AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sooryavanshi: ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ ‘ಸೂರ್ಯವಂಶಿ’; ದಿನದ 24 ಗಂಟೆಯೂ ಅಕ್ಷಯ್​ ಕುಮಾರ್​ ಚಿತ್ರ ಪ್ರದರ್ಶನ

Akshay Kumar: ಅಕ್ಷಯ್​ ಕುಮಾರ್​ ಅಭಿನಯದ ‘ಸೂರ್ಯವಂಶಿ’ ಸಿನಿಮಾ ತೆರೆಕಂಡು 4 ದಿನ ಕಳೆದ ಬಳಿಕ ಇದರ ಕ್ರೇಜ್​ ಹೆಚ್ಚಿದೆ. ಅಭಿಮಾನಿಗಳಿಗಾಗಿ ಮಧ್ಯರಾತ್ರಿ ಕೂಡ ಹೆಚ್ಚುವರಿ ಶೋಗಳನ್ನು ಹಾಕಬೇಕಾದ ಸಂದರ್ಭ ಬಂದಿದೆ.

Sooryavanshi: ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ ‘ಸೂರ್ಯವಂಶಿ’; ದಿನದ 24 ಗಂಟೆಯೂ ಅಕ್ಷಯ್​ ಕುಮಾರ್​ ಚಿತ್ರ ಪ್ರದರ್ಶನ
‘ಸೂರ್ಯವಂಶಿ’ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Nov 08, 2021 | 10:01 AM

Share

ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಧೂಳೆಬ್ಬಿಸುತ್ತಿದೆ. ದೀಪಾವಳಿ ಹಬ್ಬದ ಪ್ರಯುಕ್ತ ನ.5ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಯಿತು. ಮೊದಲ ದಿನವೇ ಈ ಸಿನಿಮಾ 26 ಕೋಟಿ ರೂ. ಕಮಾಯಿ ಮಾಡುವಲ್ಲಿ ಯಶಸ್ವಿ ಆಯಿತು. ನಂತರದ ದಿನಗಳಲ್ಲಿ ವೀಕೆಂಡ್​ ರಜೆ ಇದ್ದಿದ್ದರಿಂದ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿತು. ರೋಹಿತ್​ ಶೆಟ್ಟಿ ನಿರ್ದೇಶನದ ‘ಸೂರ್ಯವಂಶಿ’ ಕಂಡು ಜನರು ಮೆಚ್ಚಿಕೊಂಡಿದ್ದಾರೆ. ಹೆಚ್ಚಿನ ಶೋ ಏರ್ಪಡಿಸುವಂತೆ ಬೇಡಿಕೆ ಬಂದಿದೆ. ಅದರ ಪರಿಣಾಮವಾಗಿ ಮುಂಬೈ ನಗರದಲ್ಲಿ ದಿನದ 24 ಗಂಟೆಯೂ ‘ಸೂರ್ಯವಂಶಿ’ ಪ್ರದರ್ಶನ ಕಾಣುವಂತಾಗಿದೆ.

ಸ್ಟಾರ್​ ನಟರ ಸಿನಿಮಾಗಳು ಬಿಡುಗಡೆ ಆದಾಗ ಮೊದಲ ದಿನ ಮುಂಜಾನೆ ಶೋ ಏರ್ಪಡಿಸುವುದು ಸಹಜ. ಕೆಲವೊಮ್ಮೆ ಮಧ್ಯರಾತ್ರಿ ಸಹ ಪ್ರದರ್ಶನ ಇರುತ್ತದೆ. ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ತೆರೆಕಂಡು 4 ದಿನ ಕಳೆದ ಬಳಿಕ ಇದರ ಕ್ರೇಜ್​ ಹೆಚ್ಚಿದೆ. ಅಭಿಮಾನಿಗಳು ಹುಚ್ಚೆದ್ದು ಸಿನಿಮಾ ನೋಡುತ್ತಿದ್ದಾರೆ. ಬಹುತೇಕ ಕಡೆಗಳಲ್ಲಿ ಎಲ್ಲ ಪ್ರದರ್ಶನದ ಟಿಕೆಟ್​ಗಳು ಸೋಲ್ಡ್​ ಔಟ್​ ಆಗುತ್ತಿವೆ. ಹಾಗಾಗಿ ಮಧ್ಯರಾತ್ರಿ ಕೂಡ ಹೆಚ್ಚುವರಿ ಶೋಗಳನ್ನು ಹಾಕಬೇಕಾದ ಸಂದರ್ಭ ಬಂದಿದೆ. ಆ ಮೂಲಕ ‘ಸೂರ್ಯವಂಶಿ’ ಈ ವರ್ಷದ ಅತಿ ದೊಡ್ಡ ಹಿಟ್​ ಸಿನಿಮಾ ಎಂಬ ಖ್ಯಾತಿಗೆ ಒಳಗಾಗುತ್ತಿದೆ.

ಕೆಲವು ಚಿತ್ರಮಂದಿರಗಳಲ್ಲಿ ರಾತ್ರಿ 11.45ಕ್ಕೆ ಹೆಚ್ಚುವರಿ ಶೋ ಏರ್ಪಡಿಸಲಾಗಿದೆ. ಅದೂ ಸಾಲದೆಂಬಂತೆ ಮಧ್ಯರಾತ್ರಿ 12.30, 2 ಗಂಟೆ, ನಸುಕಿನ 4.30, 5.30 ಹಾಗೂ ಮುಂಜಾನೆ 6 ಗಂಟೆಗೆ ‘ಸೂರ್ಯವಂಶಿ’ ಪ್ರದರ್ಶನ ನಡೆಸಲಾಗಿದೆ. ಈ ಪರಿ ಕ್ರೇಜ್​ ಕಂಡು ಎಲ್ಲರೂ ಬೆರಗಾಗಿದ್ದಾರೆ. ಭಾರಿ ಉತ್ಸಾಹದಿಂದ ಸಿನಿಮಾ ನೋಡಲು ಬಂದಿರುವ ಅಭಿಮಾನಿಗಳು ಟಿಕೆಟ್​ ಸಿಗದೇ ಹಿಂದಿರುಗಬಾರದು ಎಂಬ ಕಾರಣಕ್ಕೆ ಚಿತ್ರಮಂದಿರಗಳ ಮಾಲೀಕರು ಹೆಚ್ಚಿನ ಶೋ ವ್ಯವಸ್ಥೆ ಮಾಡಿದ್ದಾರೆ.

ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಲು ಹಲವು ಕಾರಣಗಳಿದ್ದವು. ಅಕ್ಷಯ್​ಕುಮಾರ್​, ಕತ್ರಿನಾ ಕೈಫ್​ ಮುಖ್ಯ ಪಾತ್ರ ನಿಭಾಯಿಸಿದ್ದು, ಅಜಯ್​ ದೇವಗನ್​ ಹಾಗೂ ರಣವೀರ್​ ಸಿಂಗ್​ ಕೂಡ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಸ್ವಮೇಕ್​ ಕಥೆಯನ್ನು ರೋಹಿತ್​ ಶೆಟ್ಟಿ ತೆರೆಗೆ ತಂದಿದ್ದಾರೆ. ಇಡೀ ಸಿನಿಮಾ ಅದ್ದೂರಿಯಾಗಿ ಮೂಡಿಬಂದಿದೆ. ಆ್ಯಕ್ಷನ್​​ ದೃಶ್ಯಗಳು ಅಭಿಮಾನಿಗಳಿಗೆ ಸಖತ್​ ಇಷ್ಟ ಆಗುತ್ತಿದೆ.​

ಇದನ್ನೂ ಓದಿ:

2 ಬಾರಿ ಅಕ್ಷಯ್​ ಕುಮಾರ್​ ಕೆನ್ನೆಗೆ ಬಾರಿಸಿದ ಕತ್ರಿನಾ ಕೈಫ್​; ಇದನ್ನೆಲ್ಲ ಅಕ್ಕಿ ಸಹಿಸಿಕೊಂಡಿದ್ದೇಕೆ?

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

Published On - 9:58 am, Mon, 8 November 21

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?