AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್​​ ಆಫೀಸ್​ನಲ್ಲಿ ಲಾಟರಿ ಹೊಡೆದ ಅಕ್ಷಯ್​ ಕುಮಾರ್​; ಗಳಿಕೆಯಲ್ಲಿ ‘ಸೂರ್ಯವಂಶಿ’ ಕಮಾಲ್​

ನವೆಂಬರ್​ 5ರಂದು ‘ಸೂರ್ಯವಂಶಿ’ ತೆರೆಗೆ ಬಂದಿತ್ತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಕೇಳಿ ಬಂತು. ಪ್ರೇಕ್ಷಕರು ಕೂಡ ಸಿನಿಮಾ ಇಷ್ಟಪಟ್ಟರು. ಪರಿಣಾಮ ‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಹೆಚ್ಚುತ್ತಿದೆ.

ಬಾಕ್ಸ್​​ ಆಫೀಸ್​ನಲ್ಲಿ ಲಾಟರಿ ಹೊಡೆದ ಅಕ್ಷಯ್​ ಕುಮಾರ್​; ಗಳಿಕೆಯಲ್ಲಿ ‘ಸೂರ್ಯವಂಶಿ’ ಕಮಾಲ್​
‘ಸೂರ್ಯವಂಶಿ’ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Nov 14, 2021 | 1:42 PM

Share

ಅಕ್ಷಯ್​ ಕುಮಾರ್​ (Akshay Kumar) ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾರೆ. ಒಪ್ಪಿಕೊಂಡ ವೇಗದಲ್ಲೇ ಅವರು ಒಪ್ಪಿಕೊಂಡ ಕೆಲಸ ಪೂರ್ಣಗೊಳಿಸುತ್ತಾರೆ. ಅವರ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​ ಮಾಡುತ್ತವೆ. ಈ ಕಾರಣಕ್ಕೆ ನಿರ್ಮಾಪಕರು ಕೂಡ ಅಕ್ಕಿ ಜತೆ ಕೆಲಸ ಮಾಡೋಕೆ ಅಂಜುವುದಿಲ್ಲ. ಆದರೆ, ಅವರ ನಟನೆಯ ‘ಬೆಲ್​ ಬಾಟಮ್​’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸೋತಿತ್ತು. ಉತ್ತಮ ವಿಮರ್ಶೆ ಸಿಕ್ಕ ಹೊರತಾಗಿಯೂ ಸಿನಿಮಾ ಸೋತಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಈ ಕಾರಣಕ್ಕೆ ಬಾಲಿವುಡ್​ ಮಂದಿ ಸಿನಿಮಾ ರಿಲೀಸ್​ ಮಾಡೋಕೆ ಹಿಂದೇಟು ಹಾಕಿದ್ದರು. ಈ ಸಮಯದಲ್ಲೇ ಅಕ್ಷಯ್​ ಕುಮಾರ್​ ನಟನೆಯ ಮತ್ತೊಂದು ಚಿತ್ರ ತೆರೆಗೆ ಬಂದು ಕಮಾಲ್​ ಮಾಡಿದೆ. ದೀಪಾವಳಿ ನಿಮಿತ್ತ ತೆರೆಗೆ ಬಂದ ‘ಸೂರ್ಯವಂಶಿ’ ಸಿನಿಮಾ (Sooryavanshi Movie) ಒಳ್ಳೆಯ ಗಳಿಕೆ ಮಾಡುತ್ತಿದೆ. 

ನವೆಂಬರ್​ 5ರಂದು ‘ಸೂರ್ಯವಂಶಿ’ ತೆರೆಗೆ ಬಂದಿತ್ತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಕೇಳಿ ಬಂತು. ಪ್ರೇಕ್ಷಕರು ಕೂಡ ಸಿನಿಮಾ ಇಷ್ಟಪಟ್ಟರು. ಪರಿಣಾಮ ‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಕಲೆಕ್ಷನ್​ ಹೆಚ್ಚುತ್ತಿದೆ. ಶನಿವಾರ (ನವೆಂಬರ್​ 13) ಈ ಸಿನಿಮಾ 10.50 ಕೋಟಿ ಗಳಿಸಿದೆ. ಈ ಮೂಲಕ ಚಿತ್ರದ ಬಾಕ್ಸ್​ ಆಫೀಸ್​ ಗಳಿಕೆ 138 ಕೋಟಿ ಆಗಿದೆ. ಇಂದು (ನವೆಂಬರ್​ 14) ಭಾನುವಾರ ಆಗಿರುವುದರಿಂದ ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚಬಹುದು. ಈ ಮೂಲಕ ಚಿತ್ರ ಅನಾಯಾಸವಾಗಿ 150 ಕೋಟಿ ರೂಪಾಯಿ ಗಳಿಕೆ ಮಾಡಲಿದೆ.

ಸಾಕಷ್ಟು ಚಿತ್ರ ತಂಡಗಳು ರಿಲೀಸ್​ ಮಾಡೋಕೆ ಹಿಂದೇಟು ಹಾಕುತ್ತಿದ್ದವು. ಇನ್ನೂ ಕೆಲ ಸಿನಿಮಾಗಳು ನೇರವಾಗಿ ಒಟಿಟಿ ಮೊರೆ ಹೋಗಿದ್ದವು. ಈಗ ‘ಸೂರ್ಯವಂಶಿ’ ಬಾಕ್ಸ್​ ಆಫೀಸ್​ ಗಳಿಕೆ ನೋಡಿ ಎಲ್ಲರಿಗೂ ಹೊಸ ಹುರುಪು ಸಿಕ್ಕಿದೆ. ಈ ಮೂಲಕ ಸಿನಿಮಾವನ್ನು ನೇರವಾಗಿ ಚಿತ್ರಮಂದಿರದಲ್ಲೇ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುತ್ತಿದ್ದಾರೆ. ಅಕ್ಷಯ್​ ಕುಮಾರ್​ ಚಿತ್ರ ರಿಲೀಸ್​ ಆದ ದಿನವೇ ಲೀಕ್​ ಆಗಿತ್ತು. ಕೆಲ ಆನ್​ಲೈನ್​ ತಾಣಗಳಲ್ಲಿ ಸಿನಿಮಾದ ಪ್ರತಿ ಹರಿದಾಡಿತ್ತು. ಆದಾಗ್ಯೂ, ಗಳಿಕೆಯಲ್ಲಿ ಕೊಂಚವೂ ಕುಗ್ಗಿಲ್ಲ. ಇದು ಚಿತ್ರತಂಡದ ಸಂತಸವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಮಂಕಾಗಿದ್ದ ಚಿತ್ರಮಂದಿರಗಳ ವಹಿವಾಟಿಗೆ ಮರುಜೀವ ನೀಡಿದ ಅಣ್ಣಾಥೆ, ಸೂರ್ಯವಂಶಿ, ಎಟರ್ನಲ್ಸ್​

ಬಾಕ್ಸಾಫೀಸ್ ಲೂಟಿ‌ ಮಾಡುತ್ತಿರುವ ಸೂರ್ಯವಂಶಿ ಚಿತ್ರಕ್ಕೆ ಅಕ್ಷಯ್, ಕತ್ರಿನಾ ಪಡೆದ ಸಂಭಾವನೆ ಇಷ್ಟೊಂದಾ?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು