AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ

ಸಾಮಾನ್ಯವಾಗಿ ರಾಜಮೌಳಿ ಬಂದು ನಾನಾ ಅಥವಾ ಇನ್ನೊಬ್ಬರಾ ಎಂದು ಪ್ರಶ್ನೆ ಮಾಡಿದರೆ ರಾಜಮೌಳಿ ಹೆಸರನ್ನೇ ಎಲ್ಲರೂ ತೆಗೆದುಕೊಳ್ಳುತ್ತಾರೆ. ಆದರೆ, ರಣಬೀರ್ ಕಪೂರ್ ಆ ರೀತಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ
‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 04, 2024 | 7:55 AM

Share

‘ಬಾಹುಬಲಿ’, ‘ಆರ್​ಆರ್​ಆರ್’ ರೀತಿಯ ಚಿತ್ರಗಳನ್ನು ಕಟ್ಟಿಕೊಟ್ಟಿರುವ ಖ್ಯಾತಿ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರಿಗೆ ಇದೆ. ಭಾರತಕ್ಕೆ ಅವರು ಆಸ್ಕರ್ ಕೂಡ ತೆಗೆದುಕೊಂಡು ಬಂದಿದ್ದರು. ಅವರ ಜೊತೆ ಕೆಲಸ ಮಾಡುವ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ? ಎಲ್ಲಾ ಹೀರೋ ಹಾಗೂ ಹೀರೋಯಿನ್​ಗಳಿಗೆ ಹೀಗೊಂದು ಕನಸು ಇರುತ್ತದೆ. ಭಾರತದ ಯಾವುದೇ ನಿರ್ದೇಶಕನ ಹೆಸರು ನೀಡಿದರೂ ರಾಜಮೌಳಿ ಹೆಸರು ಹೇಳಿದರೆ ತೂಕ ಜಾಸ್ತಿ ಎನ್ನಬಹುದು. ಆದರೆ, ರಾಜಮೌಳಿ ಜೊತೆ ಕೆಲಸ ಮಾಡಲ್ಲ ಎಂದು ರಣಬೀರ್ ಕಪೂರ್ ಈ ಹಿಂದೆ ಹೇಳಿದ ಮಾತು ನೆನಪಿದೆಯೇ?

ಅದು ‘ಅನಿಮಲ್’ ಸಿನಿಮಾ ರಿಲೀಸ್ ಸಂದರ್ಭ. ‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಹೀರೋ ಆಗಿ ನಟಿಸಿದರೆ, ಸಂದೀಪ್ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಕಾರ್ಯಕ್ರಮಕ್ಕಾಗಿ ರಾಜಮೌಳಿ ವೇದಿಕೆ ಮೇಲೆ ಇದ್ದರು. ಈ ವೇಳೆ ರಾಜಮೌಳಿ ಹಾಗೂ ರಣಬೀರ್ ಮಧ್ಯೆ ಚರ್ಚೆ ನಡೆದಿದೆ.

‘ಸಂದೀಪ್ ರೆಡ್ಡಿ ವಂಗ ಅವರು ನಿಮಗೆ ಅತ್ಯುತ್ತಮ ನಿರ್ದೇಶಕರು ಅಲ್ಲವೇ? ಒಂದೊಮ್ಮೆ ನನ್ನ ಹಾಗೂ ಸಂದೀಪ್ ಮಧ್ಯೆ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರೆ ಯಾರನ್ನು ಆಯ್ಕೆ ಮಾಡುತ್ತೀರಿ’ ಎಂದು ರಾಜಮೌಳಿ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ್ದ ರಣಬೀರ್ ಕಪೂರ್, ‘ನಾನು ಡಬಲ್ ಶಿಫ್ಟ್ ಮಾಡುತ್ತೇನೆ’ ಎಂದರು. ಇದನ್ನು ರಾಜಮೌಳಿ ಒಪ್ಪಿಕೊಂಡಿಲ್ಲ.

‘ಒಬ್ಬರನ್ನು ಮಾತ್ರ ಆಯ್ಕೆ ಮಾಡಬೇಕು’ ಎಂದು ರಾಜಮೌಳಿ ಷರತ್ತು ಹಾಕಿದರು. ಆಗ ರಣಬೀರ್ ಅವರು ನೇರವಾಗಿ, ‘ಸಂದೀಪ್ ರೆಡ್ಡಿ ವಂಗ’ ಎಂದು ಹೇಳಿದರು. ‘ನಾನು ನಿಯತ್ತಿನ ಕಲಾವಿದ. ಹೀಗಾಗಿ, ಸಂದೀಪ್ ರೆಡ್ಡಿ ವಂಗ’ ಅವರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದರು.  ಅವರ ಈ ಉತ್ತರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಸಾಮಾನ್ಯವಾಗಿ ರಾಜಮೌಳಿ ಬಂದು ನಾನಾ ಅಥವಾ ಇನ್ನೊಬ್ಬರಾ ಎಂದು ಪ್ರಶ್ನೆ ಮಾಡಿದರೆ ರಾಜಮೌಳಿ ಹೆಸರನ್ನೇ ಎಲ್ಲರೂ ತೆಗೆದುಕೊಳ್ಳುತ್ತಾರೆ. ಆದರೆ, ರಣಬೀರ್ ಕಪೂರ್ ಆ ರೀತಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಅನಿಮಲ್’ ಸಿನಿಮಾ ಕಳೆದ ವರ್ಷ ಡಿಸೆಂಬರ್​ನಲ್ಲಿ ಬಿಡುಗಡೆ ಕಂಡಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರವನ್ನು ಕೆಲವರು ಅತಿಯಾಗಿ ಟೀಕೆ ಮಾಡಿದ್ದೂ ಇದೆ. ಇನ್ನೂ ಕೆಲವರು ಸಿನಿಮಾನ ಹೊಗಳಿದ್ದಾರೆ.

ಇದನ್ನೂ ಓದಿ: ಕಪಿಲ್ ಶರ್ಮಾ, ಜೂ ಎನ್​ಟಿಆರ್ ವಿರುದ್ಧ ರಾಜಮೌಳಿ ಅಭಿಮಾನಿಗಳ ಅಸಮಾಧಾನ

ಸಿನಿಮಾ ವಿಚಾರಕ್ಕೆ ಬರೋದಾದರೆ ರಾಜಮೌಳಿ ಅವರು ಮಹೇಶ್ ಬಾಬು ಜೊತೆಯಲ್ಲಿ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ರೀತಿ ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್