AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್​​ ಆಫೀಸ್​ನಲ್ಲಿ ಲಾಟರಿ ಹೊಡೆದ ಅಕ್ಷಯ್​ ಕುಮಾರ್​; ಗಳಿಕೆಯಲ್ಲಿ ‘ಸೂರ್ಯವಂಶಿ’ ಕಮಾಲ್​

ನವೆಂಬರ್​ 5ರಂದು ‘ಸೂರ್ಯವಂಶಿ’ ತೆರೆಗೆ ಬಂದಿತ್ತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಕೇಳಿ ಬಂತು. ಪ್ರೇಕ್ಷಕರು ಕೂಡ ಸಿನಿಮಾ ಇಷ್ಟಪಟ್ಟರು. ಪರಿಣಾಮ ‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಹೆಚ್ಚುತ್ತಿದೆ.

ಬಾಕ್ಸ್​​ ಆಫೀಸ್​ನಲ್ಲಿ ಲಾಟರಿ ಹೊಡೆದ ಅಕ್ಷಯ್​ ಕುಮಾರ್​; ಗಳಿಕೆಯಲ್ಲಿ ‘ಸೂರ್ಯವಂಶಿ’ ಕಮಾಲ್​
‘ಸೂರ್ಯವಂಶಿ’ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Nov 14, 2021 | 1:42 PM

Share

ಅಕ್ಷಯ್​ ಕುಮಾರ್​ (Akshay Kumar) ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾರೆ. ಒಪ್ಪಿಕೊಂಡ ವೇಗದಲ್ಲೇ ಅವರು ಒಪ್ಪಿಕೊಂಡ ಕೆಲಸ ಪೂರ್ಣಗೊಳಿಸುತ್ತಾರೆ. ಅವರ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​ ಮಾಡುತ್ತವೆ. ಈ ಕಾರಣಕ್ಕೆ ನಿರ್ಮಾಪಕರು ಕೂಡ ಅಕ್ಕಿ ಜತೆ ಕೆಲಸ ಮಾಡೋಕೆ ಅಂಜುವುದಿಲ್ಲ. ಆದರೆ, ಅವರ ನಟನೆಯ ‘ಬೆಲ್​ ಬಾಟಮ್​’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸೋತಿತ್ತು. ಉತ್ತಮ ವಿಮರ್ಶೆ ಸಿಕ್ಕ ಹೊರತಾಗಿಯೂ ಸಿನಿಮಾ ಸೋತಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಈ ಕಾರಣಕ್ಕೆ ಬಾಲಿವುಡ್​ ಮಂದಿ ಸಿನಿಮಾ ರಿಲೀಸ್​ ಮಾಡೋಕೆ ಹಿಂದೇಟು ಹಾಕಿದ್ದರು. ಈ ಸಮಯದಲ್ಲೇ ಅಕ್ಷಯ್​ ಕುಮಾರ್​ ನಟನೆಯ ಮತ್ತೊಂದು ಚಿತ್ರ ತೆರೆಗೆ ಬಂದು ಕಮಾಲ್​ ಮಾಡಿದೆ. ದೀಪಾವಳಿ ನಿಮಿತ್ತ ತೆರೆಗೆ ಬಂದ ‘ಸೂರ್ಯವಂಶಿ’ ಸಿನಿಮಾ (Sooryavanshi Movie) ಒಳ್ಳೆಯ ಗಳಿಕೆ ಮಾಡುತ್ತಿದೆ. 

ನವೆಂಬರ್​ 5ರಂದು ‘ಸೂರ್ಯವಂಶಿ’ ತೆರೆಗೆ ಬಂದಿತ್ತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಕೇಳಿ ಬಂತು. ಪ್ರೇಕ್ಷಕರು ಕೂಡ ಸಿನಿಮಾ ಇಷ್ಟಪಟ್ಟರು. ಪರಿಣಾಮ ‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಹೆಚ್ಚುತ್ತಿದೆ. ಶನಿವಾರ (ನವೆಂಬರ್​ 13) ಈ ಸಿನಿಮಾ 10.50 ಕೋಟಿ ಗಳಿಸಿದೆ. ಈ ಮೂಲಕ ಚಿತ್ರದ ಬಾಕ್ಸ್​ ಆಫೀಸ್​ ಗಳಿಕೆ 138 ಕೋಟಿ ಆಗಿದೆ. ಇಂದು (ನವೆಂಬರ್​ 14) ಭಾನುವಾರ ಆಗಿರುವುದರಿಂದ ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚಬಹುದು. ಈ ಮೂಲಕ ಚಿತ್ರ ಅನಾಯಾಸವಾಗಿ 150 ಕೋಟಿ ರೂಪಾಯಿ ಗಳಿಕೆ ಮಾಡಲಿದೆ.

ಸಾಕಷ್ಟು ಚಿತ್ರ ತಂಡಗಳು ರಿಲೀಸ್​ ಮಾಡೋಕೆ ಹಿಂದೇಟು ಹಾಕುತ್ತಿದ್ದವು. ಇನ್ನೂ ಕೆಲ ಸಿನಿಮಾಗಳು ನೇರವಾಗಿ ಒಟಿಟಿ ಮೊರೆ ಹೋಗಿದ್ದವು. ಈಗ ‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಗಳಿಕೆ ನೋಡಿ ಎಲ್ಲರಿಗೂ ಹೊಸ ಹುರುಪು ಸಿಕ್ಕಿದೆ. ಈ ಮೂಲಕ ಸಿನಿಮಾವನ್ನು ನೇರವಾಗಿ ಚಿತ್ರಮಂದಿರದಲ್ಲೇ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುತ್ತಿದ್ದಾರೆ. ಅಕ್ಷಯ್​ ಕುಮಾರ್​ ಚಿತ್ರ ರಿಲೀಸ್​ ಆದ ದಿನವೇ ಲೀಕ್​ ಆಗಿತ್ತು. ಕೆಲ ಆನ್​ಲೈನ್​ ತಾಣಗಳಲ್ಲಿ ಸಿನಿಮಾದ ಪ್ರತಿ ಹರಿದಾಡಿತ್ತು. ಆದಾಗ್ಯೂ, ಗಳಿಕೆಯಲ್ಲಿ ಕೊಂಚವೂ ಕುಗ್ಗಿಲ್ಲ. ಇದು ಚಿತ್ರತಂಡದ ಸಂತಸವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಮಂಕಾಗಿದ್ದ ಚಿತ್ರಮಂದಿರಗಳ ವಹಿವಾಟಿಗೆ ಮರುಜೀವ ನೀಡಿದ ಅಣ್ಣಾಥೆ, ಸೂರ್ಯವಂಶಿ, ಎಟರ್ನಲ್ಸ್​

ಬಾಕ್ಸಾಫೀಸ್ ಲೂಟಿ‌ ಮಾಡುತ್ತಿರುವ ಸೂರ್ಯವಂಶಿ ಚಿತ್ರಕ್ಕೆ ಅಕ್ಷಯ್, ಕತ್ರಿನಾ ಪಡೆದ ಸಂಭಾವನೆ ಇಷ್ಟೊಂದಾ?

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ