AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್​ಗೆ ಸಂಕಷ್ಟ; ನಟನ ವಿರುದ್ಧ ಜಾರಿ ಆಯ್ತು ಬಂಧನದ ವಾರಂಟ್

ಸೋನು ಸೂದ್ ಅವರ ವಿರುದ್ಧ ಲುಧಿಯಾನಾ ಕೋರ್ಟ್ 10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರಂಟ್ ಜಾರಿ ಮಾಡಿದೆ. ಕ್ರಿಪ್ಟೋ ಕರೆನ್ಸಿ ವಂಚನೆಯಲ್ಲಿ ಸಾಕ್ಷಿಯಾಗಿ ಕೋರ್ಟ್‌ಗೆ ಹಾಜರಾಗದ ಕಾರಣ ಈ ವಾರಂಟ್ ಜಾರಿಯಾಗಿದೆ. ಸೋನು ಸೂದ್ ಇತ್ತೀಚೆಗೆ ಖಳನಾಯಕನ ಪಾತ್ರಗಳಿಂದ ದೂರವಿದ್ದಾರೆ.

ಸೋನು ಸೂದ್​ಗೆ ಸಂಕಷ್ಟ; ನಟನ ವಿರುದ್ಧ ಜಾರಿ ಆಯ್ತು ಬಂಧನದ ವಾರಂಟ್
ಸೋನು ಸೂದ್
ರಾಜೇಶ್ ದುಗ್ಗುಮನೆ
|

Updated on:Feb 07, 2025 | 9:16 AM

Share

ನಟ ಸೋನು ಸೂದ್ ಅವರು ಸಾಕಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಗಮನ ಸೆಳೆದವರು. ಕೊವಿಡ್ ಬಳಿಕ ಸಾಮಾಜಿಕ ಕೆಲಸಗಳಲ್ಲಿ ಅವರು ತೊಡಗಿಕೊಳ್ಳುತ್ತಾ ಇದ್ದಾರೆ. ಈಗ ಅವರ ವಿರುದ್ಧ ಬಂಧನದ ವಾರಂಟ್ ಜಾರಿ ಆಗಿದೆ. 10 ಲಕ್ಷ ರೂಪಾಯಿ ಫ್ರಾಡ್​ ಕೇಸ್​ಗೆ ಸಂಬಂಧಿಸಿದಂತೆ ಲುಧಿಯಾನಾ ಕೋರ್ಟ್ ನಟನ ವಿರುದ್ಧ ವಾರಂಟ್ ಜಾರಿ ಮಾಡಿದೆ. ಇದರಿಂದ ಅವರಿಗೆ ಬಂಧನದ ಭೀತಿ ಶುರುವಾಗಿದೆ.

ಲುಧಿಯಾನಾ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ಅವರ ವಿರುದ್ಧ 10 ಲಕ್ಷ ರೂಪಾಯಿ ಫ್ರಾಡ್ ಮಾಡಿದ ಆರೋಪ ಹಾಕಿದ್ದರು. ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಈ ಮೋಸ ನಡೆದಿತ್ತು. ಈ ಪ್ರಕರಣದ ವಿಚಾರಣೆ ಲುಧಿಯಾನಾ ಕೋರ್ಟ್​ನಲ್ಲಿ ನಡೆಯುತ್ತಾ ಇತ್ತು. ಈ ಪ್ರಕರಣದಲ್ಲಿ ಸೋನು ಸೂದ್ ಅವರು ಸಾಕ್ಷಿ ಹೇಳಬೇಕಿತ್ತು. ಆದರೆ, ಅವರು ಪದೇ ಪದೇ ಸಮನ್ಸ್ ನೀಡಿದ ಹೊರತಾಗಿಯೂ ಕೋರ್ಟ್​ಗೆ ಬಂದಿಲ್ಲ. ಈ ಕಾರಣಕ್ಕೆ ಅವರ ವಿರುದ್ಧ ಬಂಧನದ ವಾರಂಟ್ ಜಾರಿ ಆಗಿದೆ.

ಇದನ್ನೂ ಓದಿ: ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್

ಆದೇಶದಲ್ಲಿ ಏನಿದೆ?

ಮುಂಬೈ ನಿವಾಸಿ ಸೋನು ಸೂದ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ, ಅವರು ಕೋರ್ಟ್​ಗೆ ಹಾಜರಾಗಿಲ್ಲ. ಹೀಗಾಗಿ ಅವರನ್ನು ಬಂಧಿಸಿ ಕೋರ್ಟ್​ ಎದುರು ತಂದು ನಿಲ್ಲಿಸಬೇಕು’ ಎಂದು ಲುಧಿಯಾನಾ ಕೋರ್ಟ್ ಮುಂಬೈ ಪೊಲೀಸರಿಗೆ ಸೂಚನೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 10ರಂದು ಇದೆ.

ಖಳನಾಯಕನ ಪಾತ್ರದಿಂದ ದೂರ

ಸೋನು ಸೂದ್ ಅವರು ಇತ್ತೀಚೆಗೆ ವಿಲನ್ ರೀತಿಯ ಪಾತ್ರಗಳಿಂದ ದೂರವೇ ಇದ್ದಾರೆ. ಅವರು ಈ ರೀತಿಯ ಪಾತ್ರಗಳನ್ನು ಸಿಕ್ಕರೆ ಒಪ್ಪುತ್ತಿಲ್ಲ. ಕೇವಲ ಹೀರೋ ಆಗಿ ಮಾತ್ರ ಅವರು ನಟಿಸುತ್ತಿದ್ದಾರೆ. ಆದರೆ, ಆ ರೀತಿಯ ಒಳ್ಳೆಯ ಪಾತ್ರಗಳು ಅವರನ್ನು ಹುಡುಕಿ ಬಂದಿಲ್ಲ. ಅವರು ಕನ್ನಡದಲ್ಲಿ ‘ವಿಷ್ಣುವರ್ಧನ’ ಚಿತ್ರದಲ್ಲಿ ನಟಿಸಿ ಗಮನ ಸೆಳೆದರು. ಇದರಲ್ಲಿ ಆದಿಶೇಷ ಹೆಸರಿನ ಖಡಕ್ ವಿಲನ್ ಪಾತ್ರ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:11 am, Fri, 7 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ