AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಜೀವನ ಆಧರಿಸಿದ ಸಿನಿಮಾಕ್ಕೆ ಕೊನೆಗೂ ಸಿಕ್ಕ ನಾಯಕ

Sourav Ganguly: ಭಾರತ ಕ್ರಿಕೆಟ್ ಇತಿಹಾಸದ ಪ್ರಮುಖ ನಾಯಕ ಸೌರವ್ ಗಂಗೂಲಿ. ಭಾರತ ಕ್ರಿಕೆಟ್ ತಂಡ ಯೋಚಿಸುತ್ತಿದ್ದ ರೀತಿಯನ್ನೇ ಬದಲಾಯಿಸಿದ ನಾಯಕ ಸೌರವ್ ಗಂಗೂಲಿ. ಸೌರವ್ ಗಂಗೂಲಿ ಬಯೋಪಿಕ್ ಬಗ್ಗೆ 2019 ರಿಂದಲೂ ಚರ್ಚೆಗಳು ನಡೆಯುತ್ತಿವೆ. ಇದೀಗ ಸೌರವ್ ಗಂಗೂಲಿ ಪಾತ್ರಕ್ಕೆ ನಟನ ಅಂತಿಮಗೊಳಿಸಲಾಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಚಾಲ್ತಿಯಲ್ಲಿದೆ.

ಸೌರವ್ ಗಂಗೂಲಿ ಜೀವನ ಆಧರಿಸಿದ ಸಿನಿಮಾಕ್ಕೆ ಕೊನೆಗೂ ಸಿಕ್ಕ ನಾಯಕ
Saurav Ganguly
ಮಂಜುನಾಥ ಸಿ.
|

Updated on: Apr 03, 2025 | 4:16 PM

Share

ಸೌರವ್ ಗಂಗೂಲಿ (sourav ganguly) ಭಾರತ ಕ್ರಿಕೆಟ್ ಇತಿಹಾಸದ ಅತ್ಯಂತ ಪ್ರಮುಖ ನಾಯಕ. ಭಾರತ ಕ್ರಿಕೆಟ್ ತಂಡದ (Indian Cricket Team) ಆಟದ ವಿಧಾನಕ್ಕೆ ಪ್ರಮುಖ ತಿರುವು ನೀಡಿದ ನಾಯಕ ಸೌರವ್ ಗಂಗೂಲಿ. ಆಡಿದರೆ ಸಾಕು ಎಂಬ ಮನಸ್ಥಿತಿಯಿಂದ ಗೆಲ್ಲಲೇ ಬೇಕು ಎಂಬ ಮನಸ್ಥಿತಿಗೆ ತಂಡವನ್ನು ತಂದು ನಿಲ್ಲಿಸಿದ್ದು ನಾಯಕ ಸೌರವ್ ಗಂಗೂಲಿ. ಅಪ್ರತಿಮ ನಾಯಕನ ಜೀವನ ಸಿನಿಮಾ ಆಗಬೇಕು ಎಂಬ ಮಾತು 2019 ರಿಂದಲೂ ಕೇಳಿ ಬರುತ್ತಿದೆ. 2019ರಲ್ಲಿಯೇ ಸೌರವ್ ಗಂಗೂಲಿ ಜೀನವನ್ನು ಸಿನಿಮಾ ಮಾಡಲು ನಿರ್ಮಾಣ ಸಂಸ್ಥೆಯೊಂದು ಹಕ್ಕು ಖರೀದಿ ಮಾಡಿದೆ. ಆದರೆ ಈವರೆಗೆ ಸಿನಿಮಾ ಸೆಟ್ಟೇರಿಲ್ಲ. ಆದರೆ ಇತ್ತೀಚೆಗೆ ಮತ್ತೆ ಈ ಸಿನಿಮಾ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ.

ಸೌರವ್ ಗಂಗೂಲಿ ಪಾತ್ರಕ್ಕೆ ನಟನ ಆಯ್ಕೆ ಬಗ್ಗೆ ಆಗಾಗ್ಗೆ ಸುದ್ದಿಗಳು ಹರಿದಾಡುತ್ತಲೇ ಇವೆ. ಮೊದಲಿಗೆ ರಣ್​ಬೀರ್ ಕಪೂರ್ ಸೌರವ್ ಗಂಗೂಲಿ ಪಾತ್ರದಲ್ಲಿ ಮಿಂಚಲಿದ್ದಾರೆ ಎನ್ನಲಾಗಿತ್ತು. ಅದಾದ ಬಳಿಕ ಇಲ್ಲ ಆಯುಷ್ಮಾನ್ ಖುರಾನಾ ಸೌರವ್ ಗಂಗೂಲಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿ ಬಂತು. ಆದರೆ ಈಗ ಹರಿದಾಡುತ್ತಿರುವ ಹೊಸ ಸುದ್ದಿಯಂತೆ ನಟ ರಾಜ್​ಕುಮಾರ್ ರಾವ್ ಗಂಗೂಲಿ ಪಾತ್ರದಲ್ಲಿ ನಟಿಸಲಿದ್ದಾರಂತೆ. ರಾಜ್​ಕುಮಾರ್ ರಾವ್ ಜೊತೆಗೆ ಕೆಲ ಬೆಂಗಾಲಿ ನಟರುಗಳು ಸಹ ಸಿನಿಮಾದ ಭಾಗ ಆಗಲಿದ್ದಾರಂತೆ.

ಇದನ್ನೂ ಓದಿ:ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್

ಇದನ್ನೂ ಓದಿ
Image
ಅನುಮತಿ ಇಲ್ಲದೆ ಚಿತ್ರೀಕರಣ, ರಾಣಾ ಸಿನಿಮಾ ಮೇಲೆ ಅರಣ್ಯ ಇಲಾಖೆಯಿಂದ ದಾಳಿ
Image
ಪ್ರಭಾಸ್ ಕಾರಣದಿಂದ ರಿಷಬ್ ಶೆಟ್ಟಿ ಸಿನಿಮಾ ಮೇಲೆ ಕರಿನೆರಳು
Image
ರನ್ಯಾ ರಾವ್ ಪ್ರಕರಣ, ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ
Image
ಮೊಮ್ಮಗ ಮಾಡಿದ ಸಾಲದಿಂದ ಹರಾಜಿಗೆ ಬಂತು ಶಿವಾಜಿ ಗಣೇಶನ್ ಮನೆ

ಸೌರವ್ ಗಂಗೂಲಿ ಜೀವನ ಆಧರಿಸಿದ ಸಿನಿಮಾ ನಿರ್ದೇಶನ ಮಾಡಲಿರುವುದು ವಿಕ್ರಮಾದಿತ್ಯ ಮೋಟ್ವಾನಿ. ಸೌರವ್ ಗಂಗೂಲಿಯ ಆಪ್ತ ಹಾಗೂ ಈ ಸಿನಿಮಾದ ಸಹ ನಿರ್ಮಾಪಕರೂ ಆಗಿರುವ ಸಂಜಯ್ ದಾಸ್ ಹೇಳಿರುವಂತೆ ಸೌರವ್ ಸಿನಿಮಾದ ಚಿತ್ರಕತೆಯನ್ನು ಮೊದಲ ಡ್ರಾಫ್ಟ್ ಅನ್ನು ಓದಿ ಮುಗಿಸಿದ್ದು ಕೆಲ ಬದಲಾವಣೆಗಳನ್ನು ಸೂಚಿಸಿದ್ದಾರಂತೆ. ಚಿತ್ರಕತೆಯ ಅಂತಿಮ ಡ್ರಾಫ್ಟ್ ಮಾರ್ಚ್ ತಿಂಗಳಲ್ಲಿ ರೆಡಿಯಾಗಲಿದ್ದು, ಅದೇ ತಿಂಗಳು ನಟರು ಸಹ ಅಂತಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಸೌರವ್ ಗಂಗೂಲಿ ಕುರಿತ ಸಿನಿಮಾ ಅವರ ಬಾಲ್ಯ, ಯೌವ್ವನ, ಕ್ರಿಕೆಟ್ ದಿನಗಳು, ಅವರ ನಾಯಕತ್ವದ ಜೊತೆಗೆ ಅವರ ಖಾಸಗಿ ವಿಷಯಗಳ ಮೇಲೂ ಬೆಳಕು ಚೆಲ್ಲಲಿದೆಯಂತೆ. ಗಂಗೂಲಿಯ ಜೀವನ ಚಿತ್ರದ ಜೊತೆಗೆ ಪಶ್ಚಿಮ ಬಂಗಾಳದ ಒಟ್ಟಾರೆ ಕತೆಯನ್ನೂ ಕಟ್ಟಿಕೊಡುವ ಪ್ರಯತ್ನ ಸಹ ಸಿನಿಮಾದಲ್ಲಿ ಇರಲಿದೆಯಂತೆ. ಅಂದಹಾಗೆ ಈ ಸಿನಿಮಾನಲ್ಲಿ ಗಂಗೂಲಿ ಸಹ ಅತಿಥಿ ಪಾತ್ರದಲ್ಲಿ ಬಂದು ಹೋಗಲಿದ್ದಾರಂತೆ.

ಕ್ರಿಕೆಟಿಗರಾದ ಕಪಿಲ್ ದೇವ್, ಎಂಎಸ್ ಧೋನಿ, ಮುತ್ತಯ್ಯ ಮುರಳೀಧರನ್, ಮಿಥಾಲಿ ರಾಜ್, ಪ್ರವೀಣ್ ತಾಂಬೆ, ಮೊಹಮ್ಮದ್ ಅಜರುದ್ಧೀನ್ ಅವರ ಜೀವನದ ಬಗ್ಗೆ ಸಿನಿಮಾಗಳು ಈಗಾಗಲೇ ತೆರೆಗೆ ಬಂದಿವೆ. ಯುವರಾಜ್ ಸಿಂಗ್ ಜೀವನ ಸಹ ಸಿನಿಮಾ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ