AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​, ರಣಬೀರ್ ದಾಖಲೆ ಮುರಿದ ಶ್ರದ್ಧಾ ಕಪೂರ್; ದಾಖಲೆ ಬರೆದ ‘ಸ್ತ್ರೀ 2’ ಸಿನಿಮಾ

‘ಸ್ತ್ರೀ’ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬಳಿಕ ತೆರೆಗೆ ಬಂದಿದ್ದು ‘ಸ್ತ್ರೀ 2’. ಈ ಚಿತ್ರದಲ್ಲಿ ಯಾವುದೇ ಆ್ಯಕ್ಷನ್ ಇರಲಿಲ್ಲ. ಈ ಚಿತ್ರ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಅಲ್ಲದೆ ಭರ್ಜರಿ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದಾರೆ.

ಶಾರುಖ್​, ರಣಬೀರ್ ದಾಖಲೆ ಮುರಿದ ಶ್ರದ್ಧಾ ಕಪೂರ್; ದಾಖಲೆ ಬರೆದ ‘ಸ್ತ್ರೀ 2’ ಸಿನಿಮಾ
‘ಸ್ತ್ರೀ 2’ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: Sep 24, 2024 | 1:21 PM

Share

ಶ್ರದ್ಧಾ ಕಪೂರ್ ಅವರು ಹಾಗೂ ರಾಜ್​ಕುಮಾರ್ ರಾವ್ ನಟನೆಯ ‘ಸ್ತ್ರೀ 2’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಆಗಸ್ಟ್ 15ರಂದು ರಿಲೀಸ್ ಆದ ಈ ಚಿತ್ರ ಈಗಲೂ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ ಅನ್ನೋದು ವಿಶೇಷ. ಈ ಸಿನಿಮಾ ಕೇವಲ 39 ದಿನಗಳಲ್ಲಿ ಬರೋಬ್ಬರಿ 600 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹಿಂದಿ ಸಿನಿಮಾ ಒಂದು ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಈ ಮೊದಲು ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಪಠಾಣ್’, ಸನ್ನಿ ಡಿಯೋಲ್ ನಟನೆಯ ‘ಗಧರ್ 2’ ಮೊದಲಾದ ಚಿತ್ರಗಳು 500 ಕೋಟಿ ರೂಪಾಯಿ ಕ್ಲಬ್ ಸೇರಿವೆ. ಆದರೆ, ಬಾಲಿವುಡ್​ನ ಯಾವ ಸಿನಿಮಾ ಕೂಡ 600 ಕೋಟಿ ರೂಪಾಯಿ ಗಳಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ‘ಸ್ತ್ರೀ 2’ ಚಿತ್ರ ಈ ದಾಖಲೆಯನ್ನು ಮಾಡಿದೆ. ಈ ಮೂಲಕ ಸಿನಿಮಾ ಶಾರುಖ್ ಖಾನ್, ಸನ್ನಿ ಡಿಯೋಲ್​, ರಣಬಿರ್ ಕಪೂರ್ ಅವರಂಥ ಸಿನಿಮಾಗಳ ಗಳಿಕೆಯನ್ನು ಹಿಂದಿಕ್ಕಿದೆ.

ಈ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಅವರು ಮಾಹಿತಿ ನೀಡಿದ್ದಾರೆ. ‘ಸ್ತ್ರೀ 2 ಸಿನಿಮಾ ಇತಿಹಾಸ ಬರೆದಿದೆ. 600 ಕೋಟಿ ರೂಪಾಯಿ ಕಲೆಕ್ಷನ್. ಮೆಟ್ರೋ ನಗರ ಸೇರಿ ಎಲ್ಲಾ ನಗರಗಳಲ್ಲೂ ಸಿನಿಮಾ ಗೆದ್ದಿದೆ. ಭಾನುವಾರ (ಸೆಪ್ಟೆಂಬರ್ 22) 5.32 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 604 ಕೋಟಿ ರೂಪಾಯಿ’ ಎಂದಿದ್ದಾರೆ ಅವರು. ರಿಲೀಸ್ ಆದ ಒಂದೂವರೆ ತಿಂಗಳ ಬಳಿಕವೂ ಚಿತ್ರವೊಂದು 5+ ಕೋಟಿ ರೂಪಾಯಿ ಗಳಿಸುತ್ತದೆ ಎಂದರೆ ಅದು ದಾಖಲೆಯೇ ಸರಿ.

ಇದನ್ನೂ ಓದಿ:  ‘ಸ್ತ್ರೀ 2’ ತಂದ ಅದೃಷ್ಟ, ಶ್ರದ್ಧಾ ಕಪೂರ್​ಗೆ ಅವಕಾಶಗಳ ಸಾಗರ

‘ಸ್ತ್ರೀ’ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬಳಿಕ ತೆರೆಗೆ ಬಂದಿದ್ದು ‘ಸ್ತ್ರೀ 2’. ಈ ಚಿತ್ರದಲ್ಲಿ ಯಾವುದೇ ಆ್ಯಕ್ಷನ್ ಇರಲಿಲ್ಲ. ಈ ಚಿತ್ರ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಅಲ್ಲದೆ ಭರ್ಜರಿ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಇದು ಜನರಿಗೆ ಇಷ್ಟ ಆಗಿದೆ. ಈ ಸಿನಿಮಾದ ಗ್ರಾಸ್ ಕಲೆಕ್ಷನ್ 713 ಕೋಟಿ ರೂಪಾಯಿದೆ. ವಿಶ್ವ ಬಾಕ್ಸ್ ಆಫೀಸ್ ಕೂಡ ಸೇರಿದರೆ ಗಳಿಕೆ ಮತ್ತಷ್ಟು ಹೆಚ್ಚಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ