ಕತ್ರಿನಾ ಕೈಫ್​-ವಿಕ್ಕಿ ಮದುವೆಗೆ ವಿಶೇಷ ಮೆಹಂದಿ; ಇದರ ಬೆಲೆ ಕೇಳಿ ಅಚ್ಚರಿಪಟ್ಟ ಫ್ಯಾನ್ಸ್​

ವಿಕ್ಕಿ ಕೌಶಲ್​-ಕತ್ರಿನಾ ಕೈಫ್​ ಮದುವೆಯು ಹಿಂದು ಮತ್ತು ಮುಸ್ಲಿಂ ಸಮುದಾಯದ ಪ್ರಕಾರ ನಡೆಯಲಿದೆ. ಇದಕ್ಕಾಗಿ ಪಾಲಿ ಜಿಲ್ಲೆಯಿಂದ ವಿಶೇಷ ಮೆಹಂದಿಯನ್ನು ತರಿಸಲಾಗುತ್ತಿದೆ ಎಂದು ಸುದ್ದಿ ಆಗಿದೆ.

ಕತ್ರಿನಾ ಕೈಫ್​-ವಿಕ್ಕಿ ಮದುವೆಗೆ ವಿಶೇಷ ಮೆಹಂದಿ; ಇದರ ಬೆಲೆ ಕೇಳಿ ಅಚ್ಚರಿಪಟ್ಟ ಫ್ಯಾನ್ಸ್​
ವಿಕ್ಕಿ ಕೌಶಲ್, ಕತ್ರಿನಾ ಕೈಫ್
Follow us
| Updated By: ಮದನ್​ ಕುಮಾರ್​

Updated on: Nov 25, 2021 | 8:44 PM

ಸೆಲೆಬ್ರಿಟಿಗಳ ಮದುವೆ ಎಂದರೆ ಅದ್ದೂರಿತನ ಇರಲೇಬೇಕು. ಚಿಕ್ಕ ವಿಚಾರಗಳಿಗೂ ದೊಡ್ಡದಾಗಿ ಖರ್ಚು ಮಾಡಲಾಗುತ್ತದೆ. ಈಗ ಕತ್ರಿನಾ ಕೈಫ್​ (Katrina Kaif) ಮತ್ತು ವಿಕ್ಕಿ ಕೌಶಲ್​ (Vicky Kaushal) ಅವರ ಮದುವೆ ಕೂಡ ಅದ್ದೂರಿಯಾಗಿ ನಡೆಯಲಿದೆ. ಡಿಸೆಂಬರ್​ನಲ್ಲಿ ಇವರಿಬ್ಬರ ಮದುವೆ (Katrina Kaif Vicky Kaushal Wedding) ಸಮಾರಂಭ ನೆರವೇರಲಿದ್ದು, ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದಕ್ಕೆಲ್ಲ ಕೋಟ್ಯಂತರ ರೂಪಾಯಿ ಮೀಸಲು ಇಡಲಾಗಿದೆ. ಮದುವೆಗೂ ಮುನ್ನ ನಡೆಯುವ ಮೆಹಂದಿ (Mehendi) ಶಾಸ್ತ್ರಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಲಕ್ಷಾಂತರ ರೂ. ಬೆಲೆಯ ಮೆಹಂದಿ ತರಿಸಲಾಗುತ್ತಿರುವುದು ವಿಶೇಷ. ಸದ್ಯ ಈ ವಿಚಾರದ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಬರೋಬ್ಬರಿ 1 ಲಕ್ಷ ರೂಪಾಯಿಯನ್ನು ಮೆಹಂದಿಗಾಗಿ ಖರ್ಚು ಮಾಡಲಾಗುತ್ತಿದೆ. 

ವಿಕ್ಕಿ ಕೌಶಲ್​ ಹಿಂದು, ಕತ್ರಿನಾ ಕೈಫ್​ ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಎರಡೂ ಧರ್ಮದ ಸಂಪ್ರದಾಯದ ಪ್ರಕಾರ ಮದುವೆ ನಡೆಯಲಿದೆ. ಇದಕ್ಕಾಗಿ ರಾಜಸ್ಥಾನದ ಐಷಾರಾಮಿ ಹೋಟೆಲ್​ ಬುಕ್​ ಆಗಿದೆ. ಜೋಧ್​ಪುರದ ಪಾಲಿ ಜಿಲ್ಲೆಯಿಂದ ವಿಶೇಷ ಮೆಹಂದಿಯನ್ನು ತರಿಸಲಾಗುತ್ತಿದೆ ಎಂದು ಸುದ್ದಿ ಆಗಿದೆ. ಈ ಮೆಹಂದಿ ಬೆಲೆ ಒಂದು ಲಕ್ಷ ರೂಪಾಯಿ ಎಂಬುದನ್ನು ತಿಳಿದು ಅಭಿಮಾನಿಗಳು ಕಣ್ಣರಳಿಸುತ್ತಿದ್ದಾರೆ.

ಮದುವೆ ಬಳಿಕ ಕತ್ರಿನಾ ಕೈಫ್​ ಹೆಸರು ಕೊಂಚ ಬದಲಾಗಲಿದೆ. ಇನ್ಮುಂದೆ ಅವರನ್ನು KKK ಎಂದು ಅಭಿಮಾನಿಗಳು ಕರೆಯಬಹುದು. ಏನಿದು KKK? ಕತ್ರಿನಾ ಕೈಫ್​ ಕೌಶಲ್​! ಹೌದು, ಈ ಬಗ್ಗೆ ಬಾಲಿವುಡ್​ ಅಂಗಳದಿಂದ ಈಗಾಗಲೇ ಗುಸುಗುಸು ಕೇಳಿಬರುತ್ತಿದೆ. ಮದುವೆ ಬಳಿಕ ತಮ್ಮ ಹೆಸರಿನ ಜೊತೆಯಲ್ಲಿ ಕೌಶಲ್​ ಎಂಬ ಸರ್​ನೇಮ್​ ಸೇರಿಸಿಕೊಳ್ಳಲು ಕತ್ರಿನಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅವರು ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಮದುವೆ ಬಳಿಕ ಅನೇಕ ನಟಿಯರು ತಮ್ಮ ಹೆಸರಿನ ಜೊತೆ ಗಂಡನ ಹೆಸರು ಅಥವಾ ಗಂಡನ ಕುಟುಂಬದ ಸರ್​ನೇಮ್​ ಸೇರಿಸಿಕೊಂಡಿದ್ದಾರೆ. ಐಶ್ವರ್ಯಾ ರೈ ಬಚ್ಚನ್​, ಕರೀನಾ ಕಪೂರ್ ಖಾನ್​ ಮುಂತಾದವರೇ ಈ ಮಾತಿಗೆ ಉದಾಹರಣೆ. ಅದೇ ರೀತಿ ಕತ್ರಿನಾ ಕೈಫ್​ ಕೂಡ ತಮ್ಮ ಹೆಸರಿನ ಜೊತೆ ಕೌಶಲ್​ ಎಂಬ ಸರ್​ನೇಮ್​ ಸೇರಿಸಿಕೊಳ್ಳಲಿದ್ದು, ಮುಂಬರುವ ಎಲ್ಲ ಸಿನಿಮಾದ ಟೈಟಲ್​ ಕಾರ್ಡ್​ನಲ್ಲಿ ಅವರು ಇದೇ ಹೆಸರಿನಿಂದ ಗುರುತಿಸಿಕೊಳ್ಳುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ:

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?

ಕತ್ರಿನಾ-ವಿಕ್ಕಿ ವಿವಾಹ: ವೈರಲ್​ ಆಗಿದ್ದ ಸಲ್ಮಾನ್​-ಕತ್ರಿನಾ ಮದುವೆ ವಿಡಿಯೋದ ಅಸಲಿಯತ್ತೇನು?

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ