AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕಾರ್ತಿಕ್ ಆರ್ಯನ್ ಜೊತೆ ಸೇರಿದ ಕನ್ನಡದ ನಟಿ ಶ್ರೀಲೀಲಾ

ನಟಿ ಶ್ರೀಲೀಲಾ ಮತ್ತು ಕಾರ್ತಿಕ್ ಆರ್ಯನ್ ನಟನೆಯ ಅನುರಾಗ್ ಬಸು ನಿರ್ದೇಶನದ ಬಹುನಿರೀಕ್ಷಿತ ರೋಮ್ಯಾಂಟಿಕ್ ಮ್ಯೂಸಿಕಲ್ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ಪುನರಾರಂಭಗೊಂಡಿದೆ. ಈ ಮೂಲಕ ಶ್ರೀಲೀಲಾ ಬಾಲಿವುಡ್ ಅಂಗಳಕ್ಕೆ ಅದ್ಧೂರಿಯಾಗಿ ಪಾದಾರ್ಪಣೆ ಮಾಡುತ್ತಿದ್ದು, ತಮ್ಮ ಬಾಕಿ ಇರುವ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸುತ್ತಿದ್ದಾರೆ.

ಮತ್ತೆ ಕಾರ್ತಿಕ್ ಆರ್ಯನ್ ಜೊತೆ ಸೇರಿದ ಕನ್ನಡದ ನಟಿ ಶ್ರೀಲೀಲಾ
ಕಾರ್ತಿಕ್-ಶ್ರೀಲೀಲಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 15, 2026 | 7:48 AM

Share

ಮುಖ್ಯಾಂಶಗಳು

  • ಬಾಲಿವುಡ್ ಸೆಟ್‌ಗೆ ಮರಳಿದ ಕನ್ನಡತಿ ಶ್ರೀಲೀಲಾ
  • ಕಾರ್ತಿಕ್ ಆರ್ಯನ್-ಶ್ರೀಲೀಲಾ ಜೋಡಿಯ 'ತು ಮೇರಿ ಜಿಂದಗಿ ಹೈ'?
  • ಮುಂಬೈನಲ್ಲಿ ಅನುರಾಗ್ ಬಸು ಸಿನಿಮಾದ ಅದ್ಧೂರಿ ಶೂಟಿಂಗ್!

ಬಾಲಿವುಡ್ ಅಂಗಳದಲ್ಲಿ ನಟಿ ಶ್ರೀಲೀಲಾ ಹಾಗೂ ಕಾರ್ತಿಕ್ ಆರ್ಯನ್ ನಟನೆಯ ಹೊಸ ಸಿನಿಮಾದ ಶೂಟಿಂಗ್ ಮತ್ತೆ ಜೋರಾಗಿ ಆರಂಭವಾಗಿದೆ. ನಿರ್ದೇಶಕ ಅನುರಾಗ್ ಬಸು ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ರೋಮ್ಯಾಂಟಿಕ್ ಮ್ಯೂಸಿಕಲ್ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ವಿಳಂಬದ ನಂತರ ಶ್ರೀಲೀಲಾ ಸೆಟ್‌ಗೆ ಮರಳಿದ್ದು, ತಮ್ಮ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಸಿನಿಮಾ ಶ್ರೀಲೀಲಾ ಅವರ ಚೊಚ್ಚಲ ಬಾಲಿವುಡ್ ಚಿತ್ರವಾಗಿದೆ.

ಪಿಂಕ್‌ವಿಲ್ಲಾ ವರದಿಯ ಪ್ರಕಾರ ಶ್ರೀಲೀಲಾ ಮುಂಬೈ ಶೂಟಿಂಗ್ ಶೆಡ್ಯೂಲ್ ಸೇರಿಕೊಂಡಿದ್ದಾರೆ. ನಿಗದಿತ ವೇಳಾಪಟ್ಟಿಯಂತೆಯೇ ಚಿತ್ರೀಕರಣ ಪ್ರಸ್ತುತ ಸಾಗುತ್ತಿದೆ. ಇದೊಂದು ಪ್ರೇಮಕಥೆ. ಈ ಮೊದಲು ಸಿನಿಮಾ ನಿಂತು ಹೋಗಿದೆ ಎನ್ನಲಾಗಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ.

ನಟ ಕಾರ್ತಿಕ್ ಆರ್ಯನ್ ತಮ್ಮ ಭಾಗದ ಹೆಚ್ಚಿನ ಶೂಟಿಂಗ್ ಈಗಾಗಲೇ ಪೂರ್ಣಗೊಳಿಸಿದ್ದಾರೆ. ಈಗ ಶ್ರೀಲೀಲಾ ತಮ್ಮ ಬಾಕಿ ಇರುವ ದೃಶ್ಯಗಳ ಚಿತ್ರೀಕರಣವನ್ನು ಮುಗಿಸುತ್ತಿದ್ದಾರೆ.

ಈ ಸಿನಿಮಾಗೆ ‘ತು ಮೇರಿ ಜಿಂದಗಿ ಹೈ’ ಎಂದು ಹೆಸರಿಡಲಾಗಿದೆ ಎಂಬ ವರದಿಗಳಿವೆ. ಆದರೆ ಅಧಿಕೃತ ಶೀರ್ಷಿಕೆ ಇನ್ನಷ್ಟೇ ಘೋಷಣೆಯಾಗಬೇಕಿದೆ. ಆರಂಭದಲ್ಲಿ ಇದು ‘ಆಶಿಕಿ 3’ ಎನ್ನಲಾಗಿತ್ತು. ಆದರೆ ಇದು ಸಂಪೂರ್ಣ ಹೊಸ ಕಥೆಯಾಗಿದೆ.

ಈ ಪ್ರೇಮಕಥೆಗೆ ಪ್ರೀತಮ್ ಸಂಗೀತ ನೀಡುತ್ತಿದ್ದಾರೆ. ಹಾಡುಗಳು ಕಥೆಗೆ ಅತ್ಯಂತ ಪ್ರಮುಖವಾಗಿರಲಿವೆ. 2026 ರಲ್ಲಿ ಈ ಸಿನಿಮಾ ತೆರೆಕಾಣುವ ಸಾಧ್ಯತೆ ಇದೆ.

ಕಾರ್ತಿಕ್ ಆರ್ಯನ್ ಇತ್ತೀಚೆಗೆ ‘ತು ಮೇರಿ ಮೇನ್ ತೇರಾ’ ಸಿನಿಮಾದಲ್ಲಿ ನಟಿಸಿದ್ದರು. ಮುಂದೆ ‘ನಾಗ್‌ಜಿಲ್ಲಾ’ ಮತ್ತು ‘ಭೂಲ್ ಭುಲಯ್ಯ 4’ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಸಿನಿಮಾಗೆ ನಟಿ ಶ್ರೀಲೀಲಾ ನಾಯಕಿ? ಸತತ ಸೋಲಿನ ಬಳಿಕವೂ ಬಿಗ್ ಆಫರ್

ಶ್ರೀಲೀಲಾ ಇತ್ತೀಚೆಗೆ ಪವನ್ ಕಲ್ಯಾಣ್ ಜೊತೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದಲ್ಲಿ ಮಿಂಚಿದ್ದರು. ಇದರ ಜೊತೆಗೆ ತೆಲುಗಿನ ‘ಓಂ ಚಾಪ್ಟರ್ 1’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. ಅವರಿಗೆ ಮೊದಲಿನಷ್ಟು ಆಫರ್​ಗಳು ಬರುತ್ತಿಲ್ಲ, ಗೆಲುವು ಕೂಡ ಅಷ್ಟು ದೊಡ್ಡ ಮಟ್ಟದಲ್ಲಿ ಸಿಗುತ್ತಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Live: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
Live: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧ ನಿರ್ಧಾರ ನಮ್ಮದಲ್ಲ, FSSAI ಸೂಚನೆ
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧ ನಿರ್ಧಾರ ನಮ್ಮದಲ್ಲ, FSSAI ಸೂಚನೆ
ಇಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರಾವಣ ಶನಿವಾರ
ಇಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರಾವಣ ಶನಿವಾರ
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ