Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮಾನವೀಯ ಕಾರ್ಯಗಳ ಮೂಲಕ ಸುದ್ದಿಯಾದ ಸೋನು; ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ ವಿಡಿಯೋ ವೈರಲ್ 

Sonu Sood: ಸೋನು ಸೂದ್ ಅವರ ಹೃದಯ ಶ್ರೀಮಂತಿಕೆ ಸಾರುವ ಮತ್ತೊಂದು ವಿಚಾರ ಬಹಿರಂಗವಾಗಿದೆ. ಈ ಸಂದರ್ಭದ ವಿಡಿಯೋವನ್ನು ಸೋನು ಸೂದ್ ಫೌಂಡೇಶನ್ ಹಂಚಿಕೊಂಡಿದೆ.

ಮತ್ತೆ ಮಾನವೀಯ ಕಾರ್ಯಗಳ ಮೂಲಕ ಸುದ್ದಿಯಾದ ಸೋನು; ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ ವಿಡಿಯೋ ವೈರಲ್ 
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುತ್ತಿರುವ ಸೋನು ಸೂದ್
Follow us
TV9 Web
| Updated By: shivaprasad.hs

Updated on: Feb 09, 2022 | 9:44 PM

ಬಹುಭಾಷಾ ನಟ ಸೋನು ಸೂದ್ (Sonu Sood) ತೆರೆಯ ಮೇಲೆ‌ ಖಳನಾಯಕನಾಗಿ ಅಬ್ಬರಿಸುತ್ತಾರೆ.‌ ಆದರೆ ನಿಜ‌ ಜೀವನದಲ್ಲಿ ಅವರನ್ನು ಹೀರೋ‌ ಎಂದು ಅಭಿಮಾನಿಗಳು ಗುರುತಿಸುತ್ತಾರೆ. ಇದಕ್ಕೆ‌ ಕಾರಣಗಳೂ ಇಲ್ಲದಿಲ್ಲ. ಸಹಾಯ ಕೇಳಿದವರಿಗೆ ಸೋನು ಇಲ್ಲ ಎಂದಿದ್ದೇ ಇಲ್ಲ. ತಮ್ಮದೇ ಫೌಂಡೇಶನ್ ಕೂಡ ಸ್ಥಾಪಿಸಿ ಅನೇಕರಿಗೆ ಅವರು ನೆರವು ನೀಡುತ್ತಿದ್ದಾರೆ. ಇದೀಗ ಸೋನು ಸೂದ್ ಅವರ ಹೃದಯ ಶ್ರೀಮಂತಿಕೆ ಸಾರುವ ಮತ್ತೊಂದು ವಿಚಾರ ಬಹಿರಂಗವಾಗಿದೆ. ಪಂಜಾಬ್​ನ ಮೊಗಾ ಸಮೀಪ ಅಪಘಾತವಾಗಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸೋನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ವರದಿಯಾಗಿದೆ. ಸೋನು ಸೂದ್ ಫೌಂಡೇಶನ್ (Sonu Sood Foundation) ಬುಧವಾರ ಸಂಜೆ ಈ ಕುರಿತು ವಿಡಿಯೋವನ್ನು ಹಂಚಿಕೊಂಡಿದೆ. ಅದರಲ್ಲಿ ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 19 ವರ್ಷದ ಯುವಕನನ್ನು ಸೋನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು ಸೆರೆಯಾಗಿದೆ.

ಎರಡು ಕಾರುಗಳು ಅಪಘಾತವಾಗಿ ಜಖಂಗೊಂಡಿದ್ದವು. ಸೋನು ಮತ್ತು ಅವರ ಗೆಳೆಯರು ಅಪಘಾತವಾಗಿದ್ದ ಗಾಡಿಯ ಒಳಗಿರುವವರನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಹಲವು ಪ್ರಯತ್ನಗಳ ನಂತರ ಅಂತಿಮವಾಗಿ ಸೋನು ಕಾರಿನ ಲಾಕ್ ತೆಗೆಯಲು ಯಶಸ್ವಿಯಾಗಿದ್ದಾರೆ. ಕಾರಿನ ಒಳಗಿದ್ದ ವ್ಯಕ್ತಿಯನ್ನು ಹೊರತೆಗೆದು ನಂತರ ತಮ್ಮ ಕಾರಿನತ್ತ ಸೋನು ಕರೆದೊಯ್ದಿದ್ದಾರೆ. ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ದಿರುವ ಸೋನು, ಚಿಕಿತ್ಸೆ ನೀಡಲು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಯ ವಿಡಿಯೋ ಕೂಡ ಹಂಚಿಕೊಳ್ಳಲಾಗಿದೆ. ಅದರಲ್ಲಿ ಗಾಯಗೊಂಡ ವ್ಯಕ್ತಿ ಸ್ಟ್ರೆಚರ್​ನಲ್ಲಿ ಮಲಗಿದ್ದಾನೆ. ಸೋನು ಕೂಡ ವಿಡಿಯೋದಲ್ಲಿರುವುದು ಕಂಡುಬಂದಿದೆ.ಆ ಸಂದರ್ಭ ಮಹಿಳೆಯೋರ್ವರು ಆಗಮಿಸಿದ್ದು, ಅವರಿಂದ ಎಲ್ಲವೂ ಸರಿಯಾಗಿದೆಯೇ ಎನ್ನುವುದನ್ನು ಸೋನು ಖಚಿತಪಡಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋವನ್ನು ಹಂಚಿಕೊಂಡಿರುವ ಸೋನು ಸೂದ್ ಫೌಂಡೇಶನ್, ‘ಪ್ರತೀ ಜೀವವೂ ಮುಖ್ಯವಾಗುತ್ತದೆ’ ಎಂದು ಬರೆದುಕೊಂಡಿದೆ.

ಸೋನು ಸೂದ್ ಫೌಂಡೇಶನ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಸೋನು ಸೂದ್​ ಸಾಕಷ್ಟು ಸಾಮಾಜಿಕ ಕೆಲಸಗಳ ಜಾವಾಬ್ದಾರಿ ತೆಗೆದುಕೊಂಡಿದ್ದಾರೆ. ಕೊವಿಡ್​ ಕಾಣಿಸಿಕೊಂಡ ನಂತರದಲ್ಲಿ ಅವರು ಮಾಡಿರುವ ಸೇವೆಗಳು ಒಂದೆರಡಲ್ಲ. ಆರಂಭದಲ್ಲಿ ಕೊರೊನಾ ತಂದ ಸಂಕಷ್ಟಗಳ ಬಗ್ಗೆ ಮಾತ್ರ ಅವರು ಸ್ಪಂದಿಸುತ್ತಿದ್ದರು. ಆ ಬಳಿಕ ಅವರ ಕೆಲಸದ ವ್ಯಾಪ್ತಿ ಹಿರಿದಾಯಿತು. ಪ್ರಸ್ತುತ ಹಲವು ರೂಪಗಳಲ್ಲಿ ಅವರು ಸಹಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಜನಪ್ರಿಯ ರಿಯಾಲಿಟಿ ಶೋನ ನಿರೂಪಣೆ ಜವಾಬ್ದಾರಿ ಹೊತ್ತ ಸೋನು ಸೂದ್​​; ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ ಶೂಟ್​

ತಾಯಿಯಾಗುತ್ತಿರುವ ಕಾಜಲ್​ಗೂ ಎದುರಾಯ್ತು ಬಾಡಿ ಶೇಮಿಂಗ್; ಕೀಳು ಮನಸ್ಥಿತಿಗಳಿಗೆ ನಟಿ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ?

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್