AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು

Akshay Kumar: ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ‘ಸೂರ್ಯವಂಶಿ’ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ. ನಾಯಕಿಯಾಗಿ ಕತ್ರಿನಾ ಕೈಫ್​ ನಟಿಸಿದ್ದಾರೆ.

Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು
ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್​ ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Nov 05, 2021 | 7:28 AM

Share

ಅಕ್ಷಯ್​ ಕುಮಾರ್​ ಮತ್ತು ಕತ್ರಿನಾ ಕೈಫ್​ ಅಭಿನಯದ ‘ಸೂರ್ಯವಂಶಿ’ ಸಿನಿಮಾ ಇಂದು (ನ.5) ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್​ ಆಗುತ್ತಿರುವ ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ರೋಹಿತ್​ ಶೆಟ್ಟಿ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಅಕ್ಷಯ್​ ಕುಮಾರ್​ ಅಭಿಮಾನಿಗಳು ಈ ಸಿನಿಮಾಗಾಗಿ ಬಹಳ ತಿಂಗಳಿನಿಂದ ಕಾದಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್​ 20ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ಎರಡನೇ ಅಲೆಯ ಕಾರಣದಿಂದ ‘ಸೂರ್ಯವಂಶಿ’ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು. ಅಂತೂ ಈಗ ರಿಲೀಸ್​ಗೆ ಸಮಯ ಕೂಡಿಬಂದಿದೆ. ಈ ಸಿನಿಮಾ ನೋಡಲು ಇರುವ 5 ಪ್ರಮುಖ ಕಾರಣಗಳು ಹೀಗಿವೆ..

1: ರೋಹಿತ್​ ಶೆಟ್ಟಿ-ಅಕ್ಷಯ್​ ಕುಮಾರ್​ ಮಸ್ತ್​ ಕಾಂಬಿನೇಷನ್​

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ. ಸಾಹಸಮಯ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅಕ್ಷಯ್​ಕುಮಾರ್​ಗೆ ರೋಹಿತ್​ ಶೆಟ್ಟಿ ಯಾವ ರೀತಿ ನಿರ್ದೇಶನ ಮಾಡಿರಬಹುದು ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

ಕಾರಣ 2: ಅಕ್ಕಿ-ಕತ್ರಿನಾ ಸೂಪರ್​ ಜೋಡಿ

ಸಿಂಗ್​ ಈಸ್​ ಕಿಂಗ್​​, ತೀಸ್​ ಮಾರ್​ ಖಾನ್​, ಸಮಸ್ತೆ ಲಂಡನ್​ ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಮತ್ತು ಕತ್ರಿನಾ ಕೈಫ್​ ಮೋಡಿ ಮಾಡಿದ್ದರು. ಈ ಸೂಪರ್​ ಹಿಟ್​ ಜೋಡಿ ‘ಸೂರ್ಯವಂಶಿ’ ಸಿನಿಮಾದಲ್ಲಿ ಮತ್ತೆ ಒಂದಾಗಿದೆ. ಆ ಕಾರಣದಿಂದಲೂ ಈ ಚಿತ್ರ ಸಖತ್​ ನಿರೀಕ್ಷೆ ಮೂಡಿಸಿದೆ. ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ಅಕ್ಷಯ್​ ಕುಮಾರ್​ ನಟಿಸಿದ್ದು, ಅವರ ಹೆಂಡತಿ ಪಾತ್ರದಲ್ಲಿ ಕತ್ರಿನಾ ಕೈಫ್​ ಕಾಣಿಸಿಕೊಂಡಿದ್ದಾರೆ.

ಕಾರಣ 3: ರಣವೀರ್​ ಸಿಂಗ್​-ಅಜಯ್​ ದೇವಗನ್​

‘ಸೂರ್ಯವಂಶಿ’ ಚಿತ್ರಕ್ಕೆ ಅಕ್ಷಯ್​ಕುಮಾರ್​ ನಾಯಕ. ಅವರ ಜೊತೆಗೆ ರಣವೀರ್​ ಸಿಂಗ್​ ಮತ್ತು ಅಜಯ್​ ದೇವಗನ್​ ಕೂಡ ತೆರೆಹಂಚಿಕೊಂಡಿದ್ದಾರೆ. ಮುಖ್ಯವಾದ ಅತಿಥಿ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಮೂವರ ಕಾಂಬಿನೇಷನ್​ ಅನ್ನು ದೊಡ್ಡ ಪರದೆ ಮೇಲೆ ನೋಡುವುದು ಅಭಿಮಾನಿಗಳಿಗೆ ನಿಜವಾದ ಹಬ್ಬ.

ಕಾರಣ 4: ರಿಮೇಕ್​ ಅಥವಾ ಸ್ವಮೇಕ್​?

ರೋಹಿತ್​ ಶೆಟ್ಟಿ ನಿರ್ದೇಶನದ ‘ಸಿಂಘಂ’ ಚಿತ್ರವು ತಮಿಳಿನ ‘ಸಿಂಗಂ’ ಸಿನಿಮಾದ ರಿಮೇಕ್​ ಆಗಿತ್ತು. ನಂತರ ಅವರು ನಿರ್ದೇಶನ ಮಾಡಿದ ‘ಸಿಂಬ’ ಚಿತ್ರದ ಕಥೆಗೆ ತೆಲುಗಿನ ‘ಟೆಂಪರ್​’ ಸಿನಿಮಾ ಪ್ರೇರಣೆಯಾಗಿತ್ತು. ಆದರೆ ಈಗ ಮೂಡಿಬಂದಿರುವ ‘ಸೂರ್ಯವಂಶಿ’ ಸಿನಿಮಾ ಸಂಪೂರ್ಣ ಸ್ವಮೇಕ್​ ಎಂಬ ಮಾತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲು ಇದು ಕೂಡ ಒಂದು ಮುಖ್ಯ ಕಾರಣ.

ಕಾರಣ 5: ಕೊವಿಡ್​ 2ನೇ ಅಲೆ ಬಳಿಕ ಚಿತ್ರಮಂದಿರದಲ್ಲಿ ಹಬ್ಬ

ಕೊರೊನಾ ವೈರಸ್​​ ಹಾವಳಿಯ ಕಾರಣದಿಂದ ಹಲವು ತಿಂಗಳ ಕಾಲ ಚಿತ್ರಮಂದಿರಗಳು ಬಂದ್​ ಆಗಬೇಕಾಯಿತು. ನಂತರ ಲಾಕ್​ಡೌನ್​ ನಿಯಮ ಸಡಿಲಿಕೆ ಆದರೂ ದೇಶದ ಹಲವು ಕಡೆಗಳಲ್ಲಿ ಶೇ.50ರಷ್ಟು ಆಕ್ಯುಪೆನ್ಸಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಈಗ ಶೇ.100ರಷ್ಟು ಆಸನಭರ್ತಿಗೆ ಅನುಮತಿ ಸಿಕ್ಕಿದೆ. ಹಾಗಾಗಿ ಬ್ಯಾಕ್​ ಟು ಬ್ಯಾಕ್​ ಸ್ಟಾರ್​ ಸಿನಿಮಾಗಳು ಬಿಡುಗಡೆ ಆಗುತ್ತಿದ್ದು, ಚಿತ್ರಮಂದಿರದಲ್ಲಿ ಸಿನಿಪ್ರಿಯರು ಸಂಭ್ರಮಿಸುತ್ತಿದ್ದಾರೆ. ಆ ಸಂಭ್ರಮಕ್ಕೆ ‘ಸೂರ್ಯವಂಶಿ’ ಕೂಡ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿ:

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

OMG 2: ‘ಓಹ್​ ಮೈ ಗಾಡ್​ 2’ ಪೋಸ್ಟರ್​ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ ಅಕ್ಷಯ್​ ಕುಮಾರ್​; ಹೇಗಿದೆ ಹೊಸ ಗೆಟಪ್​?

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ