AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್​ಗೆ ಸಂಕಷ್ಟ; ನಟನ ವಿರುದ್ಧ ಜಾರಿ ಆಯ್ತು ಬಂಧನದ ವಾರಂಟ್

ಸೋನು ಸೂದ್ ಅವರ ವಿರುದ್ಧ ಲುಧಿಯಾನಾ ಕೋರ್ಟ್ 10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರಂಟ್ ಜಾರಿ ಮಾಡಿದೆ. ಕ್ರಿಪ್ಟೋ ಕರೆನ್ಸಿ ವಂಚನೆಯಲ್ಲಿ ಸಾಕ್ಷಿಯಾಗಿ ಕೋರ್ಟ್‌ಗೆ ಹಾಜರಾಗದ ಕಾರಣ ಈ ವಾರಂಟ್ ಜಾರಿಯಾಗಿದೆ. ಸೋನು ಸೂದ್ ಇತ್ತೀಚೆಗೆ ಖಳನಾಯಕನ ಪಾತ್ರಗಳಿಂದ ದೂರವಿದ್ದಾರೆ.

ಸೋನು ಸೂದ್​ಗೆ ಸಂಕಷ್ಟ; ನಟನ ವಿರುದ್ಧ ಜಾರಿ ಆಯ್ತು ಬಂಧನದ ವಾರಂಟ್
ಸೋನು ಸೂದ್
ರಾಜೇಶ್ ದುಗ್ಗುಮನೆ
|

Updated on:Feb 07, 2025 | 9:16 AM

Share

ನಟ ಸೋನು ಸೂದ್ ಅವರು ಸಾಕಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಗಮನ ಸೆಳೆದವರು. ಕೊವಿಡ್ ಬಳಿಕ ಸಾಮಾಜಿಕ ಕೆಲಸಗಳಲ್ಲಿ ಅವರು ತೊಡಗಿಕೊಳ್ಳುತ್ತಾ ಇದ್ದಾರೆ. ಈಗ ಅವರ ವಿರುದ್ಧ ಬಂಧನದ ವಾರಂಟ್ ಜಾರಿ ಆಗಿದೆ. 10 ಲಕ್ಷ ರೂಪಾಯಿ ಫ್ರಾಡ್​ ಕೇಸ್​ಗೆ ಸಂಬಂಧಿಸಿದಂತೆ ಲುಧಿಯಾನಾ ಕೋರ್ಟ್ ನಟನ ವಿರುದ್ಧ ವಾರಂಟ್ ಜಾರಿ ಮಾಡಿದೆ. ಇದರಿಂದ ಅವರಿಗೆ ಬಂಧನದ ಭೀತಿ ಶುರುವಾಗಿದೆ.

ಲುಧಿಯಾನಾ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ಅವರ ವಿರುದ್ಧ 10 ಲಕ್ಷ ರೂಪಾಯಿ ಫ್ರಾಡ್ ಮಾಡಿದ ಆರೋಪ ಹಾಕಿದ್ದರು. ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಈ ಮೋಸ ನಡೆದಿತ್ತು. ಈ ಪ್ರಕರಣದ ವಿಚಾರಣೆ ಲುಧಿಯಾನಾ ಕೋರ್ಟ್​ನಲ್ಲಿ ನಡೆಯುತ್ತಾ ಇತ್ತು. ಈ ಪ್ರಕರಣದಲ್ಲಿ ಸೋನು ಸೂದ್ ಅವರು ಸಾಕ್ಷಿ ಹೇಳಬೇಕಿತ್ತು. ಆದರೆ, ಅವರು ಪದೇ ಪದೇ ಸಮನ್ಸ್ ನೀಡಿದ ಹೊರತಾಗಿಯೂ ಕೋರ್ಟ್​ಗೆ ಬಂದಿಲ್ಲ. ಈ ಕಾರಣಕ್ಕೆ ಅವರ ವಿರುದ್ಧ ಬಂಧನದ ವಾರಂಟ್ ಜಾರಿ ಆಗಿದೆ.

ಇದನ್ನೂ ಓದಿ: ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್

ಆದೇಶದಲ್ಲಿ ಏನಿದೆ?

ಮುಂಬೈ ನಿವಾಸಿ ಸೋನು ಸೂದ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ, ಅವರು ಕೋರ್ಟ್​ಗೆ ಹಾಜರಾಗಿಲ್ಲ. ಹೀಗಾಗಿ ಅವರನ್ನು ಬಂಧಿಸಿ ಕೋರ್ಟ್​ ಎದುರು ತಂದು ನಿಲ್ಲಿಸಬೇಕು’ ಎಂದು ಲುಧಿಯಾನಾ ಕೋರ್ಟ್ ಮುಂಬೈ ಪೊಲೀಸರಿಗೆ ಸೂಚನೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 10ರಂದು ಇದೆ.

ಖಳನಾಯಕನ ಪಾತ್ರದಿಂದ ದೂರ

ಸೋನು ಸೂದ್ ಅವರು ಇತ್ತೀಚೆಗೆ ವಿಲನ್ ರೀತಿಯ ಪಾತ್ರಗಳಿಂದ ದೂರವೇ ಇದ್ದಾರೆ. ಅವರು ಈ ರೀತಿಯ ಪಾತ್ರಗಳನ್ನು ಸಿಕ್ಕರೆ ಒಪ್ಪುತ್ತಿಲ್ಲ. ಕೇವಲ ಹೀರೋ ಆಗಿ ಮಾತ್ರ ಅವರು ನಟಿಸುತ್ತಿದ್ದಾರೆ. ಆದರೆ, ಆ ರೀತಿಯ ಒಳ್ಳೆಯ ಪಾತ್ರಗಳು ಅವರನ್ನು ಹುಡುಕಿ ಬಂದಿಲ್ಲ. ಅವರು ಕನ್ನಡದಲ್ಲಿ ‘ವಿಷ್ಣುವರ್ಧನ’ ಚಿತ್ರದಲ್ಲಿ ನಟಿಸಿ ಗಮನ ಸೆಳೆದರು. ಇದರಲ್ಲಿ ಆದಿಶೇಷ ಹೆಸರಿನ ಖಡಕ್ ವಿಲನ್ ಪಾತ್ರ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:11 am, Fri, 7 February 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್