Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮಶ್ರೀ ಪ್ರಶಸ್ತಿ ಸಿಗದಿದ್ದಕ್ಕೆ ಸೋನು ಸೂದ್​ಗೆ ಬೇಸರ? ನಟನ ಪ್ರತಿಕ್ರಿಯೆ ಏನು?

ಸೋನುಗೆ ಪದ್ಮಶ್ರೀ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಸೋನು ಈ ಬಗ್ಗೆ ಹೇಳೋದೇ ಬೇರೆ.

ಪದ್ಮಶ್ರೀ ಪ್ರಶಸ್ತಿ ಸಿಗದಿದ್ದಕ್ಕೆ ಸೋನು ಸೂದ್​ಗೆ ಬೇಸರ? ನಟನ ಪ್ರತಿಕ್ರಿಯೆ ಏನು?
ನಟ ಸೋನು ಸೂದ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 13, 2021 | 4:10 PM

ನಾನಾ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದವರನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ (Padma Shri Award) ನೀಡಲಾಗುತ್ತದೆ. ಈ ಬಾರಿ ಸಿನಿಮಾ ಕ್ಷೇತ್ರದಿಂದ ಕಂಗನಾ ರಣಾವತ್ (Kangana Ranaut) ಮೊದಲಾದವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಕಂಗನಾಗೆ ಪ್ರಶಸ್ತಿ ನೀಡಿದ ಬಗ್ಗೆ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಈ ಮಧ್ಯೆ ಕೆಲವರು ತಮ್ಮ ನೆಚ್ಚಿನ ನಟನಿಗೆ ಈ ಅವಾರ್ಡ್​ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆ ಪೈಕಿ ಸೋನು ಸೂದ್​ (Sonu Sood) ಅಭಿಮಾನಿಗಳು ಕೂಡ ಹೌದು. ಕೊವಿಡ್​ ಕಾಣಿಸಿಕೊಂಡ ನಂತರ ಸೋನು ಅವರು ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದರು. ಸಾಕಷ್ಟು ಜನರ ಪಾಲಿಗೆ ಅಕ್ಷರಶಃ ದೇವರಾಗಿದ್ದಾರೆ ಸೋನು. ಇದೇ ಕಾರಣಕ್ಕೆ ಅವರ ಫೋಟೋವನ್ನು ಮನೆಯಲ್ಲಿಟ್ಟು ಪೂಜೆ ಮಾಡುವ ಅನೇಕರಿದ್ದಾರೆ. ಈಗ ತಮಗೆ ಪ್ರಶಸ್ತಿ ಸಿಗದೆ ಇರುವ ಬಗ್ಗೆ ಸೋನು ಮಾತನಾಡಿದ್ದಾರೆ.

ಸೋನುಗೆ ಪದ್ಮಶ್ರೀ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಸೋನು ಈ ಬಗ್ಗೆ ಹೇಳೋದೇ ಬೇರೆ. ‘ಪ್ರಾಮಾಣಿಕವಾಗಿ ಹೇಳೋದಾದರೆ ಇದನ್ನು ನಾನು ನಿರೀಕ್ಷಿಸಿರಲಿಲ್ಲ. ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ. ನನ್ನ ಮನೆಯ ಕೆಳಗೆ ನನ್ನನ್ನು ಭೇಟಿಯಾಗಲು ಈಗಲೂ ಜನರು ಕಾಯುತ್ತಿದ್ದಾರೆ’ ಎಂದಿದ್ದಾರೆ. ಈ ಮೂಲಕ ಜನರ ಅಭಿಮಾನ ಹಾಗೂ ಪ್ರೀತಿಯೇ ದೊಡ್ಡದು ಎಂಬುದು ರಿಯಲ್​ ಹೀರೋನ ಅಭಿಪ್ರಾಯ.

ಸೋನು ಸೂದ್​ ಈ ಮುಂದೆಯೂ ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶ ಇಟ್ಟುಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಅವರು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ‘ಜನರು ಸಹಾಯಕ್ಕಾಗಿ ನನ್ನ ಬಳಿಗೆ ಬರುವವರೆಗೂ, ಅವರಿಗೆ ನನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇನೆ. ನನ್ನ ಪ್ರಯತ್ನಗಳಿಗೆ ಮನ್ನಣೆ ಇದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಯಾರೋ ಗುರುತಿಸಬೇಕು ಎಂದು ನಾನು ಇದನ್ನು ಮಾಡುತ್ತಿಲ್ಲ. ನಾನು ಪ್ರತಿ ರಾತ್ರಿ ಚಿಂತೆ ಇಲ್ಲದೆ ಸುಖ ನಿದ್ರೆ ಪಡೆಯುತ್ತಿದ್ದೇನಲ್ಲ ಅದನ್ನು ಯಾರಿಂದಲೂ ವಿವರಿಸಲು ಸಾಧ್ಯವಿಲ್ಲ’ ಎಂದಿದ್ದಾರೆ ಸೋನು ಸೂದ್.

ಕೊವಿಡ್​ ಮೊದಲನೇ ಅಲೆ ಕಾಣಿಸಿಕೊಂಡ ನಂತರ ಸೋನು ಸೂದ್​ ಸಹಾಯಕ್ಕೆ ನಿಂತರು. ತಮ್ಮ ಸ್ವಂತ ದುಡಿಮೆಯಿಂದ ಜನರ ಸಹಾಯಕ್ಕೆ ಮುಂದಾದರು. ಈ ವರೆಗೆ ಲಕ್ಷಾಂತರ ಜನರಿಗೆ ಸೋನು ಅವರಿಂದ ಸಹಾಯ ಸಿಕ್ಕಿದೆ. ಸಿನಿಮಾಗಳಲ್ಲಿ ನೆಗೆಟಿವ್​ ರೋಲ್​ಗಳನ್ನು ಮಾಡುವುದಿಲ್ಲ ಎಂದು ಸೋನು ಹೇಳಿದ್ದಾರೆ.

ಇದನ್ನೂ ಓದಿ:  ‘2 ಬಾರಿ ರಾಜ್ಯಸಭಾ ಸದಸ್ಯನಾಗುವ ಚಾನ್ಸ್​​ ತಿರಸ್ಕರಿಸಿದ್ದೆ’; ತೆರಿಗೆ ವಂಚನೆ ಆರೋಪದ ಬಳಿಕ ಸೋನು ಸೂದ್​ ಹೇಳಿಕೆ

ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ