AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಚೇತರಿಕೆ ತಂದ ‘ಸ್ತ್ರೀ 2’ ಸಿನಿಮಾ; ಮೂರು ದಿನದಲ್ಲಿ ದಾಖಲೆ ಗಳಿಕೆ

‘ಸ್ತ್ರೀ 2’ ಸಿನಿಮಾಗೆ ಭಾನುವಾರ (ಆಗಸ್ಟ್ 18) ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರ ಭಾನುವಾರ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡೋ ನಿರೀಕ್ಷೆ ಇದೆ. ಇನ್ನು, ಸೋಮವಾರ ರಕ್ಷಾ ಬಂಧನದ ನಿಮಿತ್ತ ಕೆಲವು ಕಡೆಗಳಲ್ಲಿ ರಜೆ ಇದು. ಅದು ಚಿತ್ರಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ.

ಬಾಲಿವುಡ್​ಗೆ ಚೇತರಿಕೆ ತಂದ ‘ಸ್ತ್ರೀ 2’ ಸಿನಿಮಾ; ಮೂರು ದಿನದಲ್ಲಿ ದಾಖಲೆ ಗಳಿಕೆ
ಸ್ತ್ರೀ 2
ರಾಜೇಶ್ ದುಗ್ಗುಮನೆ
|

Updated on: Aug 18, 2024 | 10:29 AM

Share

ಬಾಲಿವುಡ್​ನಲ್ಲಿ ಇತ್ತೀಚೆಗೆ ಯಾವುದೇ ಸಿನಿಮಾ ದೊಡ್ಡ ಗೆಲುವು ಕಂಡಿರಲಿಲ್ಲ. ಈ ವರ್ಷ ಯಾವ ಸಿನಿಮಾಗಳು ಭರ್ಜರಿ ಗಳಿಕೆ ಮಾಡಿರಲಿಲ್ಲ. ಈ ಕೊರಗನ್ನು ‘ಸ್ತ್ರೀ 2’ ಸಿನಿಮಾ ನೀಗಿಸಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಕೇವಲ ಮೂರು ದಿನಕ್ಕೆ ಈ ಚಿತ್ರ 135 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಈ ಸಿನಿಮಾದಿಂದ ಶ್ರದ್ಧಾ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ಆಗಸ್ಟ್ 15ರಂದು ‘ಸ್ತ್ರೀ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಮೂರು ದಿನಗಳಲ್ಲಿ 135.7 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರಕ್ಕೆ ಪ್ರೀಮಿಯರ್ ಶೋನಿಂದ 8.5 ಕೋಟಿ ರೂಪಾಯಿ, ಮೊದಲ ದಿನದ ಕಲೆಕ್ಷನ್​ನಿಂದ 51.8 ಕೋಟಿ ರೂಪಾಯಿ, ಎರಡನೇ ದಿನ 31.4 ಕೋಟಿ ರೂಪಾಯಿ ಹಾಗೂ  ಶನಿವಾರ 44 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಒಟ್ಟಾರೆ ಕಲೆಕ್ಷನ್ 135 ಕೋಟಿ ರೂಪಾಯಿ ಆಗಿದೆ.

‘ಸ್ತ್ರೀ 2’ ಸಿನಿಮಾಗೆ ಭಾನುವಾರ (ಆಗಸ್ಟ್ 18) ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರ ಭಾನುವಾರ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡೋ ನಿರೀಕ್ಷೆ ಇದೆ. ಇನ್ನು, ಸೋಮವಾರ ರಕ್ಷಾ ಬಂಧನದ ನಿಮಿತ್ತ ಕೆಲವು ಕಡೆಗಳಲ್ಲಿ ರಜೆ ಇದು. ಅದು ಚಿತ್ರಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ. ‘ಸ್ತ್ರೀ 2’ ಚಿತ್ರವನ್ನು ಮುಂಬೈ, ದೆಹಲಿ, ಪುಣೆ ಹಾಗೂ ಬೆಂಗಳೂರಿನಲ್ಲಿ ಹೆಚ್ಚಿನ ಜನರು ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​; ಎರಡೇ ದಿನಕ್ಕೆ 125 ಕೋಟಿ ರೂಪಾಯಿ ಕಲೆಕ್ಷನ್​

‘ಸ್ತ್ರೀ’ ಸಿನಿಮಾ 2018ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಅದರ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ಭರ್ಜರಿ ಕಾಮಿಡಿ ಇದೆ ಎನ್ನಲಾಗಿದೆ. ಈ ಚಿತ್ರವನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ