AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ಹಿಂದಿ ಚಿತ್ರಗಳನ್ನು ಮಾಡದಂತೆ ಸೌತ್​ ನನ್ನನ್ನು ಉಳಿಸುತ್ತಿದೆ ಎಂದ ಸೋನು ಸೂದ್

ಚಿತ್ರರಂಗದಲ್ಲಿ ಅವರಿಗೆ ಇದು ಸೆಕೆಂಡ್ ಇನ್ನಿಂಗ್ಸ್​. ಈ ಕುರಿತು ಅವರು ಮಾತನಾಡಿದ್ದಾರೆ. ಅಲ್ಲದೆ ದಕ್ಷಿಣದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿರುವುದೇಕೆ ಎಂಬುದಕ್ಕೆ ಕಾರಣ ನೀಡಿದ್ದಾರೆ.

ಕೆಟ್ಟ ಹಿಂದಿ ಚಿತ್ರಗಳನ್ನು ಮಾಡದಂತೆ ಸೌತ್​ ನನ್ನನ್ನು ಉಳಿಸುತ್ತಿದೆ ಎಂದ ಸೋನು ಸೂದ್
ಸೋನು ಸೂದ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 28, 2022 | 6:10 PM

Share

ಸೋನು ಸೂದ್ ಅವರು (Sonu Sood) ಅನೇಕರ ಪಾಲಿಗೆ ಅಕ್ಷರಶಃ ದೇವರಾಗಿದ್ದಾರೆ. ಅವರನ್ನು ದೇವರಂತೆ ಅನೇಕರು ಪೂಜಿಸುತ್ತಿದ್ದಾರೆ. ವಿಲನ್ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡವರು ಸೋನು ಸೂದ್. ರಿಯಲ್​ ಲೈಫ್​ನಲ್ಲಿ ಹೀರೋ ಆದ ಅವರಿಗೆ ವಿಲನ್ ಪಾತ್ರ ಒಪ್ಪಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ. ಈ ಕಾರಣಕ್ಕೆ ಅವರು ಪಾಸಿಟಿವ್​ ಪಾತ್ರಗಳಲ್ಲಿ ಮಾತ್ರ ನಟಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಕಾರಣಕ್ಕೆ ಚಿತ್ರರಂಗದಲ್ಲಿ ಅವರಿಗೆ ಇದು ಸೆಕೆಂಡ್ ಇನ್ನಿಂಗ್ಸ್​. ಈ ಕುರಿತು ಅವರು ಮಾತನಾಡಿದ್ದಾರೆ. ಅಲ್ಲದೆ ದಕ್ಷಿಣದ ಸಿನಿಮಾಗಳಲ್ಲಿ (South Indian Movies) ಹೆಚ್ಚು ನಟಿಸುತ್ತಿರುವುದೇಕೆ ಎಂಬುದಕ್ಕೆ ಕಾರಣ ನೀಡಿದ್ದಾರೆ.

‘ಇದು ನನ್ನ ಜೀವನದ ಅತ್ಯುತ್ತಮ ಹಂತ. ನಾನು ಎತ್ತರದಲ್ಲಿ ಇದ್ದೀನೋ ಅಥವಾ ಇಲ್ಲವೋ ಎಂಬುದು ಗೊತ್ತಿಲ್ಲ. ಆದರೆ, ನನಗೆ ಈ ಹಂತ ಖುಷಿ ನೀಡುತ್ತಿದೆ. 100-200 ಕೋಟಿ ರೂ. ಬಜೆಟ್​ನ ಸಿನಿಮಾದ ಭಾಗವಾಗುವುದನ್ನು ನಾವು ಯಶಸ್ಸು ಎಂದು ಕರೆಯುತ್ತೇವೆ. ಆದರೆ ಸಾಮಾನ್ಯ ಜನರೊಂದಿಗೆ ಕನೆಕ್ಟ್​ ಆಗುವುದು, ಏನೂ ಇಲ್ಲದವರ ಜತೆ ಸಂಪರ್ಕ ಸಾಧಿಸುವುದು ನನಗೆ ಅತ್ಯಂತ ಖುಷಿ ನೀಡುತ್ತದೆ’ ಎಂದಿದ್ದಾರೆ ಅವರು.

‘ಮುಂಬೈಗೆ ಬಂದಾಗ ಪಾಸಿಟಿವ್​ ರೋಲ್ ಮಾಡಬೇಕು, ಲೀಡ್​ ರೋಲ್ ಮಾಡಬೇಕು ಎಂದು ಕನಸು ಕಂಡಿದ್ದೆ. ಆದರೆ, ನನಗೆ ಸಿನಿಮಾ ಇಂಡಸ್ಟ್ರಿಯ ಹಿನ್ನೆಲೆ ಇಲ್ಲ. ಹೀಗಾಗಿ, ವಿಲನ್​ ರೋಲ್​ ಸಿಕ್ಕಿತು. ನನಗೆ ಈ ಪಾತ್ರಗಳನ್ನು ಏಕೆ ನೀಡುತ್ತಾರೆ ಎಂದು ನಾನು ಕೆಲವೊಮ್ಮೆ ಸ್ವಲ್ಪ ಅಸಮಾಧಾನಗೊಳ್ಳುತ್ತಿದ್ದೆ. ಆದರೆ ನಂತರ ನನಗೆ ಮನದಟ್ಟಾದ ಸಂಗತಿ ಎಂದರೆ, ನಾನೊಬ್ಬರ ನಟ. ರಂಜಿಸುವುದು ಮಾತ್ರ ನನ್ನ ಕೆಲಸವಾಗಬೇಕು. ಕೆಲವೊಮ್ಮೆ ಸಿನಿಮಾದಲ್ಲಿ ಹೀರೋಗಿಂತ ಹೆಚ್ಚಾಗಿ ಜನರು ನನ್ನನ್ನು ಪ್ರೀತಿಸಿದ್ದಾರೆ’ ಎಂಬುದು ಸೋನು ಸೂದ್ ಮಾತು.

ಇದನ್ನೂ ಓದಿ
Image
Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್
Image
‘ಪೋಷಕರಾಗುವ ಬಗ್ಗೆ ಯೋಚಿಸುತ್ತಿದ್ದೀರಾ?’; ವೈಯಕ್ತಿಕ ಜೀವನದ ಕುರಿತ ಪ್ರಶ್ನೆಗೆ ರಣವೀರ್ ಉತ್ತರ ಏನಿತ್ತು?
Image
Emma Chamberlain: ಭಾರತದ ರಾಜರಿಗೆ ಸೇರಿದ ನೆಕ್ಲೇಸ್ ಧರಿಸಿ ಹೆಜ್ಜೆ ಹಾಕಿದ್ರಾ ಖ್ಯಾತ ತಾರೆ? ಏನಿದರ ಇತಿಹಾಸ?
Image
Thrivikrama Release Date: ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ರಿಲೀಸ್ ಡೇಟ್ ಅನೌನ್ಸ್

ಇದನ್ನೂ ಓದಿ: ಸೋನು ಸೂದ್​ಗಾಗಿ ಸ್ಕ್ರಿಪ್ಟ್​ ಬದಲಾಯಿಸುತ್ತಿದ್ದಾರೆ ನಿರ್ದೇಶಕರು; ಅಚ್ಚರಿಯ ವಿಚಾರ ಬಿಚ್ಚಿಟ್ಟ ಸೋನು ಸೂದ್

ಇತ್ತೀಚೆಗೆ ಬಹುತೇಕ ಹಿಂದಿ ಸಿನಿಮಾಗಳು ನೆಲಕಚ್ಚುತ್ತಿವೆ. ದಕ್ಷಿಣದಿಂದ ಆಫರ್​ಗಳು ಬರದೆ ಇದ್ದರೆ ಎಲ್ಲಾ ಹಿಂದಿ ಚಿತ್ರಗಳನ್ನು ಒಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರುತ್ತಿತ್ತು ಎಂಬುದು ಸೋನು ಸೂದ್ ಅಭಿಪ್ರಾಯ. ‘ನಾನು ತಮಿಳು, ತೆಲುಗು ಅಥವಾ ಹಿಂದಿ ಯಾವುದೇ ಭಾಷೆಯಲ್ಲಿ ಸಿನಿಮಾ ಮಾಡಲಿ ಮೊದಲು ಸ್ಕ್ರಿಪ್ಟ್​ ನೋಡುತ್ತೇನೆ. ಕೆಟ್ಟ ಹಿಂದಿ ಚಿತ್ರಗಳನ್ನು ಮಾಡದಂತೆ ದಕ್ಷಿಣದ ಸಿನಿಮಾ ಇಂಡಸ್ಟ್ರಿ ನನ್ನನ್ನು ಉಳಿಸುತ್ತಿದೆ’ ಎಂದಿದ್ದಾರೆ ಅವರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ