AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟ ಶ್ರೀಲೀಲಾ; ಕೇಳಿಬಂತು ಹೊಸ ಗಾಸಿಪ್

ಶ್ರೀಲೀಲಾ ಅವರು ‘ಪುಷ್ಪ 2’ ಚಿತ್ರದ 'ಕಿಸ್ಸಿಕ್' ಹಾಡಿನ ಮೂಲಕ ಬಾಲಿವುಡ್‌ನಲ್ಲಿ ಗಮನ ಸೆಳೆದಿದ್ದಾರೆ. ಈಗ ಅವರಿಗೆ ಹಲವು ಚಿತ್ರಗಳಿಂದ ಆಫರ್‌ಗಳು ಬರುತ್ತಿವೆ. ಖ್ಯಾತ ನಿರ್ಮಾಪಕ ಮಹಾವೀರ್ ಜೈನ್ ಅವರೊಂದಿಗೆ ಫೋಟೋ ಹಂಚಿಕೊಂಡಿದ್ದು, ಅವರ ಮುಂದಿನ ಚಿತ್ರದಲ್ಲಿ ಶ್ರೀಲೀಲಾ ನಟಿಸುವ ಸಾಧ್ಯತೆ ಹೆಚ್ಚಾಗಿದೆ.

ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟ ಶ್ರೀಲೀಲಾ; ಕೇಳಿಬಂತು ಹೊಸ ಗಾಸಿಪ್
ಶ್ರೀಲೀಲಾ
ರಾಜೇಶ್ ದುಗ್ಗುಮನೆ
|

Updated on:May 05, 2025 | 7:39 AM

Share

ನಟಿ ಶ್ರೀಲೀಲಾ (Sreeleela) ಅವರು ಇತ್ತೀಚೆಗೆ ಸಿನಿಮಾಗಳ ಮೂಲಕ ಭರ್ಜರಿ ಸುದ್ದಿ ಆಗುತ್ತಿದ್ದಾರೆ. ಬಾಲಿವುಡ್​ನಲ್ಲಿ ಅವರ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಆದರೆ, ಅಲ್ಲಿಂದ ಅವರಿಗೆ ಆಫರ್​ಗಳು ಮಾತ್ರ ನದಿಯಂತೆ ಹರಿದು ಬರುತ್ತಿದೆ. ಈಗ ಅವರು ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟಿದ್ದಾರೆ. ಇದರಿಂದ ಹೊಸ ಗಾಸಿಪ್ ಒಂದು ಹುಟ್ಟಿಕೊಂಡಿದೆ. ಆ ನಿರ್ಮಾಪಕರ ಮುಂದಿನ ಚಿತ್ರಕ್ಕೆ ಶ್ರೀಲೀಲಾ ನಾಯಕಿ ಆಗಿರೋದು ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.

ಶ್ರೀಲೀಲಾ ಅವರಿಗೆ ಬಾಲಿವುಡ್​ನಲ್ಲಿ ಅಟೆಂಕ್ಷನ್ ಸಿಕ್ಕಿದ್ದು ‘ಪುಷ್ಪ 2’ ಚಿತ್ರದ ‘ಕಿಸ್ಸಿಕ್..’ ಹಾಡಿನ ಮೂಲಕ. ಈ ಹಾಡು ಸೂಪರ್ ಹಿಟ್ ಆಗಿ ಗಮನ ಸೆಳೆಯಿತು. ಇದು ತೆಲುಗು ಸಿನಿಮಾ ಆದರೂ ಬಾಲಿವುಡ್​ಗೆ ಡಬ್ ಆಗಿ ರಿಲೀಸ್ ಕಂಡಿತ್ತು. ‘ಕಿಸ್ಸಿಕ್.. ಹಾಡಿನಲ್ಲಿ ಶ್ರೀಲೀಲಾ ಡ್ಯಾನ್ಸ್ ಮಾಡಿದ್ದರು. ಅಲ್ಲಿಯವರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಕಾರಣದಿಂದಲೇ ಶ್ರೀಲೀಲಾ ಬಾಲಿವುಡ್​ನಲ್ಲಿ ಫೇಮಸ್ ಆದರು. ಬಾಲಿವುಡ್ ಮಂದಿ ಅವರು ಹಾಡಿ ಹೊಗಳಿದ್ದಾರೆ. ಸದ್ಯ ಅವರು ‘ಆಶಿಕಿ 3’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಆಫರ್​ಗಳು ಅವರನ್ನು ಹುಡಕಿ ಬರುತ್ತಿವೆ.

ಇದನ್ನೂ ಓದಿ
Image
ಸಾರಾ ತೆಂಡೂಲ್ಕರ್​ಗೆ ಹೊಸ ಬಾಯ್​ಫ್ರೆಂಡ್; ಸ್ಟಾರ್ ನಟನ ಜೊತೆ ಡೇಟಿಂಗ್?
Image
‘ಲವ್ ಎಟ್ ಫಸ್ಟ್​ ಸೈಟ್’: ಕರ್ಣನ ನೋಡಿ ನಿಧಿಗೆ ಲವ್; ಹೇಗಿದೆ ನೋಡಿ ಹೊಸ ಪ್ರ
Image
ಬುಡಕಟ್ಟು ಜನಾಂಗದ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಕೇಳಿದ ವಿಜಯ್
Image
ಖ್ಯಾತ ನಿರ್ದೇಶಕ ರಾಜಮೌಳಿಯ ನೆಚ್ಚಿನ ನಟಿ ಯಾರು ಗೊತ್ತಾ?

ಶ್ರೀಲೀಲಾ ಅವರು ನಿರ್ಮಾಪಕ ಮಹಾವೀರ್ ಜೈನ್ ಜೊತೆ ಕಾಣಿಸಿಕೊಂಡಿದ್ದಾರೆ. ಇವರು ರಾಜ್ ಶಾಂಡಿಲ್ಯ ನಿರ್ದೇಶನ ಮಾಡುತ್ತಿರುವ ಮುಂದಿನ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರ ಹೀರೋ. ಈಗ ವೈರಲ್ ಆಗಿರೋ ಫೋಟೋದಿಂದ ಶ್ರೀಲೀಲಾ ಅವರು ಈ ಚಿತ್ರದಲ್ಲಿ ನಟಿಸೋದು ಬಹುತೇಕ ಖಚಿತ ಆದಂತೆ ಆಗಿದೆ.  ಮಹಾವೀರ್ ಜೈನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಶ್ರೀಲೀಲಾ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ ವೇಳೆಗೆ ಸಿನಿಮಾ ಸೆಟ್ಟೇರೋ ಸಾಧ್ಯತೆ ಇದೆ.

ಇದನ್ನೂ ಓದಿ: ಬಾಲಿವುಡ್ ಸಿನಿಮಾಕ್ಕಾಗಿ ಸಂಭಾವನೆ ತಗ್ಗಿಸಿಕೊಂಡರಾ ನಟಿ ಶ್ರೀಲೀಲಾ 

ಬಾಲಿವುಡ್​ನಲ್ಲಿ ನಟಿ ರಶ್ಮಿಕಾ ಮಂದಣ್ಣ ಇದೇ ರೀತಿಯ ಕ್ರೇಜ್ ಹೊಂದಿದ್ದಾರೆ. ಬಾಲಿವುಡ್​ನಲ್ಲಿ ಮೊದಲು ನಟಿಸಿದ ಸಿನಿಮಾ ರಿಲೀಸ್ ಆಗುವ ಮೊದಲೇ ಹಲವು ಚಿತ್ರಗಳ ಆಫರ್​ಗಳು ಅವರನ್ನು ಹುಡುಕಿ ಬಂದಿದ್ದವು. ಈಗ ಶ್ರೀಲೀಲಾ ಕೂಡ ಇದೇ ಸಾಲಿಗೆ ಸೇರುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ವಿಶೇಷ ಎಂದರೆ ಇಬ್ಬರೂ ಕನ್ನಡದವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:38 am, Mon, 5 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು