AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಮೊದಲ ದಿನ ‘ಸೂರ್ಯವಂಶಿ’ ಚಿತ್ರ ಗಳಿಸಿದ್ದೆಷ್ಟು? ಬಾಕ್ಸ್​ ಆಫೀಸ್​ನಲ್ಲಿ ಅಕ್ಷಯ್​ ಕುಮಾರ್​ ದಾಖಲೆ

Sooryavanshi first day collection: ದೀಪಾವಳಿ ಹಬ್ಬದ ರಜೆಯಲ್ಲಿ ‘ಸೂರ್ಯವಂಶಿ’ ನೋಡಲು ಶುಕ್ರವಾರ (ನ.5) ಭಾರಿ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ. ಶನಿವಾರ ಕೂಡ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ.

Akshay Kumar: ಮೊದಲ ದಿನ ‘ಸೂರ್ಯವಂಶಿ’ ಚಿತ್ರ ಗಳಿಸಿದ್ದೆಷ್ಟು? ಬಾಕ್ಸ್​ ಆಫೀಸ್​ನಲ್ಲಿ ಅಕ್ಷಯ್​ ಕುಮಾರ್​ ದಾಖಲೆ
ಅಕ್ಷಯ್​ ಕುಮಾರ್
TV9 Web
| Edited By: |

Updated on: Nov 06, 2021 | 5:31 PM

Share

ಅಕ್ಷಯ್​ ಕುಮಾರ್​, ಕತ್ರಿನಾ ಕೈಫ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಶುಕ್ರವಾರ (ನ.5) ಅದ್ದೂರಿಯಾಗಿ ಬಿಡುಗಡೆ ಆಯಿತು. ದೀಪಾವಳಿ ಹಬ್ಬದ ಪ್ರಯುಕ್ತ ತೆರೆಕಂಡಿರುವ ಈ ಸಿನಿಮಾಗೆ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಮೊದಲ ದಿನವೇ ‘ಸೂರ್ಯವಂಶಿ’ ಉತ್ತಮ ರೆಸ್ಪಾನ್ಸ್​ ಪಡೆದುಕೊಳ್ಳುವಲ್ಲಿ ಯಶಸ್ವಿ ಆಗಿದೆ. ಪರಿಣಾಮವಾಗಿ ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್​ ಆಗಿದೆ. ಒಂದೇ ದಿನಕ್ಕೆ ಬರೋಬ್ಬರಿ 26 ಕೋಟಿ ರೂ. ಕಮಾಯಿ ಮಾಡಿರುವುದು ಈ ಸಿನಿಮಾದ ಹೆಚ್ಚುಗಾರಿಕೆ.

ದೇಶದ ಬಹುತೇಕ ಕಡೆಗಳಲ್ಲಿ ಇನ್ನೂ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಸಿಕ್ಕಿಲ್ಲ. ಮಹಾರಾಷ್ಟ್ರ, ಗೋವಾ, ಜಾರ್ಖಾಂಡ್​, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಶೇ. 50ರಷ್ಟು ಆಕ್ಯುಪೆನ್ಸಿಗೆ ಮಾತ್ರ ಅವಕಾಶ ಇದೆ. ಈ ಪರಿಸ್ಥಿತಿಯಲ್ಲೂ ಮೊದಲ ದಿನ 26 ಕೋಟಿ ರೂ. ಬಾಚಿಕೊಂಡ ಮೊದಲ ಸಿನಿಮಾ ಎಂಬ ಖ್ಯಾತಿಗೆ ‘ಸೂರ್ಯವಂಶಿ’ ಪಾತ್ರವಾಗಿದೆ. ಆ ಮೂಲಕ ಅಕ್ಷಯ್​ ಕುಮಾರ್​ ಮುಡಿಗೆ ಇನ್ನೊಂದು ಗರಿ ಸೇರಿಕೊಂಡಂತಾಗಿದೆ.

ರೋಹಿತ್​ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳಿವೆ. ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ಅಕ್ಷಯ್​ ಕುಮಾರ್​ ನಟಿಸಿದ್ದರೆ, ಅವರ ಪತ್ನಿ ಪಾತ್ರದಲ್ಲಿ ಕತ್ರಿನಾ ಕೈಫ್​ ಕಾಣಿಸಿಕೊಂಡಿದ್ದಾರೆ. ಅತಿಥಿ ಪಾತ್ರಗಳಲ್ಲಿ ಅಜಯ್​ ದೇವಗನ್​ ಮತ್ತು ರಣವೀರ್​ ಸಿಂಗ್​ ನಟಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಸೂರ್ಯವಂಶಿ’ ಮೇಲೆ ನಿರೀಕ್ಷೆ ಹೆಚ್ಚಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ಸಿನಿಮಾ ಮೂಡಿಬಂದಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಬೆಳೆ ತೆಗೆಯುತ್ತಿದೆ.

ದೀಪಾವಳಿ ಹಬ್ಬದ ರಜೆಯಲ್ಲಿ ಶುಕ್ರವಾರ ಭಾರಿ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ. ಶನಿವಾರ (ನ.6) ಕೂಡ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಭಾನುವಾರ ಸಹ ಉತ್ತಮ ಕಲೆಕ್ಷನ್​ ಆಗಲಿದೆ. ಹಾಗಾಗಿ ಅತಿ ಶೀಘ್ರದಲ್ಲೇ ಈ ಸಿನಿಮಾ 100 ಕೋಟಿ ರೂ. ಕ್ಲಬ್​ ಸೇರಲಿದೆ ಎಂದು ಅಂದಾಜಿಸಲಾಗುತ್ತಿದೆ.

ಅಕ್ಷಯ್​ ಕುಮಾರ್​ ಸಿನಿಮಾಗಳು ಮಿನಿಮಮ್​​ ಬ್ಯಸಿನೆಸ್​ ಖಂಡಿತಾ ಮಾಡುತ್ತವೆ. ಅವರ ಚಿತ್ರಗಳಿಗೆ ಬಂಡವಾಳ ಹೂಡಿದರೆ ನಷ್ಟ ಆಗುವುದಿಲ್ಲ ಎಂಬುದು ಎಲ್ಲ ನಿರ್ಮಾಪಕರಿಗೆ ಚೆನ್ನಾಗಿ ಗೊತ್ತು. ಆ ಮಾತು ‘ಸೂರ್ಯವಂಶಿ’ ಮೂಲಕ ಮತ್ತೊಮ್ಮೆ ಸಾಬೀತಾಗಿದೆ. ನಿರ್ದೇಶಕ ರೋಹಿತ್​ ಶೆಟ್ಟಿ ಅವರಿಗೆ ಇನ್ನೊಂದು ಗೆಲುವು ಸಿಕ್ಕಂತಾಗಿದೆ.

ಇದನ್ನೂ ಓದಿ:

Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ