Sridevi: ‘ಈಗಲೂ ನಿಮಗಾಗಿ ಎಲ್ಲೆಡೆ ಹುಡುಕುವೆ..’: ಶ್ರೀದೇವಿ ಪುಣ್ಯ ಸ್ಮರಣೆ ಹೊಸ್ತಿಲಲ್ಲಿ ಜಾನ್ವಿ ಭಾವುಕ ಮಾತು

Sridevi Death Anniversary | Janhvi Kapoor: ಬೋನಿ ಕಪೂರ್​ ಅವರು ಶ್ರೀದೇವಿಯ ಸುಂದರ ಫೋಟೋ ಹಂಚಿಕೊಂಡಿದ್ದಾರೆ. ಪುಸ್ತಕ ರೂಪದಲ್ಲಿ ಈ ಲೆಜೆಂಡರಿ ನಟಿಯ ಜೀವನ ಚರಿತ್ರೆ ಪ್ರಕಟ ಆಗಲಿದೆ.

Sridevi: ‘ಈಗಲೂ ನಿಮಗಾಗಿ ಎಲ್ಲೆಡೆ ಹುಡುಕುವೆ..’: ಶ್ರೀದೇವಿ ಪುಣ್ಯ ಸ್ಮರಣೆ ಹೊಸ್ತಿಲಲ್ಲಿ ಜಾನ್ವಿ ಭಾವುಕ ಮಾತು
ಶ್ರೀದೇವಿ
Follow us
|

Updated on: Feb 21, 2023 | 3:49 PM

ಭಾರತೀಯ ಚಿತ್ರರಂಗದ ಲೆಜೆಂಡರಿ ನಟಿ ಶ್ರೀದೇವಿ (Sridevi) ಅವರು ಇಹಲೋಕ ತ್ಯಜಿಸಿ 5 ವರ್ಷ ಸಮೀಪಿಸುತ್ತಿದೆ. ಫೆಬ್ರವರಿ 24ರಂದು ಅವರ ಪುಣ್ಯ ಸ್ಮರಣೆ. ಅದಕ್ಕೆ ಇನ್ನೂ ಎರಡು ದಿನ ಬಾಕಿ ಇರುವಾಗಲೇ ಅವರ ಕುಟುಂಬದವರು ನುಡಿ ನಮನ ಸಲ್ಲಿಸಿದ್ದಾರೆ. ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ (Janhvi Kapoor), ಪತಿ ಬೋನಿ ಕಪೂರ್​ (Boney Kapoor) ಅವರು ಭಾವುಕವಾಗಿ ಪೋಸ್ಟ್​ ಮಾಡಿದ್ದಾರೆ. ಶ್ರೀದೇವಿ ಜತೆಗಿನ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಇದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಶ್ರೀದೇವಿ ನಿಧನರಾಗಿದ್ದು 2018 ಫೆಬ್ರವರಿ 24ರಂದು. ಅವರನ್ನು ಅಭಿಮಾನಿಗಳು ಇಂದಿಗೂ ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಜಾನ್ವಿ ಕಪೂರ್​ ಭಾವುಕ ಪೋಸ್ಟ್​:

‘ಈಗಲೂ ನಾನು ನಿಮಗಾಗಿ ಎಲ್ಲ ಕಡೆಗಳಲ್ಲಿ ಹುಡುಕುತ್ತೇನೆ ಅಮ್ಮ. ನಿಮಗೆ ಹೆಮ್ಮೆ ತರುವೆನೆಂಬ ಭರವಸೆಯಲ್ಲಿ ನಾನು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿರುವೆ. ನಾನು ಎಲ್ಲಿಯೇ ಹೋದರೂ ಏನೇ ಮಾಡಿದರೂ ಅದು ನಿಮ್ಮಿಂದಲೇ ಶುರುವಾಗುತ್ತದೆ ಹಾಗೂ ನಿಮ್ಮಲ್ಲೇ ಮುಗಿಯುತ್ತದೆ’ ಎಂದು ಜಾನ್ವಿ ಕಪೂರ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
44 ಕೋಟಿ ರೂಪಾಯಿಗೆ ಮನೆ ಮಾರಿಕೊಂಡ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​; ಖರೀದಿಸಿದ ಹೀರೋ ಯಾರು?
Image
ಡಿಗ್ಲಾಮ್ ಲುಕ್​ನಲ್ಲಿ ನಟಿ ಜಾನ್ವಿ ಕಪೂರ್​; ಆದರೆ, ಈ ನಟಿ ನೀವಂದುಕೊಂಡ ಹಾಗಲ್ಲ
Image
Janhvi Kapoor: ಜಾನ್ವಿ ಕಪೂರ್​ ಫೋಟೋ ವೈರಲ್​; ಶ್ರೀದೇವಿ ಪುತ್ರಿಯ ಅಂದ-ಚಂದ ಕಂಡು ವಾವ್​ ಎಂದ ಅಭಿಮಾನಿಗಳು
Image
Janhvi Kapoor: ಪ್ರಕೃತಿಯ ಮಡಿಲಿನಲ್ಲಿ ಜಾನ್ವಿ ಕಪೂರ್ ವಿಹಾರ; ಫೋಟೋಗಳಿಗೆ ಮಸ್ತ್​ ಪೋಸ್​​

ಇದನ್ನೂ ಓದಿ: Janhvi Kapoor: ಸಾಂಪ್ರದಾಯಿಕ ಲುಕ್​​ನಲ್ಲಿ ಗಮನ ಸೆಳೆದ ನಟಿ ಜಾನ್ವಿ ಕಪೂರ್; ಇಲ್ಲಿದೆ ಫೋಟೋ

ಶ್ರೀದೇವಿ ಅವರ ಅನುಪಸ್ಥಿತಿಯಲ್ಲಿ ಜಾನ್ವಿ ಕಪೂರ್​ ಅವರು ತಮ್ಮ ಬಣ್ಣದ ಬದುಕಿನ ಪಯಣ ಮುಂದುವರಿಸಿದ್ದಾರೆ. ತಾಯಿ ಇದ್ದಿದ್ದರೆ ಮಗಳಿಗೆ ಇನ್ನಷ್ಟು ಬಲ, ಪ್ರೋತ್ಸಾಹ, ಸೂಕ್ತ ಮಾರ್ಗದರ್ಶನ ಸಿಗುತ್ತಿತ್ತು. ಈಗ ಜಾನ್ವಿ ಹಂಚಿಕೊಂಡಿರುವ ಈ ಭಾವುಕ ಪೋಸ್ಟ್​ಗೆ ಅನೇಕ ಸೆಲೆಬ್ರಿಟಿಗಳು ಕಮೆಂಟ್​ ಮಾಡಿದ್ದಾರೆ. ಮನೀಶ್​ ಮಲ್ಹೋತ್ರಾ, ಭೂಮಿ ಪಡ್ನೇಕರ್​, ರಾಕುಲ್​ ಪ್ರೀತ್​ ಸಿಂಗ್​ ಮುಂತಾದವರು ಹಾರ್ಟ್​ ಎಮೋಜಿ ಕಮೆಂಟ್​ ಮಾಡಿದ್ದಾರೆ.

ಪತ್ನಿ ನೆನಪಿನಲ್ಲಿ ಬೋನಿ ಕಪೂರ್:

ಶ್ರೀದೇವಿ ಅವರ ಪತಿ ಬೋನಿ ಕಪೂರ್​ ಕೂಡ ಭಾವುಕ ಮಾತುಗಳನ್ನು ಹಂಚಿಕೊಂಡಿದ್ದಾರೆ. ‘ನೀನು ನಮ್ಮನ್ನು ಬಿಟ್ಟು ಹೋಗಿ 5 ವರ್ಷ ಆಯಿತು. ನಿನ್ನ ನೆನಪು ಮತ್ತು ಪ್ರೀತಿಯೇ ನಮ್ಮನ್ನು ಮುಂದುವರಿಸುತ್ತಿದೆ. ಅವು ನಮ್ಮ ಜೊತೆ ಸದಾ ಇರುತ್ತವೆ’ ಎಂದು ಬರೆದುಕೊಂಡಿರುವ ಬೋನಿ ಕಪೂರ್​ ಅವರು ಶ್ರೀದೇವಿಯ ಸುಂದರ ಫೋಟೋ ಹಂಚಿಕೊಂಡಿದ್ದಾರೆ.

View this post on Instagram

A post shared by Boney.kapoor (@boney.kapoor)

ಪುಸ್ತಕ ರೂಪದಲ್ಲಿ ಶ್ರೀದೇವಿ ಅವರ ಜೀವನ ಚರಿತ್ರೆ ಪ್ರಕಟ ಆಗಲಿದೆ. ಆ ಸುದ್ದಿಯನ್ನು ಕೆಲವೇ ದಿನಗಳ ಹಿಂದೆ ಬೋನಿ ಕಪೂರ್​ ಹಂಚಿಕೊಂಡಿದ್ದರು. ‘ಶ್ರೀದೇವಿ: ದಿ ಲೈಫ್​ ಆಫ್​ ಎ ಲೆಜೆಂಡ್​’ ಎಂಬುದು ಇದರ ಶೀರ್ಷಿಕೆ. ಇದರ ಹಕ್ಕುಗಳನ್ನು ‘ವೆಸ್ಟ್​ಲ್ಯಾಂಡ್​ ಬುಕ್ಸ್​’ ಪಡೆದುಕೊಂಡಿದೆ. ಧೀರಜ್​ ಕುಮಾರ್ ಅವರು ಈ ಪುಸ್ತಕ ಬರೆಯುತ್ತಿದ್ದಾರೆ. ಇದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ