AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ಸೋನು ಸೂದ್​ಗೆ ದೇವರು ಎಂದ ಅಭಿಮಾನಿ; ನಟನ ಉತ್ತರ ಏನು?

ಸೋನು ಸೂದ್ ಅವರು  ಟ್ವಿಟರ್​ನಲ್ಲಿ #AskSonu ಸೆಷನ್ ನಡೆಸಿದ್ದರು. ಈ ವೇಳೆ ಸೋನುಗೆ ಹಲವು ಪ್ರಶ್ನೆಗಳು ಎದುರಾಗಿವೆ. ಆಗ ಅಭಿಮಾನಿಯೋರ್ವ ಅಚ್ಚರಿಯ ಪ್ರಶ್ನೆ ಕೇಳಿದ್ದಾನೆ.

Sonu Sood: ಸೋನು ಸೂದ್​ಗೆ ದೇವರು ಎಂದ ಅಭಿಮಾನಿ; ನಟನ ಉತ್ತರ ಏನು?
ಸೋನು ಸೂದ್
ರಾಜೇಶ್ ದುಗ್ಗುಮನೆ
|

Updated on: Jun 27, 2023 | 7:11 AM

Share

ಕೊರೊನಾ ಸಮಯದಲ್ಲಿ ಆರಂಭವಾದ ನಟ ಸೋನು ಸೂದ್ (Sonu Sood) ಅವರ ಒಳ್ಳೆಯ ಕೆಲಸಗಳು ಈಗಲೂ ಮುಂದುವರಿದುಕೊಂಡು ಬಂದಿವೆ. ಬಡವರಿಗೆ, ಕಷ್ಟದಲ್ಲಿರುವವರಿಗೆ ಸೋನು ಸೂದ್ ಸಹಾಯ ಮಾಡುತ್ತಾ ಇದ್ದಾರೆ. ಇದರಿಂದ ಅನೇಕರು ಸೋನು ಸೂದ್ ಅವರನ್ನು ದೇವರು ಎಂದೇ ಪರಿಗಣಿಸಿದ್ದಾರೆ. ಆದರೆ, ಸೋನು ಸೂದ್ ಇದನ್ನು ಒಪ್ಪುತ್ತಿಲ್ಲ. ಜನರು ಎಷ್ಟೇ ಹೊಗಳಿದರೂ ಅವರಿಗೆ ಅದು ಇಷ್ಟ ಆಗುವುದಿಲ್ಲ. ಈಗ ಸೋನು ಸೂದ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ನನ್ನನ್ನು ದೇವರು ಎನ್ನಬೇಡಿ ಎಂದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನೇಕ ಸೆಲೆಬ್ರಿಟಿಗಳು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅಭಿಮಾನಿಗಳಿಂದ ಪ್ರಶ್ನೆ ಸ್ವೀಕರಿಸಲು ಬಯಸುತ್ತಾರೆ. ಅದೇ ರೀತಿ ಸೋನು ಸೂದ್ ಅವರು  ಟ್ವಿಟರ್​ನಲ್ಲಿ #AskSonu ಸೆಷನ್ ನಡೆಸಿದ್ದರು. ಈ ವೇಳೆ ಸೋನುಗೆ ಹಲವು ಪ್ರಶ್ನೆಗಳು ಎದುರಾಗಿವೆ. ಆಗ ಅಭಿಮಾನಿಯೋರ್ವ ಅಚ್ಚರಿಯ ಪ್ರಶ್ನೆ ಕೇಳಿದ್ದಾನೆ.

‘ಸೋನು ಅವರೇ ಜನರು ನಿಮ್ಮನ್ನು ದೇವರು ಎನ್ನುತ್ತಾರಲ್ಲ. ಆ ಬಗ್ಗೆ ಎರಡು ಮಾತು’ ಎಂದು ಅಭಿಮಾನಿ ಕೇಳಿದ್ದಾನೆ. ಇದಕ್ಕೆ ಸೋನು ಉತ್ತರಿಸಿದ್ದಾರೆ. ‘ನಾನು ಸಾಮಾನ್ಯ ಮನುಷ್ಯ. ಉಳಿದ ಸಾಮಾನ್ಯ ಜನರೊಂದಿಗೆ ಸಂಪರ್ಕ ಹೊಂದಲು ಬಯಸುತ್ತೇನೆ’ ಎಂದಿದ್ದಾರೆ ಸೋನು ಸೂದ್.

ಇದನ್ನೂ ಓದಿ: ಸೆಟ್​ನಲ್ಲಿ ದಕ್ಷಿಣ ಭಾರತದವರ ಈ ನಡೆಯಿಂದ ಸೋನು ಸೂದ್​ಗೆ ಆಗಿತ್ತು ಶಾಕ್

ಸೋನು ಅವರು ಸದ್ಯ ಹಿಮಾಚಲ ಪ್ರದೇಶದಲ್ಲಿ ಇದ್ದಾರೆ. ಅಲ್ಲಿಂದ ಅವರು ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಫಿಟ್​ನೆಸ್ ಕಾಯ್ದುಕೊಳ್ಳಲು ಏನು ಮಾಡುತ್ತಿದ್ದೇನೆ ಎಂಬುದನ್ನು ಅವರು ವಿಡಿಯೋ ಮೂಲಕ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಸೆಟ್​ನಲ್ಲಿ ದಕ್ಷಿಣ ಭಾರತದವರ ಈ ನಡೆಯಿಂದ ಸೋನು ಸೂದ್​ಗೆ ಆಗಿತ್ತು ಶಾಕ್

ಸೋನು ಸೂದ್ ಅವರು ‘ರೋಡೀಸ್ 19’ ಶೋನ ನಡೆಸಿಕೊಟ್ಟಿದ್ದರು. 2022ರ ಏಪ್ರಿಲ್ 8ಕ್ಕೆ ಈ ಶೋ ಆರಂಭ ಆಗಿತ್ತು. ಜುಲೈನಲ್ಲಿ ಇದು ಪೂರ್ಣಗೊಂಡಿತ್ತು. ಈ ಶೋ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ