AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಸ್ಲಿಮರನ್ನು ಯಾಕೆ ಕೆಟ್ಟದಾಗಿ ತೋರಿಸಿದ್ದೀರಿ?’: ಪತ್ರಕರ್ತೆ ಪ್ರಶ್ನೆಗೆ ‘ಸೂರ್ಯವಂಶಿ’ ನಿರ್ದೇಶಕನ ಖಡಕ್​ ತಿರುಗೇಟು

Sooryavanshi | Rohit Shetty: ಪತ್ರಕರ್ತೆ ಕೇಳಿದ ಪ್ರಶ್ನೆಯಿಂದಾಗಿ ರೋಹಿತ್​ ಶೆಟ್ಟಿಗೆ ಕೋಪ ಬಂದಂತೆ ಕಂಡಿತು. ತಮ್ಮ ಈ ಹಿಂದಿನ ಸಿನಿಮಾಗಳಲ್ಲಿ ವಿಲನ್​ ಪಾತ್ರಗಳು ಹಿಂದು ಧರ್ಮಕ್ಕೆ ಸೇರಿದ್ದವಾಗಿದ್ದವು. ಆಗ ಯಾಕೆ ಅದೊಂದು ಸಮಸ್ಯೆ ಎನಿಸಲಿಲ್ಲ ಎಂದು ಅವರು ಮರುಪ್ರಶ್ನೆ ಎಸೆದರು.

‘ಮುಸ್ಲಿಮರನ್ನು ಯಾಕೆ ಕೆಟ್ಟದಾಗಿ ತೋರಿಸಿದ್ದೀರಿ?’: ಪತ್ರಕರ್ತೆ ಪ್ರಶ್ನೆಗೆ ‘ಸೂರ್ಯವಂಶಿ’ ನಿರ್ದೇಶಕನ ಖಡಕ್​ ತಿರುಗೇಟು
ರೋಹಿತ್ ಶೆಟ್ಟಿ
TV9 Web
| Edited By: |

Updated on: Nov 15, 2021 | 1:21 PM

Share

ಅಕ್ಷಯ್​ ಕುಮಾರ್​ (Akshay Kumar) ಮತ್ತು ಕತ್ರಿನಾ ಕೈಫ್​ (Katrina Kaif) ಜೋಡಿಯ ‘ಸೂರ್ಯವಂಶಿ’ (Sooryavanshi) ಸಿನಿಮಾ ಸೂಪರ್​ ಹಿಟ್​ ಆಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ರೋಹಿತ್​ ಶೆಟ್ಟಿ ಆ್ಯಕ್ಷನ್​-ಕಟ್​ ಹೇಳಿದ್ದಾರೆ. 9ನೇ ದಿನಕ್ಕೆ ಈ ಚಿತ್ರ ವಿಶ್ವಾದ್ಯಂತ 209 ಕೋಟಿ ರೂ. ಗಳಿಕೆ ಮಾಡಿದೆ. ಸಿನಿಮಾದ ಯಶಸ್ಸಿನ ನಂತರ ಹಲವು ಮಾಧ್ಯಮಗಳಿಗೆ ರೋಹಿತ್​ ಶೆಟ್ಟಿ (Rohit Shetty) ಅವರು ಸಂದರ್ಶನ ನೀಡಿದ್ದಾರೆ. ಈ ವೇಳೆ ಪತ್ರಕರ್ತೆಯೊಬ್ಬರು ರೋಹಿತ್​ ಶೆಟ್ಟಿಗೆ ಕಿರಿಕಿರಿ ಆಗುವಂತಹ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ರೋಹಿತ್​ ಶೆಟ್ಟಿ ಕಡೆಯಿಂದ ಖಡಕ್​ ಉತ್ತರ ಬಂದಿದೆ. ‘ನಿಮ್ಮ ಸಿನಿಮಾದಲ್ಲಿ ಮುಸ್ಲಿಂ (Muslims) ಪಾತ್ರಗಳನ್ನು ಕೆಟ್ಟದಾಗಿ ಯಾಕೆ ತೋರಿಸಲಾಗಿದೆ’ ಎಂಬ ಪ್ರಶ್ನೆಗೆ ರೋಹಿತ್​ ನೀಡಿದ ಉತ್ತರವೇನು? ಮುಂದೆ ಓದಿ.. 

ಅಂಥ ಪ್ರಶ್ನೆಯಿಂದಾಗಿ ರೋಹಿತ್​ ಶೆಟ್ಟಿಗೆ ಸ್ವಲ್ಪ ಕೋಪ ಬಂದಂತೆ ಕಂಡಿತು. ತಮ್ಮ ಈ ಹಿಂದಿನ ಸಿನಿಮಾಗಳಲ್ಲಿ ವಿಲನ್​ ಪಾತ್ರಗಳು ಹಿಂದು ಧರ್ಮಕ್ಕೆ ಸೇರಿದ್ದವಾಗಿದ್ದವು. ಆಗ ಯಾಕೆ ಅದೊಂದು ಸಮಸ್ಯೆ ಎನಿಸಲಿಲ್ಲ ಎಂದು ಅವರು ಮರುಪ್ರಶ್ನೆ ಎಸೆದರು. ‘ನಿಮಗೊಂದು ಪ್ರಶ್ನೆ ಕೇಳುತ್ತೇನೆ. ‘ಸಿಂಘಂ’ ಸಿನಿಮಾದಲ್ಲಿ ವಿಲನ್​ ಜೈಕಾಂತ್​ ಶಿಕ್ರೆ ಪಾತ್ರ ಹಿಂದೂ ಮರಾಠಿ ಆಗಿತ್ತು. ಇನ್ನೊಂದು ಸಿನಿಮಾದಲ್ಲಿ ಹಿಂದೂ ಧಾರ್ಮಿಕ ವ್ಯಕ್ತಿ ವಿಲನ್​ ಆಗಿದ್ದ. ‘ಸಿಂಬಾ’ ಸಿನಿಮಾದಲ್ಲಿ ವಿಲನ್​ ಆಗಿದ್ದ ಧ್ರುವ ರಾನಡೆ ಎಂಬ ಪಾತ್ರ ಹಿಂದೂ ಆಗಿತ್ತು. ಆಗ ಯಾಕೆ ಈ ಸಮಸ್ಯೆ ಉದ್ಭವ ಆಗಲಿಲ್ಲ?’ ಎಂದು ರೋಹಿತ್​ ಶೆಟ್ಟಿ ಕೇಳಿದರು.

ರೋಹಿತ್​ ಶೆಟ್ಟಿ ಹೇಳಿದ ಮಾತನ್ನು ಒಪ್ಪಿಕೊಳ್ಳದ ಆ ಪತ್ರಕರ್ತೆಯು ತಮ್ಮ ಪ್ರಶ್ನೆಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಅದಕ್ಕೂ ರೋಹಿತ್​ ಕಡೆಯಿಂದ ಖಡಕ್​ ಪ್ರತಿಕ್ರಿಯೆ ಬಂತು. ‘ಸಿನಿಮಾದ ಕಥೆಯಲ್ಲಿ ಪಾಕಿಸ್ತಾನದ ಒಬ್ಬ ಭಯೋತ್ಪಾದಕ ಇದ್ದರೆ ಅವನ ಜಾತಿ ಯಾವುದಾಗಿರುತ್ತದೆ? ಇಂಥ ವಿವಾದಗಳಿಂದ ಕೆಲವು ಪತ್ರಕರ್ತರ ಬಗ್ಗೆ ನನಗೆ ಇದ್ದ ಭಾವನೆಯೇ ಬದಲಾಗಿದೆ’ ಎಂದು ರೋಹಿತ್​ ಶೆಟ್ಟಿ ಹೇಳಿದ್ದಾರೆ.

ಸದ್ಯ ಈ ಸಂದರ್ಶನದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಕೆಲವರು ರೋಹಿತ್​ ಶೆಟ್ಟಿ ಪರವಾಗಿ ಕಮೆಂಟ್​ ಮಾಡುತ್ತಿದ್ದಾರೆ. ಮತ್ತೆ ಕೆಲವರು ರೋಹಿತ್​ ಅವರ ಮಾತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದೇನೇ ಇರಲಿ, ‘ಸೂರ್ಯವಂಶಿ’ ಚಿತ್ರದ ಗೆಲುವಿನಿಂದ ಅಕ್ಷಯ್​ ಕುಮಾರ್​ ಫ್ಯಾನ್ಸ್​ ಖುಸಿ ಆಗಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ನ.5ರಂದು ಬಿಡುಗಡೆಯಾದ ಈ ಚಿತ್ರ ಇಂದಿಗೂ ಅನೇಕ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಆ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ತನ್ನ ನಾಗಾಲೋಟ ಮುಂದುವರಿಸಿದೆ.

ಇದನ್ನೂ ಓದಿ:

ಯಾವ ಖಾನ್​ಗೂ ಕಮ್ಮಿ ಇಲ್ಲ ಅಕ್ಷಯ್​ ಕುಮಾರ್; ವಿಶ್ವಾದ್ಯಂತ 200 ಕೋಟಿ ಬಾಚಿದ ‘ಸೂರ್ಯವಂಶಿ’

ಬಾಕ್ಸಾಫೀಸ್ ಲೂಟಿ‌ ಮಾಡುತ್ತಿರುವ ಸೂರ್ಯವಂಶಿ ಚಿತ್ರಕ್ಕೆ ಅಕ್ಷಯ್, ಕತ್ರಿನಾ ಪಡೆದ ಸಂಭಾವನೆ ಇಷ್ಟೊಂದಾ?

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?