‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ

ಸಾಮಾನ್ಯವಾಗಿ ರಾಜಮೌಳಿ ಬಂದು ನಾನಾ ಅಥವಾ ಇನ್ನೊಬ್ಬರಾ ಎಂದು ಪ್ರಶ್ನೆ ಮಾಡಿದರೆ ರಾಜಮೌಳಿ ಹೆಸರನ್ನೇ ಎಲ್ಲರೂ ತೆಗೆದುಕೊಳ್ಳುತ್ತಾರೆ. ಆದರೆ, ರಣಬೀರ್ ಕಪೂರ್ ಆ ರೀತಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ
‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 04, 2024 | 7:55 AM

‘ಬಾಹುಬಲಿ’, ‘ಆರ್​ಆರ್​ಆರ್’ ರೀತಿಯ ಚಿತ್ರಗಳನ್ನು ಕಟ್ಟಿಕೊಟ್ಟಿರುವ ಖ್ಯಾತಿ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರಿಗೆ ಇದೆ. ಭಾರತಕ್ಕೆ ಅವರು ಆಸ್ಕರ್ ಕೂಡ ತೆಗೆದುಕೊಂಡು ಬಂದಿದ್ದರು. ಅವರ ಜೊತೆ ಕೆಲಸ ಮಾಡುವ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ? ಎಲ್ಲಾ ಹೀರೋ ಹಾಗೂ ಹೀರೋಯಿನ್​ಗಳಿಗೆ ಹೀಗೊಂದು ಕನಸು ಇರುತ್ತದೆ. ಭಾರತದ ಯಾವುದೇ ನಿರ್ದೇಶಕನ ಹೆಸರು ನೀಡಿದರೂ ರಾಜಮೌಳಿ ಹೆಸರು ಹೇಳಿದರೆ ತೂಕ ಜಾಸ್ತಿ ಎನ್ನಬಹುದು. ಆದರೆ, ರಾಜಮೌಳಿ ಜೊತೆ ಕೆಲಸ ಮಾಡಲ್ಲ ಎಂದು ರಣಬೀರ್ ಕಪೂರ್ ಈ ಹಿಂದೆ ಹೇಳಿದ ಮಾತು ನೆನಪಿದೆಯೇ?

ಅದು ‘ಅನಿಮಲ್’ ಸಿನಿಮಾ ರಿಲೀಸ್ ಸಂದರ್ಭ. ‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಹೀರೋ ಆಗಿ ನಟಿಸಿದರೆ, ಸಂದೀಪ್ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಕಾರ್ಯಕ್ರಮಕ್ಕಾಗಿ ರಾಜಮೌಳಿ ವೇದಿಕೆ ಮೇಲೆ ಇದ್ದರು. ಈ ವೇಳೆ ರಾಜಮೌಳಿ ಹಾಗೂ ರಣಬೀರ್ ಮಧ್ಯೆ ಚರ್ಚೆ ನಡೆದಿದೆ.

‘ಸಂದೀಪ್ ರೆಡ್ಡಿ ವಂಗ ಅವರು ನಿಮಗೆ ಅತ್ಯುತ್ತಮ ನಿರ್ದೇಶಕರು ಅಲ್ಲವೇ? ಒಂದೊಮ್ಮೆ ನನ್ನ ಹಾಗೂ ಸಂದೀಪ್ ಮಧ್ಯೆ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರೆ ಯಾರನ್ನು ಆಯ್ಕೆ ಮಾಡುತ್ತೀರಿ’ ಎಂದು ರಾಜಮೌಳಿ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ್ದ ರಣಬೀರ್ ಕಪೂರ್, ‘ನಾನು ಡಬಲ್ ಶಿಫ್ಟ್ ಮಾಡುತ್ತೇನೆ’ ಎಂದರು. ಇದನ್ನು ರಾಜಮೌಳಿ ಒಪ್ಪಿಕೊಂಡಿಲ್ಲ.

‘ಒಬ್ಬರನ್ನು ಮಾತ್ರ ಆಯ್ಕೆ ಮಾಡಬೇಕು’ ಎಂದು ರಾಜಮೌಳಿ ಷರತ್ತು ಹಾಕಿದರು. ಆಗ ರಣಬೀರ್ ಅವರು ನೇರವಾಗಿ, ‘ಸಂದೀಪ್ ರೆಡ್ಡಿ ವಂಗ’ ಎಂದು ಹೇಳಿದರು. ‘ನಾನು ನಿಯತ್ತಿನ ಕಲಾವಿದ. ಹೀಗಾಗಿ, ಸಂದೀಪ್ ರೆಡ್ಡಿ ವಂಗ’ ಅವರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದರು.  ಅವರ ಈ ಉತ್ತರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಸಾಮಾನ್ಯವಾಗಿ ರಾಜಮೌಳಿ ಬಂದು ನಾನಾ ಅಥವಾ ಇನ್ನೊಬ್ಬರಾ ಎಂದು ಪ್ರಶ್ನೆ ಮಾಡಿದರೆ ರಾಜಮೌಳಿ ಹೆಸರನ್ನೇ ಎಲ್ಲರೂ ತೆಗೆದುಕೊಳ್ಳುತ್ತಾರೆ. ಆದರೆ, ರಣಬೀರ್ ಕಪೂರ್ ಆ ರೀತಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಅನಿಮಲ್’ ಸಿನಿಮಾ ಕಳೆದ ವರ್ಷ ಡಿಸೆಂಬರ್​ನಲ್ಲಿ ಬಿಡುಗಡೆ ಕಂಡಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರವನ್ನು ಕೆಲವರು ಅತಿಯಾಗಿ ಟೀಕೆ ಮಾಡಿದ್ದೂ ಇದೆ. ಇನ್ನೂ ಕೆಲವರು ಸಿನಿಮಾನ ಹೊಗಳಿದ್ದಾರೆ.

ಇದನ್ನೂ ಓದಿ: ಕಪಿಲ್ ಶರ್ಮಾ, ಜೂ ಎನ್​ಟಿಆರ್ ವಿರುದ್ಧ ರಾಜಮೌಳಿ ಅಭಿಮಾನಿಗಳ ಅಸಮಾಧಾನ

ಸಿನಿಮಾ ವಿಚಾರಕ್ಕೆ ಬರೋದಾದರೆ ರಾಜಮೌಳಿ ಅವರು ಮಹೇಶ್ ಬಾಬು ಜೊತೆಯಲ್ಲಿ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ರೀತಿ ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?