AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

Sonu Sood: ಬಾಲಿವುಡ್ ನಟ ಸೋನು ಸೂದ್ ಟ್ವಿಟರ್ ಮುಖಾಂತರ ಸಾಮಾನ್ಯ ಜನರ ಕಷ್ಟಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಈಗಾಗಲೇ ಜನರು ಮೂರನೇ ಅಲೆಯನ್ನು ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್
ಸೋನು ಸೂದ್ (ಸಂಗ್ರಹ ಚಿತ್ರ)
shivaprasad.hs
|

Updated on: Sep 02, 2021 | 6:33 PM

Share

ಭಾರತ ಚಿತ್ರರಂಗದ ಖ್ಯಾತ ನಟ ಸೋನು ಸೂದ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಕೊರೊನಾ ಆಪತ್ಕಾಲದಲ್ಲಿ ಜನ ಸಾಮಾನ್ಯರಿಗೆ ನೀಡಿದ ನೆರವಿನ ಹಸ್ತದಿಂದ ಅವರು ಅಭಿಮಾನಿಗಳಿಗೆ ಮತ್ತಷ್ಟು ಆತ್ಮೀಯರಾದರು. ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯ ಮಾಡುವುದರಿಂದ ತೊಡಗಿ, ಹಿರಿಯರಿಗೆ ವೈದ್ಯಕೀಯ ಸಹಾಯ ಮಾಡುವವರೆಗೆ ನಾನಾ ವಿಧವಾಗಿ ಸೋನು ಜನ ಸಾಮಾನ್ಯರಿಗೆ ನೆರವಾಗಿದ್ದಾರೆ. ಇಂದು ಅವರು ಟ್ವೀಟ್ ಒಂದನ್ನು ಮಾಡಿದ್ದು, ಅದರಲ್ಲಿ ಕೊರೊನಾ ಮೂರನೇ ಅಲೆಯ ಕುರಿತು ಮಾತನಾಡಿದ್ದಾರೆ. ‘ನಾವು ಈಗಾಗಲೇ ಮೂರನೇ ಅಲೆಯಲ್ಲಿದ್ದೇವೆ’ ಎಂದಿದ್ದಾರೆ ಅವರು. ಜನರು ಸೋನು ಸೂದ್ ಕಾಳಜಿಗೆ ‘ನೀವು ಹೇಳುತ್ತಿರುವುದು ಸತ್ಯ’ ಎಂದಿದ್ದಾರೆ.

ಟ್ವೀಟ್ ಮುಖಾಂತರ ಸೋನು ಹಂಚಿಕೊಂಡ ಮಾಹಿತಿ ಪ್ರಶ್ನೋತ್ತರ ರೂಪದಲ್ಲಿದೆ. ಅನಾಮಿಕರೊಬ್ಬರು ಸೋನು ಅವರಿಗೆ ‘‘ಕೊರೊನಾ ಮೂರನೇ ಅಲೆ ಬರುತ್ತದೆ ಎಂದು ನಿಮಗನ್ನಿಸುತ್ತದೆಯೇ?’’ ಎಂದು ಕೇಳಿದ್ದಾರೆ. ಆಗ ಸೋನು ಅವರು, ‘‘ನಾವು ಈಗಾಗಲೇ ಮೂರನೇ ಅಲೆಯಲ್ಲಿದ್ದೇವೆ. ಬಡತನ ಮತ್ತು ನಿರುದ್ಯೋಗಗಳು ಮೂರನೇ ಅಲೆಯಷ್ಟೇ ಭೀಕರವಾಗಿ ಜನ ಸಾಮಾನ್ಯರಿಗೆ ಹೊಡೆತ ನೀಡಿದೆ’’ ಎಂದು ಉತ್ತರ ನೀಡಿದ್ದಾರೆ.

ಸೋನು ಸೂದ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಪ್ರಸ್ತುತ ಭಾರತ ಎದುರಿಸುತ್ತಿರುವ ಈ ಸಮಸ್ಯೆಗೆ ಸೋನು ಸೂದ್ ಪರಿಹಾರವನ್ನೂ ಸೂಚಿಸಿದ್ದಾರೆ. ‘‘ಜನರು ತಾವಾಗಿಯೇ ಮುಂದೆ ಬಂದು ಅಗತ್ಯವಿರುವವರಿಗೆ ಸಹಾಯ ಮಾಡಬೇಕು. ಹಾಗೆಯೇ ಉದ್ಯೋಗಗಳನ್ನೂ ನೀಡಬೇಕು’’ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:

Sidharth Shukla: ಸಿದ್ಧಾರ್ಥ್ ಶುಕ್ಲಾ ನಿಧನಕ್ಕೆ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಬಾಲಿವುಡ್ ತಾರೆಯರ ಸಂತಾಪ

ಸಾರ್ವಜನಿಕವಾಗಿ ಕೋಣ ಬಲಿಕೊಟ್ಟ ಸುದೀಪ್ ಫ್ಯಾನ್ಸ್​; ಅಭಿಮಾನದ ಹೆಸರಲ್ಲಿ ಪ್ರಾಣಿವಧೆ

(Sonu Sood says that poverty and unemployment are the third wave and common man’s are experiencing it)

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್