AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ

ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ
ಸೋನು ಸೂದ್​
ಮದನ್​ ಕುಮಾರ್​
| Edited By: |

Updated on:Mar 22, 2021 | 7:51 PM

Share

ಬಹುಭಾಷಾ ನಟ ಸೋನು ಸೂದ್​ ಅವರು ಅನೇಕರ ಪಾಲಿಗೆ ರಿಯಲ್​ ಹೀರೋ. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಬಡವರಿಗೆ ಮಾಡಿದ ಸಹಾಯ ಒಂದೆರಡಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೇ ಇದ್ದಾಗ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ಜವಾಬ್ದಾರಿಯನ್ನು ಸೋನು ಹೊತ್ತುಕೊಂಡಿದ್ದರು. ಅಲ್ಲದೆ, ಲಾಕ್​ಡೌನ್​ ಬಳಿಕವೂ ಅವರು ಬಡವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಲಿಲ್ಲ. ಅದಕ್ಕಾಗಿ ಅವರಿಗೆ ಈಗಲೂ ಎಲ್ಲರಿಂದ ಗೌರವ ಸಂದಾಯ ಆಗುತ್ತಲೇ ಇದೆ.

ಹೋದಲ್ಲೆಲ್ಲ ಸೋನುಗೆ ಸನ್ಮಾನ ಮಾಡಲಾಗುತ್ತಿದೆ. ಈಗ ಮತ್ತೊಂದು ವಿಶೇಷ ಗೌರವ ಅವರಿಗೆ ಸಿಕ್ಕಿದೆ. ಸ್ಪೈಸ್​ ಜೆಟ್​ ವಿಮಾನದ ಮೇಲೆ ಸೋನು ಫೋಟೋವನ್ನು ದೊಡ್ಡದಾಗಿ ಹಾಕಲಾಗಿದೆ. ದೇಶಾದ್ಯಂತ ಈ ವಿಮಾನಗಳು ಹಾರಾಡುತ್ತಿವೆ. ಆ ಮೂಲಕ ಬಡವರ ಪಾಲಿನ ರಿಯಲ್​ ಹೀರೋಗೆ ಗೌರವ ಸಲ್ಲಿಕೆ ಆಗುತ್ತಿದೆ. ಅದನ್ನು ಕಂಡು ಸೋನು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಸ್ವತಃ ಸೋನು ಕೂಡ ಈ ಬಗ್ಗೆ ಸಂತಸದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರಲು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ತಮ್ಮ ಜೊತೆ ಒಳ್ಳೆಯ ಕಾರ್ಯದಲ್ಲಿ ಭಾಗಿ ಆದ ಸೋನುಗೆ ಈಗ ಇಂಥ ವಿಶೇಷ ರೀತಿಯಲ್ಲಿ ಗೌರವ ಸೂಚಿಸಿದೆ.

‘ಈ ಫೋಟೋಗಳನ್ನು ನೋಡಿದಾಗ ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ದೇಶದ ಹಲವಾರು ಏರ್​ಪೋರ್ಟ್​ಗಳಲ್ಲಿ ಈ ವಿಮಾನಗಳಿವೆ. ಲೇಹ್​, ಪಂಜಾಬ್​​, ಹೈದರಾಬಾದ್​, ದೆಹಲಿ ಮುಂತಾದ ಕಡೆಗಳಿಂದ ಜನರು ಅದರ ಫೋಟೋ ತೆಗೆದು ನನಗೆ ಕಳಿಸುತ್ತಿದ್ದಾರೆ. ನಾನು ಧನ್ಯ. ಆದರೆ ಈ ಸಂದರ್ಭದಲ್ಲಿ ಇದನ್ನೆಲ್ಲ ನನ್ನ ತಂದೆ-ತಾಯಿ ನೋಡಲು ಸಾಧ್ಯವಾಗಲಿಲ್ಲ’ ಎಂದು ಸೋನು ಎಮೋಷನಲ್​ ಆಗಿದ್ದಾರೆ.

View this post on Instagram

A post shared by Sonu Sood (@sonu_sood)

ಮೊದಲೆಲ್ಲ ವಿಲನ್​ ಆಗಿ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸೋನುಗೆ ಈಗ ಹೀರೋ ಪಾತ್ರಗಳು ಅರಸಿ ಬರುತ್ತಿವೆ. ಅಷ್ಟರಮಟ್ಟಿಗೆ ಅವರ ರಿಯಲ್​ ಲೈಫ್​ ಇಮೇಜ್​ ಬದಲಾಗಿದೆ.

ಇದನ್ನೂ ಓದಿ: ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದ್ದರು ನಟ ಸೋನು ಸೂದ್

ಸೋನು ಸೂದ್ ಢಾಬಾದಲ್ಲಿ ತಯಾರಾಗ್ತಿದೆ ಬಿಸಿಬಿಸಿ ತಂದೂರಿ ರೋಟಿ: ವಿಡಿಯೊ ವೈರಲ್

Published On - 8:30 am, Mon, 22 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ