AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​, ರಣಬೀರ್ ದಾಖಲೆ ಮುರಿದ ಶ್ರದ್ಧಾ ಕಪೂರ್; ದಾಖಲೆ ಬರೆದ ‘ಸ್ತ್ರೀ 2’ ಸಿನಿಮಾ

‘ಸ್ತ್ರೀ’ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬಳಿಕ ತೆರೆಗೆ ಬಂದಿದ್ದು ‘ಸ್ತ್ರೀ 2’. ಈ ಚಿತ್ರದಲ್ಲಿ ಯಾವುದೇ ಆ್ಯಕ್ಷನ್ ಇರಲಿಲ್ಲ. ಈ ಚಿತ್ರ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಅಲ್ಲದೆ ಭರ್ಜರಿ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದಾರೆ.

ಶಾರುಖ್​, ರಣಬೀರ್ ದಾಖಲೆ ಮುರಿದ ಶ್ರದ್ಧಾ ಕಪೂರ್; ದಾಖಲೆ ಬರೆದ ‘ಸ್ತ್ರೀ 2’ ಸಿನಿಮಾ
‘ಸ್ತ್ರೀ 2’ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: Sep 24, 2024 | 1:21 PM

Share

ಶ್ರದ್ಧಾ ಕಪೂರ್ ಅವರು ಹಾಗೂ ರಾಜ್​ಕುಮಾರ್ ರಾವ್ ನಟನೆಯ ‘ಸ್ತ್ರೀ 2’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಆಗಸ್ಟ್ 15ರಂದು ರಿಲೀಸ್ ಆದ ಈ ಚಿತ್ರ ಈಗಲೂ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ ಅನ್ನೋದು ವಿಶೇಷ. ಈ ಸಿನಿಮಾ ಕೇವಲ 39 ದಿನಗಳಲ್ಲಿ ಬರೋಬ್ಬರಿ 600 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹಿಂದಿ ಸಿನಿಮಾ ಒಂದು ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಈ ಮೊದಲು ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಪಠಾಣ್’, ಸನ್ನಿ ಡಿಯೋಲ್ ನಟನೆಯ ‘ಗಧರ್ 2’ ಮೊದಲಾದ ಚಿತ್ರಗಳು 500 ಕೋಟಿ ರೂಪಾಯಿ ಕ್ಲಬ್ ಸೇರಿವೆ. ಆದರೆ, ಬಾಲಿವುಡ್​ನ ಯಾವ ಸಿನಿಮಾ ಕೂಡ 600 ಕೋಟಿ ರೂಪಾಯಿ ಗಳಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ‘ಸ್ತ್ರೀ 2’ ಚಿತ್ರ ಈ ದಾಖಲೆಯನ್ನು ಮಾಡಿದೆ. ಈ ಮೂಲಕ ಸಿನಿಮಾ ಶಾರುಖ್ ಖಾನ್, ಸನ್ನಿ ಡಿಯೋಲ್​, ರಣಬಿರ್ ಕಪೂರ್ ಅವರಂಥ ಸಿನಿಮಾಗಳ ಗಳಿಕೆಯನ್ನು ಹಿಂದಿಕ್ಕಿದೆ.

ಈ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಅವರು ಮಾಹಿತಿ ನೀಡಿದ್ದಾರೆ. ‘ಸ್ತ್ರೀ 2 ಸಿನಿಮಾ ಇತಿಹಾಸ ಬರೆದಿದೆ. 600 ಕೋಟಿ ರೂಪಾಯಿ ಕಲೆಕ್ಷನ್. ಮೆಟ್ರೋ ನಗರ ಸೇರಿ ಎಲ್ಲಾ ನಗರಗಳಲ್ಲೂ ಸಿನಿಮಾ ಗೆದ್ದಿದೆ. ಭಾನುವಾರ (ಸೆಪ್ಟೆಂಬರ್ 22) 5.32 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 604 ಕೋಟಿ ರೂಪಾಯಿ’ ಎಂದಿದ್ದಾರೆ ಅವರು. ರಿಲೀಸ್ ಆದ ಒಂದೂವರೆ ತಿಂಗಳ ಬಳಿಕವೂ ಚಿತ್ರವೊಂದು 5+ ಕೋಟಿ ರೂಪಾಯಿ ಗಳಿಸುತ್ತದೆ ಎಂದರೆ ಅದು ದಾಖಲೆಯೇ ಸರಿ.

ಇದನ್ನೂ ಓದಿ:  ‘ಸ್ತ್ರೀ 2’ ತಂದ ಅದೃಷ್ಟ, ಶ್ರದ್ಧಾ ಕಪೂರ್​ಗೆ ಅವಕಾಶಗಳ ಸಾಗರ

‘ಸ್ತ್ರೀ’ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬಳಿಕ ತೆರೆಗೆ ಬಂದಿದ್ದು ‘ಸ್ತ್ರೀ 2’. ಈ ಚಿತ್ರದಲ್ಲಿ ಯಾವುದೇ ಆ್ಯಕ್ಷನ್ ಇರಲಿಲ್ಲ. ಈ ಚಿತ್ರ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಅಲ್ಲದೆ ಭರ್ಜರಿ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಇದು ಜನರಿಗೆ ಇಷ್ಟ ಆಗಿದೆ. ಈ ಸಿನಿಮಾದ ಗ್ರಾಸ್ ಕಲೆಕ್ಷನ್ 713 ಕೋಟಿ ರೂಪಾಯಿದೆ. ವಿಶ್ವ ಬಾಕ್ಸ್ ಆಫೀಸ್ ಕೂಡ ಸೇರಿದರೆ ಗಳಿಕೆ ಮತ್ತಷ್ಟು ಹೆಚ್ಚಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ