ಶಾರುಖ್​, ರಣಬೀರ್ ದಾಖಲೆ ಮುರಿದ ಶ್ರದ್ಧಾ ಕಪೂರ್; ದಾಖಲೆ ಬರೆದ ‘ಸ್ತ್ರೀ 2’ ಸಿನಿಮಾ

‘ಸ್ತ್ರೀ’ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬಳಿಕ ತೆರೆಗೆ ಬಂದಿದ್ದು ‘ಸ್ತ್ರೀ 2’. ಈ ಚಿತ್ರದಲ್ಲಿ ಯಾವುದೇ ಆ್ಯಕ್ಷನ್ ಇರಲಿಲ್ಲ. ಈ ಚಿತ್ರ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಅಲ್ಲದೆ ಭರ್ಜರಿ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದಾರೆ.

ಶಾರುಖ್​, ರಣಬೀರ್ ದಾಖಲೆ ಮುರಿದ ಶ್ರದ್ಧಾ ಕಪೂರ್; ದಾಖಲೆ ಬರೆದ ‘ಸ್ತ್ರೀ 2’ ಸಿನಿಮಾ
‘ಸ್ತ್ರೀ 2’ ಸಿನಿಮಾ ಪೋಸ್ಟರ್​
Follow us
|

Updated on: Sep 24, 2024 | 1:21 PM

ಶ್ರದ್ಧಾ ಕಪೂರ್ ಅವರು ಹಾಗೂ ರಾಜ್​ಕುಮಾರ್ ರಾವ್ ನಟನೆಯ ‘ಸ್ತ್ರೀ 2’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಆಗಸ್ಟ್ 15ರಂದು ರಿಲೀಸ್ ಆದ ಈ ಚಿತ್ರ ಈಗಲೂ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ ಅನ್ನೋದು ವಿಶೇಷ. ಈ ಸಿನಿಮಾ ಕೇವಲ 39 ದಿನಗಳಲ್ಲಿ ಬರೋಬ್ಬರಿ 600 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹಿಂದಿ ಸಿನಿಮಾ ಒಂದು ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಈ ಮೊದಲು ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಪಠಾಣ್’, ಸನ್ನಿ ಡಿಯೋಲ್ ನಟನೆಯ ‘ಗಧರ್ 2’ ಮೊದಲಾದ ಚಿತ್ರಗಳು 500 ಕೋಟಿ ರೂಪಾಯಿ ಕ್ಲಬ್ ಸೇರಿವೆ. ಆದರೆ, ಬಾಲಿವುಡ್​ನ ಯಾವ ಸಿನಿಮಾ ಕೂಡ 600 ಕೋಟಿ ರೂಪಾಯಿ ಗಳಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ‘ಸ್ತ್ರೀ 2’ ಚಿತ್ರ ಈ ದಾಖಲೆಯನ್ನು ಮಾಡಿದೆ. ಈ ಮೂಲಕ ಸಿನಿಮಾ ಶಾರುಖ್ ಖಾನ್, ಸನ್ನಿ ಡಿಯೋಲ್​, ರಣಬಿರ್ ಕಪೂರ್ ಅವರಂಥ ಸಿನಿಮಾಗಳ ಗಳಿಕೆಯನ್ನು ಹಿಂದಿಕ್ಕಿದೆ.

ಈ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಅವರು ಮಾಹಿತಿ ನೀಡಿದ್ದಾರೆ. ‘ಸ್ತ್ರೀ 2 ಸಿನಿಮಾ ಇತಿಹಾಸ ಬರೆದಿದೆ. 600 ಕೋಟಿ ರೂಪಾಯಿ ಕಲೆಕ್ಷನ್. ಮೆಟ್ರೋ ನಗರ ಸೇರಿ ಎಲ್ಲಾ ನಗರಗಳಲ್ಲೂ ಸಿನಿಮಾ ಗೆದ್ದಿದೆ. ಭಾನುವಾರ (ಸೆಪ್ಟೆಂಬರ್ 22) 5.32 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 604 ಕೋಟಿ ರೂಪಾಯಿ’ ಎಂದಿದ್ದಾರೆ ಅವರು. ರಿಲೀಸ್ ಆದ ಒಂದೂವರೆ ತಿಂಗಳ ಬಳಿಕವೂ ಚಿತ್ರವೊಂದು 5+ ಕೋಟಿ ರೂಪಾಯಿ ಗಳಿಸುತ್ತದೆ ಎಂದರೆ ಅದು ದಾಖಲೆಯೇ ಸರಿ.

ಇದನ್ನೂ ಓದಿ:  ‘ಸ್ತ್ರೀ 2’ ತಂದ ಅದೃಷ್ಟ, ಶ್ರದ್ಧಾ ಕಪೂರ್​ಗೆ ಅವಕಾಶಗಳ ಸಾಗರ

‘ಸ್ತ್ರೀ’ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬಳಿಕ ತೆರೆಗೆ ಬಂದಿದ್ದು ‘ಸ್ತ್ರೀ 2’. ಈ ಚಿತ್ರದಲ್ಲಿ ಯಾವುದೇ ಆ್ಯಕ್ಷನ್ ಇರಲಿಲ್ಲ. ಈ ಚಿತ್ರ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಅಲ್ಲದೆ ಭರ್ಜರಿ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಇದು ಜನರಿಗೆ ಇಷ್ಟ ಆಗಿದೆ. ಈ ಸಿನಿಮಾದ ಗ್ರಾಸ್ ಕಲೆಕ್ಷನ್ 713 ಕೋಟಿ ರೂಪಾಯಿದೆ. ವಿಶ್ವ ಬಾಕ್ಸ್ ಆಫೀಸ್ ಕೂಡ ಸೇರಿದರೆ ಗಳಿಕೆ ಮತ್ತಷ್ಟು ಹೆಚ್ಚಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ