತೆ ಸೌತ್​ ನನ್ನನ್ನು ಉಳಿಸುತ್ತಿದೆ ಎಂದ ಸೋನು ಸೂದ್
Image
Sonu Sood: ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಸೋನು ಸೂದ್​ಗೆ ಹಣ ಬರೋದು ಎಲ್ಲಿಂದ? ಪೂರ್ತಿ ವಿವರ ನೀಡಿದ ನಟ
Image
ಬಿಯರ್​ ದಾನ ಮಾಡಿ ಎಂದು ಸೋನು ಸೂದ್​ಗೆ ಮನವಿ ಮಾಡಿದ ಭೂಪ; ರಿಯಲ್​ ಹೀರೋ ಉತ್ತರ ಏನು?
Image
ಕಾಂಗ್ರೆಸ್​ ಸೇರಿದ ತಂಗಿ ಪರ ಪ್ರಚಾರಕ್ಕೆ ಇಳಿದ ಸೋನು ಸೂದ್​; ನೀವು ಮಾತು ತಪ್ಪಿದಿರಿ ಎಂದ ಫ್ಯಾನ್ಸ್​

ಇದನ್ನೂ ಓದಿ: Graduate Chaiwali: ಟೀ ಮಾರುವ ‘ಪದವೀಧರೆ ಚಾಯ್​ವಾಲಿ’ ಪ್ರಿಯಾಂಕಾ ಗುಪ್ತಾ ಕಣ್ಣೀರಿಗೆ ಕರಗಿದ ಸೋನು ಸೂದ್​

‘ಸೋನು ಸೂದ್ ಅವರೇ, ಲಕ್ಷಾಂತರ ಜನರಿಗೆ ನೀವು ಮಾದರಿ ವ್ಯಕ್ತಿ ಆಗಿದ್ದೀರಿ. ರೈಲಿನ ಮೆಟ್ಟಿಲುಗಳಲ್ಲಿ ಕುಳಿತು ಪ್ರಯಾಣಿಸುವುದು ಆಪಾಯಕಾರಿ. ಇಂಥ ವಿಡಿಯೋ ನಿಮ್ಮ ಅಭಿಮಾನಿಗಳಿಗೆ ತಪ್ಪು ಸಂದೇಶ ನೀಡುತ್ತದೆ. ಈ ರೀತಿ ಮಾಡಬೇಡಿ. ಸುರಕ್ಷಿತ ಪ್ರಯಾಣವನ್ನು ಎಂಜಾಯ್​ ಮಾಡಿ’ ಎಂದು ರೈಲ್ವೆ ಅಧಿಕಾರಿಗಳು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ರಕ್ತದಲ್ಲಿ ಚಿತ್ರ ಬಿಡಿಸಿ ಸೋನು ಸೂದ್​ಗೆ ನೀಡಿದ ಕಲಾವಿದ; ಅಂದುಕೊಂಡಿದ್ದೇ ಒಂದು ಆಗಿದ್ದೇ ಇನ್ನೊಂದು

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸೋನು ಸೂದ್​ ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕ್ಷಮೆ ಕೇಳುತ್ತೇನೆ. ರೈಲಿನ ಬಾಗಿಲಿನಲ್ಲಿ ಜೀವನ ಕಳೆಯುವ ಲಕ್ಷಾಂತರ ಬಡ ಜನರ ಭಾವನೆಯನ್ನು ತಿಳಿದುಕೊಳ್ಳಲು ನಾನು ಅಲ್ಲಿ ಕುಳಿತೆ. ಈ ಸಂದೇಶಕ್ಕಾಗಿ ಮತ್ತು ರೈಲಿನಲ್ಲಿ ಹಲವು ವ್ಯವಸ್ಥೆ ಮಾಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ.

ಜನರ ದೃಷ್ಟಿಯಲ್ಲಿ ಸೋನು ಸೂದ್​ ಅವರು ರಿಯಲ್​ ಹೀರೋ ಆಗಿದ್ದಾರೆ. ಲಾಕ್​ ಡೌನ್​ ಸಮಯದಲ್ಲಿ ಬಡವರಿಗೆ ಸಹಾಯ ಮಾಡುವ ಮೂಲಕ ಅವರು ಜನರ ಹೃದಯ ಗೆದ್ದರು. ಈಗಲೂ ತಮ್ಮ ಚಾರಿಟಿ ಫೌಂಡೇಷನ್​ ಮೂಲಕ ಅನೇಕರಿಗೆ ಸಹಾಯ ಮಾಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರ ಇಮೇಜ್​ ಬದಲಾಗಿದೆ. ಮೊದಲೆಲ್ಲ ವಿಲನ್​ ಪಾತ್ರ ಮಾಡುತ್ತಿದ್ದ ಅವರು ಈಗ ಅಂಥ ಪಾತ್ರಗಳಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲ. ಅವರನ್ನು ನೆಗೆಟಿವ್​ ಪಾತ್ರದಲ್ಲಿ ನೋಡಲು ಜನರು ಇಷ್ಟಪಡುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ