AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧಾಶ್ರಮಕ್ಕೆ ಹೊಸ ಸಿನಿಮಾದ ಕಲೆಕ್ಷನ್​ ಹಣ ನೀಡಲಿರುವ ಸೋನು ಸೂದ್​

ಸೋನು ಸೂದ್​ ಅವರು ‘ಫತೇಹ್’ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅವರ ಪತ್ನಿ ಸೋನಾಲಿ ಈ ಚಿತ್ರದ ನಿರ್ಮಾಪಕಿ. ಜಾಕ್ವೆಲಿನ್​ ಫರ್ನಾಂಡಿಸ್​, ನಸೀರುದ್ಧೀನ್ ಶಾ, ವಿಜಯ್ ರಾಝ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಜ.10ರಂದು ಈ ಸಿನಿಮಾ ತೆರೆಕಾಣಲಿದೆ. ಸೈಬರ್​ ಕ್ರೈಮ್ ಕುರಿತ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ.

ವೃದ್ಧಾಶ್ರಮಕ್ಕೆ ಹೊಸ ಸಿನಿಮಾದ ಕಲೆಕ್ಷನ್​ ಹಣ ನೀಡಲಿರುವ ಸೋನು ಸೂದ್​
ಸೋನು ಸೂದ್
ಮದನ್​ ಕುಮಾರ್​
|

Updated on: Dec 15, 2024 | 4:51 PM

Share

ನಟ ಸೋನು ಸೂದ್​ ಅವರು ಈಗಾಗಲೇ ಅನೇಕ ಜನಪರ ಕಾರ್ಯಗಳ ಮೂಲಕ ಸೈ ಎನಿಸಿಕೊಂಡಿದ್ದಾರೆ. ಕೊವಿಡ್​ ಕಾಲದಿಂದ ಶುರುವಾದ ಅವರ ಸಮಾಜಸೇವೆ ಇಂದಿಗೂ ಮುಂದುವರಿದುಕೊಂಡು ಬಂದಿದೆ. ಹಾಗಾಗಿ ಜನರು ಅವರನ್ನು ರಿಯಲ್ ಹೀರೋ ಎನ್ನುತ್ತಾರೆ. ಈಗ ಸೋನು ಸೂದ್​ ಅವರು ಇನ್ನೊಂದು ಪುಣ್ಯದ ಕಾರ್ಯ ಮಾಡಲು ಮುಂದಾಗಿದ್ದಾರೆ. ತಮ್ಮ ಹೊಸ ಸಿನಿಮಾದಿಂದ ಬರುವ ಬಾಕ್ಸ್ ಆಫೀಸ್​ ಕಲೆಕ್ಷನ್​ ಮೊತ್ತವನ್ನು ವೃದ್ಧಾಶ್ರಮ ಮತ್ತು ಅನಾಥಾಶ್ರಮಕ್ಕೆ ನೀಡುವುದಾಗಿ ಅವರು ಹೇಳಿದ್ದಾರೆ.

ಬಾಲಿವುಡ್​ ಮಾತ್ರವಲ್ಲದೇ ದಕ್ಷಿಣ ಭಾರತದ ಚಿತ್ರರಂಗದಲ್ಲೂ ಸೋನು ಸೂದ್​ ಅವರು ನಟಿಸಿ ಫೇಮಸ್​ ಆಗಿದ್ದಾರೆ. ಅವರು ತೆರೆ ಮೇಲೆ ವಿಲನ್ ಪಾತ್ರ ಮಾಡಿದರೂ ರಿಯಲ್ ಲೈಫ್​ನಲ್ಲಿ ನಿಜವಾದ ಹೀರೋ ಆಗಿದ್ದಾರೆ. ಎಷ್ಟೋ ಜನರಿಗೆ ಸಹಾಯ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಬಡವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಿದ್ದಾರೆ. ಈಗ ಅವರು ‘ಫತೇಹ್’ ಚಿತ್ರದ ಕಲೆಕ್ಷನ್​ ಹಣವನ್ನು ಕೂಡ ಬಿಟ್ಟುಕೊಡಲು ಸಿದ್ಧರಾಗಿದ್ದಾರೆ.

‘ಫತೇಹ್’ ಸಿನಿಮಾಗೆ ಸ್ವತಃ ಸೋನು ಸೂದ್​ ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಸೈಬರ್​ ಕ್ರೈಂ ಕುರಿತಾದ ಕಹಾನಿ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಮೂಲಕ ಜನರಿಗೆ ಸೈಬರ್​ ಸುರಕ್ಷತೆ ಬಗ್ಗೆ ಸಂದೇಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೊವಿಡ್​ ಸಂದರ್ಭದಲ್ಲಿ ನಡೆದ ಸೈಬರ್ ವಂಚನೆಗಳನ್ನು ಆಧರಿಸಿ ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ.

ಇದನ್ನೂ ಓದಿ: ಮಹಾಕಾಳೇಶ್ವರ ದರ್ಶನ ಪಡೆದ ಬಹುಭಾಷಾ ನಟ ಸೋನು ಸೂದ್

ಸೋನು ಸೂದ್​ ಅವರ ಜೊತೆ ಜಾಕ್ವೆಲಿನ್​ ಫರ್ನಾಂಡಿಸ್​, ವಿಜಯ್ ರಾಝ್, ನಸೀರುದ್ಧೀನ್ ಶಾ ಕೂಡ ‘ಫತೇಹ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಜನವರಿ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸೋನು ಸೂದ್​ ಅವರ ಪತ್ನಿ ಸೊನಾಲಿ ಸೂದ್​ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ‘ದೇಶದ ಜನರಿಗಾಗಿ ನಾವು ಈ ಸಿನಿಮಾವನ್ನು ಮಾಡಿದ್ದೇವೆ. ಈ ಚಿತ್ರದ ಕಲೆಕ್ಷನ್​ ಹಣವನ್ನು ನಾವು ವೃದ್ಧಾಶ್ರಮ ಮತ್ತು ಅನಾಥಾಶ್ರಮಕ್ಕೆ ಕಳಿಸಿ ಕೊಡಲು ಪ್ರಯತ್ನಿಸುತ್ತೇವೆ’ ಎಂದು ಸೋನು ಸೂದ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ