AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಚೇತರಿಕೆ ತಂದ ‘ಸ್ತ್ರೀ 2’ ಸಿನಿಮಾ; ಮೂರು ದಿನದಲ್ಲಿ ದಾಖಲೆ ಗಳಿಕೆ

‘ಸ್ತ್ರೀ 2’ ಸಿನಿಮಾಗೆ ಭಾನುವಾರ (ಆಗಸ್ಟ್ 18) ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರ ಭಾನುವಾರ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡೋ ನಿರೀಕ್ಷೆ ಇದೆ. ಇನ್ನು, ಸೋಮವಾರ ರಕ್ಷಾ ಬಂಧನದ ನಿಮಿತ್ತ ಕೆಲವು ಕಡೆಗಳಲ್ಲಿ ರಜೆ ಇದು. ಅದು ಚಿತ್ರಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ.

ಬಾಲಿವುಡ್​ಗೆ ಚೇತರಿಕೆ ತಂದ ‘ಸ್ತ್ರೀ 2’ ಸಿನಿಮಾ; ಮೂರು ದಿನದಲ್ಲಿ ದಾಖಲೆ ಗಳಿಕೆ
ಸ್ತ್ರೀ 2
ರಾಜೇಶ್ ದುಗ್ಗುಮನೆ
|

Updated on: Aug 18, 2024 | 10:29 AM

Share

ಬಾಲಿವುಡ್​ನಲ್ಲಿ ಇತ್ತೀಚೆಗೆ ಯಾವುದೇ ಸಿನಿಮಾ ದೊಡ್ಡ ಗೆಲುವು ಕಂಡಿರಲಿಲ್ಲ. ಈ ವರ್ಷ ಯಾವ ಸಿನಿಮಾಗಳು ಭರ್ಜರಿ ಗಳಿಕೆ ಮಾಡಿರಲಿಲ್ಲ. ಈ ಕೊರಗನ್ನು ‘ಸ್ತ್ರೀ 2’ ಸಿನಿಮಾ ನೀಗಿಸಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಕೇವಲ ಮೂರು ದಿನಕ್ಕೆ ಈ ಚಿತ್ರ 135 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಈ ಸಿನಿಮಾದಿಂದ ಶ್ರದ್ಧಾ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ಆಗಸ್ಟ್ 15ರಂದು ‘ಸ್ತ್ರೀ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಮೂರು ದಿನಗಳಲ್ಲಿ 135.7 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರಕ್ಕೆ ಪ್ರೀಮಿಯರ್ ಶೋನಿಂದ 8.5 ಕೋಟಿ ರೂಪಾಯಿ, ಮೊದಲ ದಿನದ ಕಲೆಕ್ಷನ್​ನಿಂದ 51.8 ಕೋಟಿ ರೂಪಾಯಿ, ಎರಡನೇ ದಿನ 31.4 ಕೋಟಿ ರೂಪಾಯಿ ಹಾಗೂ  ಶನಿವಾರ 44 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಒಟ್ಟಾರೆ ಕಲೆಕ್ಷನ್ 135 ಕೋಟಿ ರೂಪಾಯಿ ಆಗಿದೆ.

‘ಸ್ತ್ರೀ 2’ ಸಿನಿಮಾಗೆ ಭಾನುವಾರ (ಆಗಸ್ಟ್ 18) ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರ ಭಾನುವಾರ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡೋ ನಿರೀಕ್ಷೆ ಇದೆ. ಇನ್ನು, ಸೋಮವಾರ ರಕ್ಷಾ ಬಂಧನದ ನಿಮಿತ್ತ ಕೆಲವು ಕಡೆಗಳಲ್ಲಿ ರಜೆ ಇದು. ಅದು ಚಿತ್ರಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ. ‘ಸ್ತ್ರೀ 2’ ಚಿತ್ರವನ್ನು ಮುಂಬೈ, ದೆಹಲಿ, ಪುಣೆ ಹಾಗೂ ಬೆಂಗಳೂರಿನಲ್ಲಿ ಹೆಚ್ಚಿನ ಜನರು ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​; ಎರಡೇ ದಿನಕ್ಕೆ 125 ಕೋಟಿ ರೂಪಾಯಿ ಕಲೆಕ್ಷನ್​

‘ಸ್ತ್ರೀ’ ಸಿನಿಮಾ 2018ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಅದರ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ಭರ್ಜರಿ ಕಾಮಿಡಿ ಇದೆ ಎನ್ನಲಾಗಿದೆ. ಈ ಚಿತ್ರವನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?