AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಮೊದಲ ದಿನವೇ 54 ಕೋಟಿ ರೂಪಾಯಿ ಕಲೆಕ್ಷನ್

ಹಾರರ್-ಕಾಮಿಡಿ ಶೈಲಿಯಲ್ಲಿ ‘ಸ್ತ್ರೀ 2′ ಸಿದ್ಧವಾಗಿದೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಿದೆ. ‘ಸ್ತ್ರೀ 2′ ಜೊತೆಗೆ ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಮತ್ತು ಜಾನ್ ಅಬ್ರಹಾಂ, ಶಾರ್ವರಿ ವಾಘ್ ಅವರ ‘ವೇದ್’ ಕೂಡ ಆಗಸ್ಟ್ 15 ರಂದು ಬಿಡುಗಡೆ ಆಗಿದೆ. ಈ ಪೈಕಿ ‘ಸ್ತ್ರೀ 2’ ಗೆದ್ದಿದೆ.

ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಮೊದಲ ದಿನವೇ 54 ಕೋಟಿ ರೂಪಾಯಿ ಕಲೆಕ್ಷನ್
ಸ್ತ್ರೀ 2
ರಾಜೇಶ್ ದುಗ್ಗುಮನೆ
|

Updated on: Aug 16, 2024 | 7:20 AM

Share

ಅಮರ್ ಕೌಶಿಕ್ ನಿರ್ದೇಶನದ ‘ಸ್ತ್ರೀ’ ಚಿತ್ರಕ್ಕೆ ಬರೋಬ್ಬರಿ 6 ವರ್ಷಗಳ ಬಳಿಕ ಸೀಕ್ವೆಲ್ ಬಂದಿದೆ. ‘ಸ್ತ್ರೀ 2’ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಿದೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳು ರಿಲೀಸ್ ಆಗಿದ್ದವು. ಆದರೆ, ಈ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ 54.3 ಕೋಟಿ ರೂಪಾಯಿ ಆಗಿದೆ. ಒಳ್ಳೆಯ ಸಿನಿಮಾ ಕೊಟ್ಟರೆ ಎಲ್ಲರೂ ವೀಕ್ಷಿಸುತ್ತಾರೆ ಅನ್ನೋದಕ್ಕೆ ಇದು ಒಂದೊಳ್ಳೆಯ ಉದಾಹರಣೆ. ಈ ವರ್ಷದ ಅತಿ ದೊಡ್ಡ ಓಪನಿಂಗ್ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕೆ ಸಿಕ್ಕಿದೆ.

ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್, ಅಭಿಷೇಕ್ ಬ್ಯಾನರ್ಜಿ, ಪಂಕಜ್ ತ್ರಿಪಾಠಿ ‘ಸ್ತ್ರೀ 2 ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಪ್ರೀಮಿಯರ್ ಶೋಗಳಿಂದ 8 ಕೋಟಿ ರೂಪಾಯಿ ಹಾಗೂ ಮೊದಲ ದಿನದ ಗಳಿಕೆಯಿಂದ 46 ಕೋಟಿ ರೂಪಾಯಿ ಸಿಕ್ಕಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 54.35 ಕೋಟಿ ರೂಪಾಯಿ ಆಗಿದೆ. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಮೊದಲ ದಿನದ ಕಲೆಕ್ಷನ್​ನ ಈ ಸಿನಿಮಾ ಹಿಂದಿಕ್ಕಿದೆ.

ಈ ಚಿತ್ರದ ಜೊತೆಗೆ ಬಾಲಿವುಡ್​ನಲ್ಲಿ ಇನ್ನೂ ಎರಡು ಸಿನಿಮಾಗಳು ಬಿಡುಗಡೆ ಕಂಡಿದ್ದವು. ‘ಖೇಲ್ ಖೇಲ್ ಮೇ’ ಹಾಗೂ ಜಾನ್ ಅಬ್ರಹಾಂ ನಟನೆಯ ‘ವೇದ’ ಚಿತ್ರಗಳು ರಿಲೀಸ್ ಆಗಿವೆ. ‘ವೇದ’ ಸಿನಿಮಾ 6 ಕೋಟಿ ರೂಪಾಯಿ ಹಾಗೂ ‘ಖೇಲ್ ಖೇಲ್ ಮೇ’ 5 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ.

ಇದನ್ನೂ ಓದಿ: ‘ಸ್ತ್ರೀ’ ತಂಡಕ್ಕೆ ಆಗಿತ್ತು ಹಾರರ್ ಅನುಭವ; ವಿವರಿಸಿದ ರಾಜ್​ಕುಮಾರ್ ರಾವ್

‘ಸ್ತ್ರೀ’ ಸಿನಿಮಾದ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಹಲವು ವಿಶೇಷ ಅತಿಥಿ ಪಾತ್ರಗಳು ಇವೆ. ವರುಣ್ ಧವನ್ ಅವರು ಕೂಡ ಈ ಚಿತ್ರದಲ್ಲಿ ಬಂದು ಹೋಗಿದ್ದಾರೆ. ಈ ಚಿತ್ರದಿಂದ ಬಾಲಿವುಡ್​ಗೆ ಮೊದಲ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ ಒಳ್ಳೆಯ ರೇಟಿಂಗ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್