AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಮೊದಲ ದಿನವೇ 54 ಕೋಟಿ ರೂಪಾಯಿ ಕಲೆಕ್ಷನ್

ಹಾರರ್-ಕಾಮಿಡಿ ಶೈಲಿಯಲ್ಲಿ ‘ಸ್ತ್ರೀ 2′ ಸಿದ್ಧವಾಗಿದೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಿದೆ. ‘ಸ್ತ್ರೀ 2′ ಜೊತೆಗೆ ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಮತ್ತು ಜಾನ್ ಅಬ್ರಹಾಂ, ಶಾರ್ವರಿ ವಾಘ್ ಅವರ ‘ವೇದ್’ ಕೂಡ ಆಗಸ್ಟ್ 15 ರಂದು ಬಿಡುಗಡೆ ಆಗಿದೆ. ಈ ಪೈಕಿ ‘ಸ್ತ್ರೀ 2’ ಗೆದ್ದಿದೆ.

ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಮೊದಲ ದಿನವೇ 54 ಕೋಟಿ ರೂಪಾಯಿ ಕಲೆಕ್ಷನ್
ಸ್ತ್ರೀ 2
ರಾಜೇಶ್ ದುಗ್ಗುಮನೆ
|

Updated on: Aug 16, 2024 | 7:20 AM

Share

ಅಮರ್ ಕೌಶಿಕ್ ನಿರ್ದೇಶನದ ‘ಸ್ತ್ರೀ’ ಚಿತ್ರಕ್ಕೆ ಬರೋಬ್ಬರಿ 6 ವರ್ಷಗಳ ಬಳಿಕ ಸೀಕ್ವೆಲ್ ಬಂದಿದೆ. ‘ಸ್ತ್ರೀ 2’ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಿದೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳು ರಿಲೀಸ್ ಆಗಿದ್ದವು. ಆದರೆ, ಈ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ 54.3 ಕೋಟಿ ರೂಪಾಯಿ ಆಗಿದೆ. ಒಳ್ಳೆಯ ಸಿನಿಮಾ ಕೊಟ್ಟರೆ ಎಲ್ಲರೂ ವೀಕ್ಷಿಸುತ್ತಾರೆ ಅನ್ನೋದಕ್ಕೆ ಇದು ಒಂದೊಳ್ಳೆಯ ಉದಾಹರಣೆ. ಈ ವರ್ಷದ ಅತಿ ದೊಡ್ಡ ಓಪನಿಂಗ್ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕೆ ಸಿಕ್ಕಿದೆ.

ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್, ಅಭಿಷೇಕ್ ಬ್ಯಾನರ್ಜಿ, ಪಂಕಜ್ ತ್ರಿಪಾಠಿ ‘ಸ್ತ್ರೀ 2 ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಪ್ರೀಮಿಯರ್ ಶೋಗಳಿಂದ 8 ಕೋಟಿ ರೂಪಾಯಿ ಹಾಗೂ ಮೊದಲ ದಿನದ ಗಳಿಕೆಯಿಂದ 46 ಕೋಟಿ ರೂಪಾಯಿ ಸಿಕ್ಕಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 54.35 ಕೋಟಿ ರೂಪಾಯಿ ಆಗಿದೆ. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಮೊದಲ ದಿನದ ಕಲೆಕ್ಷನ್​ನ ಈ ಸಿನಿಮಾ ಹಿಂದಿಕ್ಕಿದೆ.

ಈ ಚಿತ್ರದ ಜೊತೆಗೆ ಬಾಲಿವುಡ್​ನಲ್ಲಿ ಇನ್ನೂ ಎರಡು ಸಿನಿಮಾಗಳು ಬಿಡುಗಡೆ ಕಂಡಿದ್ದವು. ‘ಖೇಲ್ ಖೇಲ್ ಮೇ’ ಹಾಗೂ ಜಾನ್ ಅಬ್ರಹಾಂ ನಟನೆಯ ‘ವೇದ’ ಚಿತ್ರಗಳು ರಿಲೀಸ್ ಆಗಿವೆ. ‘ವೇದ’ ಸಿನಿಮಾ 6 ಕೋಟಿ ರೂಪಾಯಿ ಹಾಗೂ ‘ಖೇಲ್ ಖೇಲ್ ಮೇ’ 5 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ.

ಇದನ್ನೂ ಓದಿ: ‘ಸ್ತ್ರೀ’ ತಂಡಕ್ಕೆ ಆಗಿತ್ತು ಹಾರರ್ ಅನುಭವ; ವಿವರಿಸಿದ ರಾಜ್​ಕುಮಾರ್ ರಾವ್

‘ಸ್ತ್ರೀ’ ಸಿನಿಮಾದ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಹಲವು ವಿಶೇಷ ಅತಿಥಿ ಪಾತ್ರಗಳು ಇವೆ. ವರುಣ್ ಧವನ್ ಅವರು ಕೂಡ ಈ ಚಿತ್ರದಲ್ಲಿ ಬಂದು ಹೋಗಿದ್ದಾರೆ. ಈ ಚಿತ್ರದಿಂದ ಬಾಲಿವುಡ್​ಗೆ ಮೊದಲ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ ಒಳ್ಳೆಯ ರೇಟಿಂಗ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ