AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly’s biopic: ತೆರೆಮೇಲೆ ‘ದಾದಾಗಿರಿ’: ಯಾರಾಗಲಿದ್ದಾರೆ ಸೌರವ್ ಗಂಗೂಲಿ ಚಿತ್ರದ ನಾಯಕ?

Sourav Ganguly: ದಾದಾ ಅವರ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಇದೀಗ ಕುತೂಹಲಕಾರಿ. ಏಕೆಂದರೆ ಕ್ರಿಕೆಟ್ ಅಂಗಳದ ಆಕ್ರಮಣಕಾರಿ ನಾಯಕ ಎಂದೇ ಬಿಂಬಿತರಾಗಿದ್ದ ಸೌರವ್ ಗಂಗೂಲಿ ಅವರ ಪಾತ್ರಕ್ಕೆ ನ್ಯಾಯ ಒದಗಿಸುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ.

Sourav Ganguly's biopic: ತೆರೆಮೇಲೆ 'ದಾದಾಗಿರಿ': ಯಾರಾಗಲಿದ್ದಾರೆ ಸೌರವ್ ಗಂಗೂಲಿ ಚಿತ್ರದ ನಾಯಕ?
Sourav Ganguly
TV9 Web
| Updated By: ಝಾಹಿರ್ ಯೂಸುಫ್|

Updated on:Sep 09, 2021 | 3:19 PM

Share

ಬಾಲಿವುಡ್​ಗೂ (Bollywood) ಕ್ರಿಕೆಟ್​ಗೂ (Cricket) ಅವಿನಾಭಾವ ಸಂಬಂಧ ಇರೋದು ಗೊತ್ತೇ ಇದೆ. ಈ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವಂತೆ ಅನೇಕ ಕ್ರಿಕೆಟ್ ಆಧಾರಿತ ಚಿತ್ರಗಳು ತೆರೆ ಕಂಡಿವೆ. ಅದರಲ್ಲೂ ಸೂಪರ್ ಡೂಪರ್ ಎನಿಸಿಕೊಂಡಿದ್ದು ಟೀಮ್ ಇಂಡಿಯಾ (Team India) ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ಜೀವನಾಧಾರಿತ ಚಿತ್ರ. 2016 ರಲ್ಲಿ ‘ಎಂಎಸ್ ಧೋನಿ-ಅನ್​ಟೋಲ್ಡ್ ಸ್ಟೋರಿ’ ಹೆಸರಿನಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕನ ತೆರೆಮರೆಯ ಕಹಾನಿ ತಿಳಿಸಿದ್ದ ಚಿತ್ರವು ಬಾಕ್ಸಾಫೀಸ್​ನಲ್ಲಿ ಧೂಳೆಬ್ಭಿಸಿತ್ತು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಫಿಕ್ಸಿಂಗ್ ಕಹಾನಿ ತಿಳಿಸುವ ‘ಅಜರ್’ (Azhar) ಸಿನಿಮಾ ತೆರೆಕಂಡರೂ ಗಲ್ಲಾಪೆಟ್ಟಿಯನ್ನು ಅಲುಗಾಡಿಸುವಲ್ಲಿ ವಿಫಲವಾಗಿತ್ತು. ಆ ಬಳಿಕ ಭಜರಂಗಿ ಭಾಯಿಜಾನ್ ನಿರ್ದೇಶಕ ಕಬೀರ್ ಖಾನ್ ಕೈಗೆತ್ತಿಕೊಂಡ ’83’ ಸಿನಿಮಾ ಇನ್ನೇನು ತೆರೆ ಕಾಣಲು ಸಿದ್ಧವಾಗಿದೆ. ಈ ಚಿತ್ರವು 1983ರ ವಿಶ್ವಕಪ್ ಗೆಲುವು ಹಾಗೂ ಕಪಿಲ್ ದೇವ್ ಅವರ ತೆರೆ ಹಿಂದಿನ ಚರಿತ್ರೆಯನ್ನು ತಿಳಿಸಲಿದೆ. ಇದಾದ ಬಳಿಕ ಬಾಲಿವುಡ್​ನಲ್ಲಿ ಮತ್ಯಾವ ಕ್ರಿಕೆಟಿಗನ ಬಯೋಪಿಕ್ ಅನೌನ್ಸ್ ಆಗಿರಲಿಲ್ಲ. ಇದೀಗ ಬಾಲಿವುಡ್ ಕ್ರಿಕೆಟ್ ಕಹಾನಿಗಳ ಪಟ್ಟಿಗೆ ಹೊಸ ಸೇರ್ಪಡೆ ಸೌರವ್ ಗಂಗೂಲಿ (Sourav Ganguly).

ಹೌದು, ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜೀವನಾಧಾರಿತ ಚಿತ್ರದ ಕುರಿತು ಬಿಗ್ ಅಪ್​ಡೇಟ್ ಹೊರಬಿದ್ದಿದೆ. ಬಾಲಿವುಡ್​ನ ಜನಪ್ರಿಯ ಪ್ರೊಡಕ್ಷನ್ ಹೌಸ್ ಲವ್ ಫಿಲಂಸ್ ಗಂಗೂಲಿ ಜೀವನ ಚರಿತ್ರೆಯನ್ನು ಸಿನಿಮಾ ಮಾಡುವುದಾಗಿ ಘೋಷಿಸಿದೆ. ಈ ಹಿಂದೆ ಮಲಾಂಗ್, ದೇ ದೇ ಪ್ಯಾರ್ ದೇ ಸೇರಿದಂತೆ ಐದಾರು ಸಿನಿಮಾಗಳನ್ನು ನಿರ್ಮಿಸಿರುವ ಲವ್ ಫಿಲಂಸ್, ಈ ಬಾರಿ ಬಯೋಪಿಕ್ ಕೈಗೊತ್ತಿಕೊಂಡಿರುವುದು ವಿಶೇಷ.

ಈ ಬಗ್ಗೆ ಟ್ವೀಟ್ ಮಾಡಿರುವ ಲವ್ ಫಿಲಂಸ್, ದಾದಾ ಸೌರವ್ ಗಂಗೂಲಿ ಅವರ ಬಯೋಪಿಕ್ ಚಿತ್ರಕ್ಕೆ ಬಂಡವಾಳ ಹೂಡಲಿದ್ದೇವೆ ಎಂದು ತಿಳಿಸಲು ಥ್ರಿಲ್ ಆಗಿದ್ದೇವೆ. ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಕ್ಕೆ ನಮಗೆ ಗೌರವವಿದೆ. ಉತ್ತಮ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದರ ಹೊರತಾಗಿ ನಿರ್ಮಾಣ ಸಂಸ್ಥೆ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ.

ತಮ್ಮ ಬಯೋಪಿಕ್ ಬಗ್ಗೆ ಪ್ರತಿಕ್ರಿಯಿಸಿರುವ ಗಂಗೂಲಿ, ಕ್ರಿಕೆಟ್ ನನ್ನ ಜೀವನ. ಈ ಕ್ರೀಡೆಯು ನನಗೆ ಆತ್ಮವಿಶ್ವಾಸ ನೀಡಿದೆ. ಎಲ್ಲರ ಮುಂದೆ ತಲೆಯೆತ್ತಿ ನಡೆಯುವಂತೆ ಮಾಡಿದೆ. ಇದೀಗ ಅದೇ ಕಥೆಯನ್ನು ಲವ್ ಫಿಲಂಸ್ ಚಿತ್ರವಾಗಿಸುತ್ತಿದೆ. ನನ್ನ ಜೀವನವನ್ನು ದೊಡ್ಡ ಪರದೆಯಲ್ಲಿ ತೋರಿಸುತ್ತಿರುವ ಬಗ್ಗೆ ನಾನು ಕೂಡ ಥ್ರಿಲ್ ಆಗಿದ್ದೇನೆ ಎಂಬಾರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.

ಇದಾಗ್ಯೂ ದಾದಾ ಅವರ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಇದೀಗ ಕುತೂಹಲಕಾರಿ. ಏಕೆಂದರೆ ಕ್ರಿಕೆಟ್ ಅಂಗಳದ ಆಕ್ರಮಣಕಾರಿ ನಾಯಕ ಎಂದೇ ಬಿಂಬಿತರಾಗಿದ್ದ ಸೌರವ್ ಗಂಗೂಲಿ ಅವರ ಪಾತ್ರಕ್ಕೆ ನ್ಯಾಯ ಒದಗಿಸುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಪ್ರತಿಭಾವಂತ ಹಾಗೂ ಜನಪ್ರಿಯ ನಟನನ್ನೇ ಆಯ್ಕೆ ಮಾಡಬೇಕಾದ ಅನಿವಾರ್ಯತೆ ನಿರ್ಮಾಣ ಸಂಸ್ಥೆ ಮುಂದಿದೆ.

ಕೆಲ ಮೂಲಗಳ ಮಾಹಿತಿ ಪ್ರಕಾರ, ಸೌರವ್ ಗಂಗೂಲಿ ಜೀವನ ಚರಿತ್ರೆಯ ಕಥೆಯನ್ನು ಖ್ಯಾತ ಬಾಲಿವುಡ್ ನಟ ರಣ್​ಬೀರ್ ಕಪೂರ್ ಮುಂದಿಡಲಾಗಿದೆ. ಅಷ್ಟೇ ಅಲ್ಲದೆ ಒಂದು ಸುತ್ತಿನ ಮಾತುಕತೆಯನ್ನು ಕೂಡ ಮುಗಿಸಿದೆ ಎನ್ನಲಾಗಿದೆ. ಅತ್ತ ಈಗಾಗಲೇ ಸಂಜಯ್ ದತ್ ಅವರ ಜೀವನಾಧಾರಿತ ‘ಸಂಜು’ ಚಿತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿರುವ ರಣ್​ಬೀರ್, ದಾದಾ ಪಾತ್ರಕ್ಕೆ ಸೂಕ್ತ ಆಯ್ಕೆ ಎಂಬ ಮಾತುಗಳು ಕೂಡ ಬಾಲಿವುಡ್​ ಅಂಗಳದಲ್ಲಿದೆ. ಹೀಗಾಗಿ ತೆರೆಮೇಲೆ ರಣ್​ಬೀರ್ ಕಪೂರ್ ದಾದಾಗಿರಿ ತೋರಿಸಿದ್ರೆ ಆಶ್ಚರ್ಯಪಡಬೇಕಿಲ್ಲ.

ಇದನ್ನೂ ಓದಿ:  MS Dhoni: 3 ವಿಶ್ವಕಪ್​ ಮೇಲೆ ಬಿಸಿಸಿಐ ಕಣ್ಣು: ಟೀಮ್ ಇಂಡಿಯಾದ ಮುಂದಿನ ಕೋಚ್ ಧೋನಿ?

ಇದನ್ನೂ ಓದಿ: ವಿಚ್ಛೇದಿತ ಮಹಿಳೆಯರನ್ನು ಪ್ರೀತಿಸಿ ಮದುವೆಯಾದ ಭಾರತೀಯ ಕ್ರಿಕೆಟಿಗರು ಇವರೇ

ಇದನ್ನೂ ಓದಿ: Shardul Thakur: ಮುಂಬೈ ಲೋಕಲ್ ಟ್ರೈನ್ ಹುಡುಗ ಇದೀಗ ಟೀಮ್ ಇಂಡಿಯಾ ಸೆನ್ಸೇಷನ್

ಇದನ್ನೂ ಓದಿ: IPL 2022: ಐಪಿಎಲ್​ನ 2 ಹೊಸ ತಂಡಗಳಿಗಾಗಿ 6 ನಗರಗಳ ಆಯ್ಕೆ

(Sourav Ganguly’s biopic movie to be produced by Luv films)

Published On - 3:13 pm, Thu, 9 September 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!