AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Graduate Chaiwali: ಟೀ ಮಾರುವ ‘ಪದವೀಧರೆ ಚಾಯ್​ವಾಲಿ’ ಪ್ರಿಯಾಂಕಾ ಗುಪ್ತಾ ಕಣ್ಣೀರಿಗೆ ಕರಗಿದ ಸೋನು ಸೂದ್​

Sonu Sood | Priyanka Gupta: ಪ್ರಿಯಾಂಕಾ ಗುಪ್ತಾ ಅವರ ವಿಡಿಯೋ ವೈರಲ್​ ಆಗಿದ್ದು, ಅದಕ್ಕೆ ಸೋನು ಸೂದ್​ ಪ್ರತಿಕ್ರಿಯಿಸಿದ್ದಾರೆ. ರಿಯಲ್​ ಹೀರೋ ಮಾಡಿದ ಸಹಾಯಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Graduate Chaiwali: ಟೀ ಮಾರುವ ‘ಪದವೀಧರೆ ಚಾಯ್​ವಾಲಿ’ ಪ್ರಿಯಾಂಕಾ ಗುಪ್ತಾ ಕಣ್ಣೀರಿಗೆ ಕರಗಿದ ಸೋನು ಸೂದ್​
ಪ್ರಿಯಾಂಕಾ ಗುಪ್ತಾ, ಸೋನು ಸೂದ್
TV9 Web
| Edited By: |

Updated on:Nov 21, 2022 | 7:48 AM

Share

ಅರ್ಥಶಾಸ್ತ್ರದಲ್ಲಿ ಪದವಿ ಶಿಕ್ಷಣ ಪಡೆದರೂ ಕೂಡ ಸೂಕ್ತ ಉದ್ಯೋಗ ಸಿಗದ ಕಾರಣ ತಮ್ಮದೇ ಟೀ ಅಂಗಡಿ ಶುರು ಮಾಡುವ ಮೂಲಕ ಫೇಮಸ್​ ಆದ ಪ್ರಿಯಾಂಕಾ ಗುಪ್ತಾ (Graduate Chaiwali) ಇತ್ತೀಚೆಗೆ ಕಣ್ಣೀರು ಹಾಕಿದ್ದರು. ಪಾಟ್ನಾ ಮಹಾನಗರ ಪಾಲಿಕೆಯ ಅಧಿಕಾರಿಗಳ ಟೀ ಅಂಗಡಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದರಿಂದ ನಮಗೆ ಎದುರಾಗಿರುವ ಅಸಹಾಯಕ ಪರಿಸ್ಥಿತಿಯನ್ನು ಅವರು ವಿಡಿಯೋ ಮೂಲಕ ವಿವರಿಸಿದ್ದರು. ಅವರ ಕಷ್ಟಕ್ಕೆ ಈಗ ಸೋನು ಸೂದ್​ ಸ್ಪಂದಿಸಿದ್ದಾರೆ. ಪ್ರಿಯಾಂಕಾ ಗುಪ್ತಾ (Priyanka Gupta) ಅವರು ಹೊಸದಾಗಿ ಟೀ ಅಂಗಡಿ ಹಾಕಲು ರಿಯಲ್​ ಹೀರೋ ಸಹಾಯ ಮಾಡಿದ್ದಾರೆ. ಶೀಘ್ರದಲ್ಲೇ ಅವರ ಹೊಸ ಟೀ ಸ್ಟಾಲ್​ ಕಾರ್ಯಾರಂಭ ಮಾಡಲಿದೆ. ಸೋನು ಸೂದ್​ (Sonu Sood) ಅವರ ಈ ಸಹಾಯಕ್ಕೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.

ಮೊದಲ ಬಾರಿ ಲಾಕ್​ ಡೌನ್ ಆರಂಭ ಆದಾಗಿನಿಂದಲೂ ಸೋನು ಸೂದ್​ ಅವರು ಜನರಿಗೆ ಸಹಾಯ ಮಾಡುತ್ತಾ ಬಂದಿದ್ದಾರೆ. ಕಷ್ಟದಲ್ಲಿ ಇರುವ ಜನರ ಕೈ ಹಿಡಿಯುವ ಮೂಲಕ ಅವರು ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಎಷ್ಟೋ ಜನರ ಸರ್ಜರಿಗೆ ನೆರವಾಗಿದ್ದಾರೆ. ಮನೆ ಇಲ್ಲದವರಿಗೆ ಆಶ್ರಯ ಒದಗಿಸಿದ್ದಾರೆ. ಸಾಕಷ್ಟು ಮಂದಿಯ ಶಿಕ್ಷಣಕ್ಕೆ ಹಣದ ಸಹಾಯ ಮಾಡಿದ್ದಾರೆ. ಈಗ ಅವರು ಪ್ರಿಯಾಂಕಾ ಗುಪ್ತಾಗೂ ನೆರವಿನ ಹಸ್ತ ಚಾಚಿದ್ದಾರೆ.

ಕಣ್ಣೀರು ಹಾಕಿದ್ದ ಪದವೀಧರೆ ಚಾಯ್​ವಾಲಿ:

ಇದನ್ನೂ ಓದಿ
Image
ಕೆಟ್ಟ ಹಿಂದಿ ಚಿತ್ರಗಳನ್ನು ಮಾಡದಂತೆ ಸೌತ್​ ನನ್ನನ್ನು ಉಳಿಸುತ್ತಿದೆ ಎಂದ ಸೋನು ಸೂದ್
Image
Sonu Sood: ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಸೋನು ಸೂದ್​ಗೆ ಹಣ ಬರೋದು ಎಲ್ಲಿಂದ? ಪೂರ್ತಿ ವಿವರ ನೀಡಿದ ನಟ
Image
ಬಿಯರ್​ ದಾನ ಮಾಡಿ ಎಂದು ಸೋನು ಸೂದ್​ಗೆ ಮನವಿ ಮಾಡಿದ ಭೂಪ; ರಿಯಲ್​ ಹೀರೋ ಉತ್ತರ ಏನು?
Image
ಕಾಂಗ್ರೆಸ್​ ಸೇರಿದ ತಂಗಿ ಪರ ಪ್ರಚಾರಕ್ಕೆ ಇಳಿದ ಸೋನು ಸೂದ್​; ನೀವು ಮಾತು ತಪ್ಪಿದಿರಿ ಎಂದ ಫ್ಯಾನ್ಸ್​

‘ನಾನು ಏನಾದರೂ ಡಿಫರೆಂಟ್​ ಆಗಿ ಮಾಡಬೇಕು ಎಂದು ನಿರ್ಧರಿಸಿದ್ದೆ. ಜನರು ಕೂಡ ಬೆಂಬಲ ನೀಡುತ್ತಿದ್ದರು. ಆದರೆ ಇದು ಬಿಹಾರ್​. ಇಲ್ಲಿ ಮಹಿಳೆಯರ ಸ್ಥಾನವನ್ನು ಅಡುಗೆ ಮನೆಗೆ ಸೀಮಿತಗೊಳಿಸಲಾಗಿದೆ. ಪಾಟ್ನಾದಲ್ಲಿ ಅನೇಕ ಅಕ್ರಮ ವ್ಯವಹಾರಗಳು ನಡೆಯುತ್ತಿವೆ. ಅದರ ವಿರುದ್ಧ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಆದರೆ ಒಬ್ಬಳು ಹುಡುಗಿ ತನ್ನ ಸ್ವಂತ ಬಿಸ್ನೆಸ್​ ಮಾಡಿದಾಗ ಪದೇ ಪದೇ ಅಡ್ಡಿಪಡಿಸುತ್ತಾರೆ’ ಎಂದು ಪ್ರಿಯಾಂಕಾ ಗುಪ್ತಾ ಕೆಲವೇ ದಿನಗಳ ಹಿಂದೆ ಕಣ್ಣೀರು ಹಾಕಿದ್ದರು.

ಸೋನು ಸೂದ್​ ಪ್ರತಿಕ್ರಿಯೆ:

ಪ್ರಿಯಾಂಕಾ ಗುಪ್ತಾ ಅವರ ವಿಡಿಯೋ ವೈರಲ್​ ಆಗಿದ್ದು, ಅದಕ್ಕೆ ಸೋನು ಸೂದ್​ ಪ್ರತಿಕ್ರಿಯಿಸಿದ್ದಾರೆ. ‘ಪ್ರಿಯಾಂಕಾ ಅವರ ಟೀ ಶಾಪ್​ಗೆ ವ್ಯವಸ್ಥೆ ಆಗಿದೆ. ಈಗ ಅವರನ್ನು ಎತ್ತಂಗಡಿ ಮಾಡಿಸಲು ಯಾರೂ ಬರುವುದಿಲ್ಲ. ಶೀಘ್ರವೇ ನಾನು ಬಿಹಾರಕ್ಕೆ ಬಂದು ಅವರ ಅಂಗಡಿಯಲ್ಲಿ ಟೀ ಸವಿಯುತ್ತೇನೆ’ ಎಂದು ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ.

ಈಗ ಬೇರೆ ಬೇರೆ ಕಡೆಗಳಲ್ಲಿ ತಮ್ಮ ಟೀ ಅಂಗಡಿಯ ಶಾಖೆ ಆರಂಭಿಸಲು ಪ್ರಿಯಾಂಕಾ ಗುಪ್ತಾ ಮುಂದಾಗಿದ್ದಾರೆ. ಅವರ ಈ ಕಾರ್ಯದಲ್ಲಿ ಕೈ ಜೋಡಿಸಲು ಅನೇಕರು ಆಸಕ್ತಿ ತೋರಿಸಿದ್ದಾರೆ. ಈ ಕುರಿತು ಪ್ರಿಯಾಂಕಾ ಮಾಡಿರುವ ಸೋಶಿಯಲ್​ ಮೀಡಿಯಾ ಪೋಸ್ಟ್​ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:48 am, Mon, 21 November 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ