AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

Sonu Sood: ಬಾಲಿವುಡ್ ನಟ ಸೋನು ಸೂದ್ ಟ್ವಿಟರ್ ಮುಖಾಂತರ ಸಾಮಾನ್ಯ ಜನರ ಕಷ್ಟಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಈಗಾಗಲೇ ಜನರು ಮೂರನೇ ಅಲೆಯನ್ನು ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್
ಸೋನು ಸೂದ್ (ಸಂಗ್ರಹ ಚಿತ್ರ)
shivaprasad.hs
|

Updated on: Sep 02, 2021 | 6:33 PM

Share

ಭಾರತ ಚಿತ್ರರಂಗದ ಖ್ಯಾತ ನಟ ಸೋನು ಸೂದ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಕೊರೊನಾ ಆಪತ್ಕಾಲದಲ್ಲಿ ಜನ ಸಾಮಾನ್ಯರಿಗೆ ನೀಡಿದ ನೆರವಿನ ಹಸ್ತದಿಂದ ಅವರು ಅಭಿಮಾನಿಗಳಿಗೆ ಮತ್ತಷ್ಟು ಆತ್ಮೀಯರಾದರು. ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯ ಮಾಡುವುದರಿಂದ ತೊಡಗಿ, ಹಿರಿಯರಿಗೆ ವೈದ್ಯಕೀಯ ಸಹಾಯ ಮಾಡುವವರೆಗೆ ನಾನಾ ವಿಧವಾಗಿ ಸೋನು ಜನ ಸಾಮಾನ್ಯರಿಗೆ ನೆರವಾಗಿದ್ದಾರೆ. ಇಂದು ಅವರು ಟ್ವೀಟ್ ಒಂದನ್ನು ಮಾಡಿದ್ದು, ಅದರಲ್ಲಿ ಕೊರೊನಾ ಮೂರನೇ ಅಲೆಯ ಕುರಿತು ಮಾತನಾಡಿದ್ದಾರೆ. ‘ನಾವು ಈಗಾಗಲೇ ಮೂರನೇ ಅಲೆಯಲ್ಲಿದ್ದೇವೆ’ ಎಂದಿದ್ದಾರೆ ಅವರು. ಜನರು ಸೋನು ಸೂದ್ ಕಾಳಜಿಗೆ ‘ನೀವು ಹೇಳುತ್ತಿರುವುದು ಸತ್ಯ’ ಎಂದಿದ್ದಾರೆ.

ಟ್ವೀಟ್ ಮುಖಾಂತರ ಸೋನು ಹಂಚಿಕೊಂಡ ಮಾಹಿತಿ ಪ್ರಶ್ನೋತ್ತರ ರೂಪದಲ್ಲಿದೆ. ಅನಾಮಿಕರೊಬ್ಬರು ಸೋನು ಅವರಿಗೆ ‘‘ಕೊರೊನಾ ಮೂರನೇ ಅಲೆ ಬರುತ್ತದೆ ಎಂದು ನಿಮಗನ್ನಿಸುತ್ತದೆಯೇ?’’ ಎಂದು ಕೇಳಿದ್ದಾರೆ. ಆಗ ಸೋನು ಅವರು, ‘‘ನಾವು ಈಗಾಗಲೇ ಮೂರನೇ ಅಲೆಯಲ್ಲಿದ್ದೇವೆ. ಬಡತನ ಮತ್ತು ನಿರುದ್ಯೋಗಗಳು ಮೂರನೇ ಅಲೆಯಷ್ಟೇ ಭೀಕರವಾಗಿ ಜನ ಸಾಮಾನ್ಯರಿಗೆ ಹೊಡೆತ ನೀಡಿದೆ’’ ಎಂದು ಉತ್ತರ ನೀಡಿದ್ದಾರೆ.

ಸೋನು ಸೂದ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಪ್ರಸ್ತುತ ಭಾರತ ಎದುರಿಸುತ್ತಿರುವ ಈ ಸಮಸ್ಯೆಗೆ ಸೋನು ಸೂದ್ ಪರಿಹಾರವನ್ನೂ ಸೂಚಿಸಿದ್ದಾರೆ. ‘‘ಜನರು ತಾವಾಗಿಯೇ ಮುಂದೆ ಬಂದು ಅಗತ್ಯವಿರುವವರಿಗೆ ಸಹಾಯ ಮಾಡಬೇಕು. ಹಾಗೆಯೇ ಉದ್ಯೋಗಗಳನ್ನೂ ನೀಡಬೇಕು’’ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:

Sidharth Shukla: ಸಿದ್ಧಾರ್ಥ್ ಶುಕ್ಲಾ ನಿಧನಕ್ಕೆ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಬಾಲಿವುಡ್ ತಾರೆಯರ ಸಂತಾಪ

ಸಾರ್ವಜನಿಕವಾಗಿ ಕೋಣ ಬಲಿಕೊಟ್ಟ ಸುದೀಪ್ ಫ್ಯಾನ್ಸ್​; ಅಭಿಮಾನದ ಹೆಸರಲ್ಲಿ ಪ್ರಾಣಿವಧೆ

(Sonu Sood says that poverty and unemployment are the third wave and common man’s are experiencing it)

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು