AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly Biopic: ಬಯೋಪಿಕ್​ಗೆ ​ಅನುಮತಿ ನೀಡಿದ ಸೌರವ್​ ಗಂಗೂಲಿ; ದಾದಾ ಪಾತ್ರಕ್ಕೆ ರಣಬೀರ್​ ಕಪೂರ್​?

Sourav Ganguly: ಬಾಲಿವುಡ್​ನ ದೊಡ್ಡ ಪ್ರೊಡಕ್ಷನ್​ ಕಂಪನಿಯೊಂದು ಸೌರವ್​ ಗಂಗೂಲಿಯವರ ಬಯೋಪಿಕ್​ ಮಾಡಲು ಮುಂದೆ ಬಂದಿದೆ. 200ರಿಂದ 250 ಕೋಟಿ ರೂ. ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ.

Sourav Ganguly Biopic: ಬಯೋಪಿಕ್​ಗೆ ​ಅನುಮತಿ ನೀಡಿದ ಸೌರವ್​ ಗಂಗೂಲಿ; ದಾದಾ ಪಾತ್ರಕ್ಕೆ ರಣಬೀರ್​ ಕಪೂರ್​?
ಸೌರವ್​ ಗಂಗೂಲಿ, ರಣಬೀರ್​ ಕಪೂರ್​
TV9 Web
| Edited By: |

Updated on: Jul 13, 2021 | 4:43 PM

Share

ಸಿನಿಮಾ ಮತ್ತು ಕ್ರೀಡೆಗೆ ಹತ್ತಿರದ ನಂಟು. ಕ್ರೀಡಾ ಜಗತ್ತಿನಲ್ಲಿ ಸಾಧನೆ ಮಾಡಿದ ಅನೇಕರ ಜೀವನದ ಕತೆಗಳು ಸಿನಿಮಾ ಆಗಿವೆ. ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಸೌರವ್​ ಗಂಗೂಲಿ ಅವರ ಬಯೋಪಿಕ್ ಮಾಡಲು ಈಗ ಸಿದ್ಧತೆ ನಡೆಯುತ್ತಿದೆ. ಬಹಳ ದಿನಗಳಿಂದ ಈ ಬಗ್ಗೆ ಸುದ್ದಿ ಹರಿದಾಡುತ್ತಿತ್ತು. ಆದೀಗ ಅಧಿಕೃತ ಆಗಿದೆ. ಸ್ವತಃ ಸೌರವ್​ ಗಂಗೂಲಿ ಅವರೇ ತಮ್ಮ ಬಯೋಪಿಕ್​ಗೆ ಅನುಮತಿ ನೀಡಿರುವುದನ್ನು ಖಚಿತಪಡಿಸಿದ್ದಾರೆ. ಅವರ ಪಾತ್ರದಲ್ಲಿ ರಣಬೀರ್​ ಕಪೂರ್​ ನಟಿಸುವ ಸಾಧ್ಯತೆ ದಟ್ಟವಾಗಿದೆ.

‘ಹೌದು, ನನ್ನ ಬಯೋಪಿಕ್​ ಮಾಡಲು ನಾನು ಅನುಮತಿ ನೀಡಿದ್ದೇನೆ. ಈ ಸಿನಿಮಾ ಹಿಂದಿಯಲ್ಲಿ ಮೂಡಿಬರಲಿದೆ. ನಿರ್ದೇಶಕರು ಯಾರು ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಎಲ್ಲವೂ ಅಂತಿಮವಾಗಲು ಇನ್ನೂ ಕೆಲವು ದಿನಗಳ ಸಮಯ ಬೇಕಾಗಲಿದೆ’ ಎಂದು ಗಂಗೂಲಿ ಹೇಳಿದ್ದಾರೆ. ಈ ಬಯೋಪಿಕ್​ನಲ್ಲಿ ಗಂಗೂಲಿ ಅವರ ಆರಂಭದ ಜೀವನದಿಂದ ಹಿಡಿದು ಅವರು ಬಿಸಿಸಿಐ ಅಧ್ಯಕ್ಷರಾಗುವವರೆಗಿನ ಅನೇಕ ವಿವರಗಳು ಇರಲಿವೆ.

ಮೂಲಗಳ ಪ್ರಕಾರ ದೊಡ್ಡ ಪ್ರೊಡಕ್ಷನ್​ ಕಂಪನಿಯೊಂದು ಸೌರವ್​ ಗಂಗೂಲಿಯವರ ಬಯೋಪಿಕ್​ ಮಾಡಲು ಮುಂದೆ ಬಂದಿದೆ. 200ರಿಂದ 250 ಕೋಟಿ ರೂ. ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ. ಸ್ಕ್ರಿಪ್ಟ್​ ಕೆಲಸಗಳು ಜಾರಿಯಲ್ಲಿದ್ದು, ಗಂಗೂಲಿ ಜೊತೆ ಅನೇಕ ಮೀಟಿಂಗ್​ಗಳು ನಡೆದಿವೆ.

ಹಾಗಾದರೆ ಗಂಗೂಲಿ ಪಾತ್ರದಲ್ಲಿ ನಟಿಸುವ ಕಲಾವಿದರ ಯಾರು? ಸದ್ಯಕ್ಕೆ ಇದು ಹಾಟ್​ ಟಾಪಿಕ್ ಆಗಿದೆ. ತಮ್ಮ ಪಾತ್ರದಲ್ಲಿ ಬಾಲಿವುಡ್​ ನಟ ರಣಬೀರ್​ ಕಪೂರ್​ ಅವರು ನಟಿಸಿದರೆ ಸೂಕ್ತ ಎಂದು ಸ್ವತಃ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಇಬ್ಬರು ನಟರ ಹೆಸರುಗಳು ಹರಿದಾಡುತ್ತಿವೆ. ಅಂತಿಮವಾಗಿ ಯಾರು ಆಯ್ಕೆ ಆಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

ಈ ಹಿಂದೆ ಎಂಎಸ್​ ಧೋನಿ ಜೀವನಾಧಾರಿತ ‘ಎಂಎಸ್​ ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಮೊಹಮ್ಮದ್​ ಅಜರುದ್ದೀನ್ ಜೀವನಾಧಾರಿತ ಸಿನಿಮಾ ಹೇಳಿಕೊಳ್ಳುವಷ್ಟು ಯಶಸ್ಸು ಗಳಿಸಿರಲಿಲ್ಲ. ಸಚಿನ್​ ಜೀವನದ ಕುರಿತು ‘ಸಚಿನ್​: ಎ ಬಿಲಿಯನ್​ ಡ್ರೀಮ್ಸ್​’ ಡಾಕ್ಯುಡ್ರಾಮಾ ಮೂಡಿಬಂದಿತ್ತು. 1983ರಲ್ಲಿ ಭಾರತ ತಂಡ ಕ್ರಿಕೆಟ್​ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ‘83’ ಚಿತ್ರ ತಯಾರಾಗಿದೆ. ಲಾಕ್​ಡೌನ್​ ಕಾರಣದಿಂದ ಅದರ ಬಿಡುಗಡೆ ವಿಳಂಬ ಆಗುತ್ತಿದೆ.

ಇದನ್ನೂ ಓದಿ:

ಗಂಡು ಎನ್ನುವ ಹಣೆಪಟ್ಟಿ, ಅತ್ಯಾಚಾರ ಆರೋಪ: ಅಥ್ಲೀಟ್​ ಪಿಂಕಿ ಕುರಿತು ಬಯೋಪಿಕ್​

32 ವರ್ಷದ ಕೆರಿಯರ್​ನಲ್ಲಿ ಮೊಟ್ಟಮೊದಲ ಬಾರಿಗೆ ಬಯೋಪಿಕ್​ಗೆ ಸಹಿ ಹಾಕಿದ ಸಲ್ಮಾನ್​ ಖಾನ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್