‘ಸ್ತ್ರೀ 2’ನಲ್ಲಿ ಅತಿಥಿ ಪಾತ್ರ ಮಾಡಿದ ವರುಣ್ ಧವನ್​ಗೆ ಭರ್ಜರಿ ಸಂಭಾವನೆ; ಉಳಿದವರ ರೆಮ್ಯುನರೇಷನ್ ಎಷ್ಟು?

ಶ್ರದ್ಧಾ ಕಪೂರ್ ನಟನೆಯ ‘ಸ್ತ್ರೀ 2’ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 190.55 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾನುವಾರ ಈ ಸಿನಿಮಾ ಬರೋಬ್ಬರಿ 55 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿದೆ. ಈ ಚಿತ್ರದ ಕಲಾವಿದರ ಸಂಭಾವನೆ ಬಗ್ಗೆ ಇಲ್ಲಿದೆ ವಿವರ.

‘ಸ್ತ್ರೀ 2’ನಲ್ಲಿ ಅತಿಥಿ ಪಾತ್ರ ಮಾಡಿದ ವರುಣ್ ಧವನ್​ಗೆ ಭರ್ಜರಿ ಸಂಭಾವನೆ; ಉಳಿದವರ ರೆಮ್ಯುನರೇಷನ್ ಎಷ್ಟು?
ಸ್ತ್ರೀ 2
Edited By:

Updated on: Aug 19, 2024 | 10:50 AM

‘ಸ್ತ್ರೀ 2 ಚಿತ್ರ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೂರೇ ದಿನಕ್ಕೆ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾನುವಾರವೂ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಚಿತ್ರದ ಕಲಾವಿದರು ಪಡೆದಿರುವ ಸಂಭಾವನೆ ಬಗ್ಗೆ ಈಗ ಚರ್ಚೆಗಳು ಶುರವಾಗಿವೆ. ರಾಜ್​ಕುಮಾರ್ ರಾವ್ ಅವರು ‘ಸ್ತ್ರೀ 2’ ಚಿತ್ರದಲ್ಲಿ ಹೆಚ್ಚು ಸಂಭಾವನೆ ಪಡೆದ ಹೀರೋ ಎನಿಸಿಕೊಂಡಿದ್ದಾರೆ. ಆ ಬಳಿಕ ಶ್ರದ್ಧಾ ಕಪೂರ್ ನಿಲ್ಲುತ್ತಾರೆ. ಇನ್ನು, ವರುಣ್ ಧವನ್ ಕೂಡ ಒಳ್ಳೆಯ ಸಂಭಾವನೆ ಪಡೆದಿದ್ದಾರೆ.

‘ಸ್ತ್ರೀ’ ಸಿನಿಮಾ 2018ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ‘ಸ್ತ್ರೀ 2’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಸಿನಿಮಾದ ನಟನೆಗೆ ರಾಜ್​ಕುಮಾರ್ ರಾವ್ ಅವರು ಬರೋಬ್ಬರಿ 6 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಅವರು ವಿಕ್ಕಿ ಹೆಸರಿನ ಪಾತ್ರ ಮಾಡಿದ್ದಾರೆ. ಶ್ರದ್ಧಾ ಕಪೂರ್ ಅವರ ಪಾತ್ರಕ್ಕೂ ಸಾಕಷ್ಟು ತೂಕ ಇದೆ. ಅವರು ಈ ಚಿತ್ರದ ನಟನೆಗೆ 5 ಕೋಟಿ ರೂಪಾಯಿ ಪಡೆದಿದ್ದಾರೆ.

ಶ್ರದ್ಧಾ ಕಪೂರ್ ಅವರು ಈ ಚಿತ್ರವನ್ನು ಇಷ್ಟಪಟ್ಟು ಮಾಡಿದ್ದಾರೆ. ಹೀಗಾಗಿ, ಅವರು ಈ ಚಿತ್ರಕ್ಕೆ ಪಡೆದ ಹಣ ಕಡಿಮೆ. ಈ ಮೊದಲು ‘ತು ಜೂಟಿ ಮೇ ಮಕ್ಕರ್’ ಸಿನಿಮಾಗಾಗಿ ಬರೋಬ್ಬರಿ 7 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎನ್ನಲಾಗಿದೆ. ಈ ಚಿತ್ರಕ್ಕಿಂತ 2 ಕೋಟಿ ರೂಪಾಯಿ ಕಡಿಮೆ ಹಣವನ್ನೇ ಅವರು ಪಡೆದಿದ್ದಾರೆ.

ಈ ಚಿತ್ರದಲ್ಲಿ ವರುಣ್ ಧವನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅವರು ಕೆಲವೇ ನಿಮಿಷ ಬಂದು ಹೋಗುವ ವರುಣ್ ಧವನ್​ಗೆ 2 ಕೋಟಿ ರೂಪಾಯಿ ಪಡೆದಿದ್ದಾರೆ. ಅವರು ‘ಭೇಡಿಯಾ’ ಸಿನಿಮಾದ ಅವತಾರದಲ್ಲಿ ಬಂದಿದ್ದಾರೆ. ಅವರಿಗೆ ನೀಡಿದ ಸಂಭಾವನೆ ದುಬಾರಿ ಆಯಿತು ಎಂದು ಅನೇಕರು ಭಾವಿಸಿದ್ದಾರೆ.

ಇದನ್ನೂ ಓದಿ: ಲಾಲು ಬಯೋಪಿಕ್​ನಲ್ಲಿ ನಟಿಸೋಕೆ ಪಂಕಜ್ ತ್ರಿಪಾಠಿ ಸೂಕ್ತ; ಶುರುವಾಗಿದೆ ಚರ್ಚೆ 

ಪಂಕಜ್ ತ್ರಿಪಾಠಿ ಅವರು ಈ ಚಿತ್ರಕ್ಕಾಗಿ 3 ಕೋಟಿ ರೂಪಾಯಿ ಪಡೆದಿದ್ದಾರೆ. ಇನ್ನು, ಅಪರಶಕ್ತಿ ಖುರಾನಾ ಅವರು 70 ಲಕ್ಷ ರೂಪಾಯಿ, ಅಭಿಷೇಕ್ ಬ್ಯಾನರ್ಜಿ ಅವರು 55 ಲಕ್ಷ ರೂಪಾಯಿ ಪಡೆದುಕೊಂಡಿದ್ದಾರೆ. ‘ಸ್ತ್ರೀ 2’ ಸಿನಿಮಾ ಕೇವಲ ನಾಲ್ಕು ದಿನಕ್ಕೆ 190 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಸಿನಿಮಾ ಗಳಿಕೆಯಲ್ಲಿ ಎಲ್ಲವನ್ನೂ ಮೀರಿಸಿದೆ. ಶೀಘ್ರವೇ ಸಿನಿಮಾ 300 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:47 am, Mon, 19 August 24

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us