Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಚಿತ್ರವನ್ನು ಹಲವು ಬಾರಿ ಪ್ರಸಾರ ಮಾಡಿದ ವಾಹಿನಿ; ತಲೆಕೆಟ್ಟು ವೀಕ್ಷಕ ಮಾಡಿದ್ದೇನು ನೋಡಿ

‘ಸೂರ್ಯವಂಶಂ’ ಸಿನಿಮಾ ಪ್ರಸಾರ ಹಕ್ಕು ಸೋನಿ ಮ್ಯಾಕ್ಸ್​ ಬಳಿ ಇದೆ. ಈ ಕಾರಣಕ್ಕೆ ಹಲವು ಬಾರಿ ಈ ಚಿತ್ರವನ್ನು ಪ್ರಸಾರ ಮಾಡಲಾಗಿದೆ. ಇದನ್ನು ಈಗಲೂ ಅನೇಕರು ಭಕ್ತಿಯಿಂದ ವೀಕ್ಷಿಸುವವರಿದ್ದಾರೆ.

ಒಂದೇ ಚಿತ್ರವನ್ನು ಹಲವು ಬಾರಿ ಪ್ರಸಾರ ಮಾಡಿದ ವಾಹಿನಿ; ತಲೆಕೆಟ್ಟು ವೀಕ್ಷಕ ಮಾಡಿದ್ದೇನು ನೋಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 18, 2023 | 3:13 PM

ಅಮಿತಾಭ್ ಬಚ್ಚನ್ (Amitabh Bachchan) ಅವರು ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಸಿನಿಮಾಗಳನ್ನು ಜನರು ಈಗಲೂ ಇಷ್ಟಪಡುತ್ತಾರೆ. ಅವರ ನಟನೆಯ ‘ಶೋಲೆ’ ಮೊದಲಾದ ಚಿತ್ರಗಳಿಗೆ ಈಗಲೂ ಬೇಡಿಕೆ ಇದೆ. ಈಗ ಅಮಿತಾಭ್ ಬಚ್ಚನ್ ನಟನೆಯ ‘ಸೂರ್ಯವಂಶಂ’ ಸಿನಿಮಾ (Sooryavansham) ಕೂಡ ಸೂಪರ್ ಹಿಟ್ ಚಿತ್ರ ಎನಿಸಿಕೊಂಡಿದೆ. ಈ ಚಿತ್ರ ಸೋನಿ ಮ್ಯಾಕ್ಸ್​​ನಲ್ಲಿ ಹಲವು ಬಾರಿ ಟೆಲಿಕಾಸ್ಟ್ ಆಗಿದೆ. ಇದನ್ನು ವೀಕ್ಷಕನೋರ್ವ ಪ್ರಶ್ನೆ ಮಾಡಿದ್ದಾನೆ.

‘ಸೂರ್ಯವಂಶಂ’ ಸಿನಿಮಾ ಪ್ರಸಾರ ಹಕ್ಕು ಸೋನಿ ಮ್ಯಾಕ್ಸ್​ ಬಳಿ ಇದೆ. ಈ ಕಾರಣಕ್ಕೆ ಹಲವು ಬಾರಿ ಈ ಚಿತ್ರವನ್ನು ಪ್ರಸಾರ ಮಾಡಲಾಗಿದೆ. ಇದನ್ನು ಈಗಲೂ ಅನೇಕರು ಭಕ್ತಿಯಿಂದ ವೀಕ್ಷಿಸುವವರಿದ್ದಾರೆ. ಜತೆಗೆ ಟ್ರೋಲ್ ಕೂಡ ಮಾಡುತ್ತಾರೆ. ಈ ಚಿತ್ರದ ಬದಲು ಬೇರೆ ಸಿನಿಮಾ ಪ್ರಸಾರ ಮಾಡಬಹುದಿತ್ತಲ್ಲ ಎಂದು ಪ್ರಶ್ನೆ ಮಾಡಿದವರಿದ್ದಾರೆ. ಈಗ ಅಭಿಮಾನಿಯೋರ್ವ ಸೋನಿ ಮ್ಯಾಕ್ಸ್ ನಿರ್ಧಾರವನ್ನು ಪ್ರಶ್ನೆ ಮಾಡಿದ್ದಾನೆ.

‘ಸೂರ್ಯವಂಶಂ ಚಿತ್ರದ ಪ್ರಸಾರ ಹಕ್ಕು ನಿಮ್ಮ ಬಳಿ (ಸೋನಿ ಮ್ಯಾಕ್ಸ್​) ಇದೆ. ನಿಮ್ಮ ಕೃಪೆಯಿಂದ ಹೀರಾ ಸಿಂಗ್​ (ಅಮಿತಾ ಬಚ್ಚನ್ ಮಾಡಿದ ಪಾತ್ರ) ಕುಟುಂಬದ ಬಗ್ಗೆ ತಿಳಿದುಕೊಂಡಿದ್ದೇವೆ. ನೀವು ಎಷ್ಟು ಬಾರಿ ಈ ಚಿತ್ರವನ್ನು ಟೆಲಿಕಾಸ್ಟ್ ಮಾಡಿದ್ದೀರಿ ಎಂಬುದನ್ನು ತಿಳಿದುಕೊಳ್ಳಬೇಕಿದೆ. ಭವಿಷ್ಯದಲ್ಲಿ ಇದನ್ನು ಎಷ್ಟು ಬಾರಿ ಪ್ರಸಾರ ಮಾಡಬೇಕು ಎಂದುಕೊಂಡಿದ್ದೀರಿ ಎಂಬುದು ನನಗೆ ಗೊತ್ತಾಗಬೇಕಿದೆ. ಸಿನಿಮಾ ನಮ್ಮ ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಿದರೆ ಇದಕ್ಕೆ ಯಾರು ಹೊಣೆ. ದಯವಿಟ್ಟು ತಿಳಿಸಿ’ ಎಂದು  ವೀಕ್ಷಕನೋರ್ವ ಪ್ರಶ್ನೆ ಮಾಡಿದ್ದಾನೆ.

ಇದನ್ನೂ ಓದಿ
Image
ಒಪ್ಪಿಗೆ ಇಲ್ಲದೆ ಅಮಿತಾಭ್ ಬಚ್ಚನ್​ ಫೋಟೋ ಬಳಸುವಂತಿಲ್ಲ; ಕೋರ್ಟ್​ನಿಂದಲೇ ಬಂತು ಆದೇಶ
Image
ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
Image
ಅಮಿತಾಭ್​ ಬಚ್ಚನ್​ ಸಿನಿಮಾಗೆ ತಡೆಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್​
Image
79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ

ಇದನ್ನೂ ಓದಿ: Sooryavansham: ಸೂರ್ಯವಂಶಂ ಹಿಂದಿ ಸಿನಿಮಾದ ಬಗ್ಗೆ ಚಂದ್ರನ ಮೇಲಿರುವವರನ್ನು ಕೇಳಿದರೂ ಉತ್ತರ ಸಿಗುತ್ತೆ: ಅನುಪಮ್​ ಖೇರ್

ಈ ಪೋಸ್ಟ್​ಗೆ ಭಾರೀ ಪ್ರತಿಕ್ರಿಯೆ ಬಂದಿದೆ. ಅನೇಕರು ಇದನ್ನು ಟ್ರೋಲ್ ಮಾಡಿದ್ದಾರೆ. ‘ನಿಮ್ಮ ನೋವು ನನಗೂ ಅರ್ಥ ಆಗುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಇದು ಭಾರತದಲ್ಲಿ ಮಾತ್ರ ನಡೆಯಲು ಸಾಧ್ಯ’ ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಈ ರೀತಿಯ ಹಲವು ಸಿನಿಮಾಗಳಿವೆ. ದಯವಿಟ್ಟು ಅವರ ಹೆಸರನ್ನು ಹೇಳಿ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:57 pm, Wed, 18 January 23

ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ