ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ

ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ
ಸೋನು ಸೂದ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Mar 22, 2021 | 7:51 PM

ಬಹುಭಾಷಾ ನಟ ಸೋನು ಸೂದ್​ ಅವರು ಅನೇಕರ ಪಾಲಿಗೆ ರಿಯಲ್​ ಹೀರೋ. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಬಡವರಿಗೆ ಮಾಡಿದ ಸಹಾಯ ಒಂದೆರಡಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೇ ಇದ್ದಾಗ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ಜವಾಬ್ದಾರಿಯನ್ನು ಸೋನು ಹೊತ್ತುಕೊಂಡಿದ್ದರು. ಅಲ್ಲದೆ, ಲಾಕ್​ಡೌನ್​ ಬಳಿಕವೂ ಅವರು ಬಡವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಲಿಲ್ಲ. ಅದಕ್ಕಾಗಿ ಅವರಿಗೆ ಈಗಲೂ ಎಲ್ಲರಿಂದ ಗೌರವ ಸಂದಾಯ ಆಗುತ್ತಲೇ ಇದೆ.

ಹೋದಲ್ಲೆಲ್ಲ ಸೋನುಗೆ ಸನ್ಮಾನ ಮಾಡಲಾಗುತ್ತಿದೆ. ಈಗ ಮತ್ತೊಂದು ವಿಶೇಷ ಗೌರವ ಅವರಿಗೆ ಸಿಕ್ಕಿದೆ. ಸ್ಪೈಸ್​ ಜೆಟ್​ ವಿಮಾನದ ಮೇಲೆ ಸೋನು ಫೋಟೋವನ್ನು ದೊಡ್ಡದಾಗಿ ಹಾಕಲಾಗಿದೆ. ದೇಶಾದ್ಯಂತ ಈ ವಿಮಾನಗಳು ಹಾರಾಡುತ್ತಿವೆ. ಆ ಮೂಲಕ ಬಡವರ ಪಾಲಿನ ರಿಯಲ್​ ಹೀರೋಗೆ ಗೌರವ ಸಲ್ಲಿಕೆ ಆಗುತ್ತಿದೆ. ಅದನ್ನು ಕಂಡು ಸೋನು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಸ್ವತಃ ಸೋನು ಕೂಡ ಈ ಬಗ್ಗೆ ಸಂತಸದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರಲು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ತಮ್ಮ ಜೊತೆ ಒಳ್ಳೆಯ ಕಾರ್ಯದಲ್ಲಿ ಭಾಗಿ ಆದ ಸೋನುಗೆ ಈಗ ಇಂಥ ವಿಶೇಷ ರೀತಿಯಲ್ಲಿ ಗೌರವ ಸೂಚಿಸಿದೆ.

‘ಈ ಫೋಟೋಗಳನ್ನು ನೋಡಿದಾಗ ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ದೇಶದ ಹಲವಾರು ಏರ್​ಪೋರ್ಟ್​ಗಳಲ್ಲಿ ಈ ವಿಮಾನಗಳಿವೆ. ಲೇಹ್​, ಪಂಜಾಬ್​​, ಹೈದರಾಬಾದ್​, ದೆಹಲಿ ಮುಂತಾದ ಕಡೆಗಳಿಂದ ಜನರು ಅದರ ಫೋಟೋ ತೆಗೆದು ನನಗೆ ಕಳಿಸುತ್ತಿದ್ದಾರೆ. ನಾನು ಧನ್ಯ. ಆದರೆ ಈ ಸಂದರ್ಭದಲ್ಲಿ ಇದನ್ನೆಲ್ಲ ನನ್ನ ತಂದೆ-ತಾಯಿ ನೋಡಲು ಸಾಧ್ಯವಾಗಲಿಲ್ಲ’ ಎಂದು ಸೋನು ಎಮೋಷನಲ್​ ಆಗಿದ್ದಾರೆ.

View this post on Instagram

A post shared by Sonu Sood (@sonu_sood)

ಮೊದಲೆಲ್ಲ ವಿಲನ್​ ಆಗಿ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸೋನುಗೆ ಈಗ ಹೀರೋ ಪಾತ್ರಗಳು ಅರಸಿ ಬರುತ್ತಿವೆ. ಅಷ್ಟರಮಟ್ಟಿಗೆ ಅವರ ರಿಯಲ್​ ಲೈಫ್​ ಇಮೇಜ್​ ಬದಲಾಗಿದೆ.

ಇದನ್ನೂ ಓದಿ: ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದ್ದರು ನಟ ಸೋನು ಸೂದ್

ಸೋನು ಸೂದ್ ಢಾಬಾದಲ್ಲಿ ತಯಾರಾಗ್ತಿದೆ ಬಿಸಿಬಿಸಿ ತಂದೂರಿ ರೋಟಿ: ವಿಡಿಯೊ ವೈರಲ್

Published On - 8:30 am, Mon, 22 March 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್