AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಮೊದಲ ದಿನವೇ 54 ಕೋಟಿ ರೂಪಾಯಿ ಕಲೆಕ್ಷನ್

ಹಾರರ್-ಕಾಮಿಡಿ ಶೈಲಿಯಲ್ಲಿ ‘ಸ್ತ್ರೀ 2′ ಸಿದ್ಧವಾಗಿದೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಿದೆ. ‘ಸ್ತ್ರೀ 2′ ಜೊತೆಗೆ ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಮತ್ತು ಜಾನ್ ಅಬ್ರಹಾಂ, ಶಾರ್ವರಿ ವಾಘ್ ಅವರ ‘ವೇದ್’ ಕೂಡ ಆಗಸ್ಟ್ 15 ರಂದು ಬಿಡುಗಡೆ ಆಗಿದೆ. ಈ ಪೈಕಿ ‘ಸ್ತ್ರೀ 2’ ಗೆದ್ದಿದೆ.

ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಮೊದಲ ದಿನವೇ 54 ಕೋಟಿ ರೂಪಾಯಿ ಕಲೆಕ್ಷನ್
ಸ್ತ್ರೀ 2
ರಾಜೇಶ್ ದುಗ್ಗುಮನೆ
|

Updated on: Aug 16, 2024 | 7:20 AM

Share

ಅಮರ್ ಕೌಶಿಕ್ ನಿರ್ದೇಶನದ ‘ಸ್ತ್ರೀ’ ಚಿತ್ರಕ್ಕೆ ಬರೋಬ್ಬರಿ 6 ವರ್ಷಗಳ ಬಳಿಕ ಸೀಕ್ವೆಲ್ ಬಂದಿದೆ. ‘ಸ್ತ್ರೀ 2’ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಿದೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳು ರಿಲೀಸ್ ಆಗಿದ್ದವು. ಆದರೆ, ಈ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ 54.3 ಕೋಟಿ ರೂಪಾಯಿ ಆಗಿದೆ. ಒಳ್ಳೆಯ ಸಿನಿಮಾ ಕೊಟ್ಟರೆ ಎಲ್ಲರೂ ವೀಕ್ಷಿಸುತ್ತಾರೆ ಅನ್ನೋದಕ್ಕೆ ಇದು ಒಂದೊಳ್ಳೆಯ ಉದಾಹರಣೆ. ಈ ವರ್ಷದ ಅತಿ ದೊಡ್ಡ ಓಪನಿಂಗ್ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕೆ ಸಿಕ್ಕಿದೆ.

ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್, ಅಭಿಷೇಕ್ ಬ್ಯಾನರ್ಜಿ, ಪಂಕಜ್ ತ್ರಿಪಾಠಿ ‘ಸ್ತ್ರೀ 2 ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಪ್ರೀಮಿಯರ್ ಶೋಗಳಿಂದ 8 ಕೋಟಿ ರೂಪಾಯಿ ಹಾಗೂ ಮೊದಲ ದಿನದ ಗಳಿಕೆಯಿಂದ 46 ಕೋಟಿ ರೂಪಾಯಿ ಸಿಕ್ಕಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 54.35 ಕೋಟಿ ರೂಪಾಯಿ ಆಗಿದೆ. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಮೊದಲ ದಿನದ ಕಲೆಕ್ಷನ್​ನ ಈ ಸಿನಿಮಾ ಹಿಂದಿಕ್ಕಿದೆ.

ಈ ಚಿತ್ರದ ಜೊತೆಗೆ ಬಾಲಿವುಡ್​ನಲ್ಲಿ ಇನ್ನೂ ಎರಡು ಸಿನಿಮಾಗಳು ಬಿಡುಗಡೆ ಕಂಡಿದ್ದವು. ‘ಖೇಲ್ ಖೇಲ್ ಮೇ’ ಹಾಗೂ ಜಾನ್ ಅಬ್ರಹಾಂ ನಟನೆಯ ‘ವೇದ’ ಚಿತ್ರಗಳು ರಿಲೀಸ್ ಆಗಿವೆ. ‘ವೇದ’ ಸಿನಿಮಾ 6 ಕೋಟಿ ರೂಪಾಯಿ ಹಾಗೂ ‘ಖೇಲ್ ಖೇಲ್ ಮೇ’ 5 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ.

ಇದನ್ನೂ ಓದಿ: ‘ಸ್ತ್ರೀ’ ತಂಡಕ್ಕೆ ಆಗಿತ್ತು ಹಾರರ್ ಅನುಭವ; ವಿವರಿಸಿದ ರಾಜ್​ಕುಮಾರ್ ರಾವ್

‘ಸ್ತ್ರೀ’ ಸಿನಿಮಾದ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಹಲವು ವಿಶೇಷ ಅತಿಥಿ ಪಾತ್ರಗಳು ಇವೆ. ವರುಣ್ ಧವನ್ ಅವರು ಕೂಡ ಈ ಚಿತ್ರದಲ್ಲಿ ಬಂದು ಹೋಗಿದ್ದಾರೆ. ಈ ಚಿತ್ರದಿಂದ ಬಾಲಿವುಡ್​ಗೆ ಮೊದಲ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ ಒಳ್ಳೆಯ ರೇಟಿಂಗ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!