AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ

‘ಒಂದು ಸೂಕ್ತವಲ್ಲದ ಸಮಯದಲ್ಲಿ ನಾನು ನನ್ನ ಮಗನಿಗೆ ಬಜರಂಗಿ ಭಾಯಿಜಾನ್​ ಚಿತ್ರದ ಕಥೆ ಹೇಳಿದೆ. ಆ ಸಂದರ್ಭದಲ್ಲಿ ಅವನು ಬಾಹುಬಲಿ ಚಿತ್ರದಲ್ಲಿನ ಯುದ್ಧದ ಸನ್ನಿವೇಶದ ಶೂಟಿಂಗ್​ ಮಾಡುತ್ತಿದ್ದ’ ಎಂದು ಅಂದಿನ ಘಟನೆಯನ್ನು ವಿಜಯೇಂದ್ರ ಪ್ರಸಾದ್​ ನೆನಪಿಸಿಕೊಂಡಿದ್ದಾರೆ.

ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ
ಸಲ್ಮಾನ್​ ಖಾನ್​, ರಾಜಮೌಳಿ
TV9 Web
| Edited By: |

Updated on: Jul 25, 2021 | 8:57 AM

Share

ಭಾರತೀಯ ಚಿತ್ರರಂಗದಲ್ಲಿ ನಿರ್ದೇಶಕ ರಾಜಮೌಳಿ (SS Rajamouli) ಸೋಲಿಲ್ಲದ ಸರದಾರ. ದೊಡ್ಡ ಕನಸು ಕಾಣುವ ಅವರು ಅದನ್ನು ನನಸಾಗಿಸಿ ತೋರಿಸುತ್ತಾರೆ. ‘ಬಾಹುಬಲಿ’ ರೀತಿಯ ದೈತ್ಯ ಸಿನಿಮಾಗಳನ್ನು ಮಾಡಿ ಜಗತ್ತಿನಾದ್ಯಂತ ಫೇಮಸ್​ ಆದ ಅವರು ಈಗ ಆರ್​ಆರ್​ಆರ್​ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಒಂದು ಸಿನಿಮಾ ಮಾಡಲು ಹಲವು ವರ್ಷಗಳ ಸಮಯ ಮೀಸಲಿಡುವುದು ಅವರ ಸ್ಟೈಲ್​. ಅದರಿಂದಾಗಿ ಅವರು ಬೇರೆ ಕೆಲವು ಸಿನಿಮಾಗಳನ್ನು ರಿಜೆಕ್ಟ್​ ಮಾಡಬೇಕಾಗುತ್ತದೆ. ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್ ಖಾನ್ (Salman Khan) ಜೊತೆ ಸಿನಿಮಾ ಮಾಡುವ ಅವಕಾಶವನ್ನು ಕೂಡ ಅವರು ಕೈ ಚೆಲ್ಲಿದ್ದರು ಎಂಬ ವಿಷಯ ಈಗ ಬಹಿರಂಗ ಆಗಿದೆ. 

2015ರಲ್ಲಿ ಸಲ್ಮಾನ್​ ಖಾನ್​ ನಟಿಸಿದ ‘ಬಜರಂಗಿ ಭಾಯಿಜಾನ್​’ ಸಿನಿಮಾ ಸೂಪರ್​ ಹಿಟ್​ ಆಯಿತು. ಅದಕ್ಕೆ ನಿರ್ದೇಶನ ಮಾಡಿದವರು ಕಬೀರ್​ ಖಾನ್​. ಕಥೆ ಬರೆದವರು ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​. ರಾಜಮೌಳಿ ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡಬೇಕು ಎಂಬುದು ವಿಜಯೇಂದ್ರ ಪ್ರಸಾದ್​ ಅವರ ಆಸೆ ಆಗಿತ್ತು. ಆದರೆ ಅವರು ಮಾಡಿದ ಒಂದೇ ಒಂದು ತಪ್ಪಿನಿಂದಾಗಿ ಆ ಆಸೆ ಈಡೇರಲಿಲ್ಲ. ಆ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಿಜಯೇಂದ್ರ ಪ್ರಸಾದ್​ ಈಗ ಬಾಯಿ ಬಿಟ್ಟಿದ್ದಾರೆ.

‘ಒಂದು ಸೂಕ್ತವಲ್ಲದ ಸಮಯದಲ್ಲಿ ನಾನು ನನ್ನ ಮಗನಿಗೆ ಬಜರಂಗಿ ಭಾಯಿ​ಜಾನ್​ ಚಿತ್ರದ ಕಥೆ ಹೇಳಿದೆ. ಆ ಸಂದರ್ಭದಲ್ಲಿ ಅವನು ಬಾಹುಬಲಿ ಚಿತ್ರದಲ್ಲಿನ ಯುದ್ಧದ ಸನ್ನಿವೇಶದ ಶೂಟಿಂಗ್​ ಮಾಡುತ್ತಿದ್ದ. ಅದು ತುಂಬ ಬ್ಯುಸಿ ಸಮಯವಾಗಿತ್ತು. ನಮ್ಮೆಲ್ಲರ ಗಮನ ಶೂಟಿಂಗ್​ ಮೇಲಿತ್ತು. ಹಾಗಾಗಿ ಬಜರಂಗಿ ಭಾಯಿಜಾನ್​ ಕಥೆಯ ಕಡೆಗೆ ರಾಜಮೌಳಿಗೆ ಗಮನ ನೀಡಲು ಸಾಧ್ಯವಾಗಲಿಲ್ಲ. ಬೇರೆ ಯಾವುದಾದರೂ ಸರಿಯಾದ ಸಮಯ ನೋಡಿಕೊಂಡು ನಾನು ಕಥೆ ಹೇಳಬೇಕಿತ್ತು’ ಎಂದು ಈಗ ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ ಪಟ್ಟಿದ್ದಾರೆ.

ಮಾಮೂಲಿ ಸಲ್ಮಾನ್​ ಖಾನ್​ ಸಿನಿಮಾಗಳಿಗಿಂತ ತುಂಬ ಡಿಫರೆಂಟ್​ ಆದ ಕಥೆಯನ್ನು ‘ಬಜರಂಗಿ ಭಾಯಿಜಾನ್​’ ಚಿತ್ರ ಹೊಂದಿತ್ತು. ಕಬೀರ್​ ಖಾನ್​ ಅತ್ಯುತ್ತಮವಾಗಿ ನಿರ್ದೇಶನ ಮಾಡಿದ್ದರು. ಪುಟ್ಟ ಬಾಲಕಿ ಹರ್ಷಾಲಿ ಮಲ್ಹೋತ್ರಾ, ನಾಯಕಿ ಕರೀನಾ ಕಪೂರ್​, ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡ ನವಾಜುದ್ದೀನ್​ ಸಿದ್ಧಿಖಿ ಸೇರಿದಂತೆ ಎಲ್ಲರ ನಟನೆಯೂ ಗಮನಾರ್ಹವಾಗಿತ್ತು.

ಇದನ್ನೂ ಓದಿ:

ವಿದೇಶದಲ್ಲಿದ್ದಾರಾ ಸಲ್ಮಾನ್​ ಖಾನ್​ ಪತ್ನಿ ನೂರ್​ ಮತ್ತು 17 ವರ್ಷದ ಮಗಳು? ಹೊಸ ರಹಸ್ಯ

‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ