AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಚೇತರಿಕೆ ತಂದ ‘ಸ್ತ್ರೀ 2’ ಸಿನಿಮಾ; ಮೂರು ದಿನದಲ್ಲಿ ದಾಖಲೆ ಗಳಿಕೆ

‘ಸ್ತ್ರೀ 2’ ಸಿನಿಮಾಗೆ ಭಾನುವಾರ (ಆಗಸ್ಟ್ 18) ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರ ಭಾನುವಾರ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡೋ ನಿರೀಕ್ಷೆ ಇದೆ. ಇನ್ನು, ಸೋಮವಾರ ರಕ್ಷಾ ಬಂಧನದ ನಿಮಿತ್ತ ಕೆಲವು ಕಡೆಗಳಲ್ಲಿ ರಜೆ ಇದು. ಅದು ಚಿತ್ರಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ.

ಬಾಲಿವುಡ್​ಗೆ ಚೇತರಿಕೆ ತಂದ ‘ಸ್ತ್ರೀ 2’ ಸಿನಿಮಾ; ಮೂರು ದಿನದಲ್ಲಿ ದಾಖಲೆ ಗಳಿಕೆ
ಸ್ತ್ರೀ 2
ರಾಜೇಶ್ ದುಗ್ಗುಮನೆ
|

Updated on: Aug 18, 2024 | 10:29 AM

Share

ಬಾಲಿವುಡ್​ನಲ್ಲಿ ಇತ್ತೀಚೆಗೆ ಯಾವುದೇ ಸಿನಿಮಾ ದೊಡ್ಡ ಗೆಲುವು ಕಂಡಿರಲಿಲ್ಲ. ಈ ವರ್ಷ ಯಾವ ಸಿನಿಮಾಗಳು ಭರ್ಜರಿ ಗಳಿಕೆ ಮಾಡಿರಲಿಲ್ಲ. ಈ ಕೊರಗನ್ನು ‘ಸ್ತ್ರೀ 2’ ಸಿನಿಮಾ ನೀಗಿಸಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಕೇವಲ ಮೂರು ದಿನಕ್ಕೆ ಈ ಚಿತ್ರ 135 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಈ ಸಿನಿಮಾದಿಂದ ಶ್ರದ್ಧಾ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ಆಗಸ್ಟ್ 15ರಂದು ‘ಸ್ತ್ರೀ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಮೂರು ದಿನಗಳಲ್ಲಿ 135.7 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರಕ್ಕೆ ಪ್ರೀಮಿಯರ್ ಶೋನಿಂದ 8.5 ಕೋಟಿ ರೂಪಾಯಿ, ಮೊದಲ ದಿನದ ಕಲೆಕ್ಷನ್​ನಿಂದ 51.8 ಕೋಟಿ ರೂಪಾಯಿ, ಎರಡನೇ ದಿನ 31.4 ಕೋಟಿ ರೂಪಾಯಿ ಹಾಗೂ  ಶನಿವಾರ 44 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಒಟ್ಟಾರೆ ಕಲೆಕ್ಷನ್ 135 ಕೋಟಿ ರೂಪಾಯಿ ಆಗಿದೆ.

‘ಸ್ತ್ರೀ 2’ ಸಿನಿಮಾಗೆ ಭಾನುವಾರ (ಆಗಸ್ಟ್ 18) ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರ ಭಾನುವಾರ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡೋ ನಿರೀಕ್ಷೆ ಇದೆ. ಇನ್ನು, ಸೋಮವಾರ ರಕ್ಷಾ ಬಂಧನದ ನಿಮಿತ್ತ ಕೆಲವು ಕಡೆಗಳಲ್ಲಿ ರಜೆ ಇದು. ಅದು ಚಿತ್ರಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ. ‘ಸ್ತ್ರೀ 2’ ಚಿತ್ರವನ್ನು ಮುಂಬೈ, ದೆಹಲಿ, ಪುಣೆ ಹಾಗೂ ಬೆಂಗಳೂರಿನಲ್ಲಿ ಹೆಚ್ಚಿನ ಜನರು ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​; ಎರಡೇ ದಿನಕ್ಕೆ 125 ಕೋಟಿ ರೂಪಾಯಿ ಕಲೆಕ್ಷನ್​

‘ಸ್ತ್ರೀ’ ಸಿನಿಮಾ 2018ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಅದರ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ಭರ್ಜರಿ ಕಾಮಿಡಿ ಇದೆ ಎನ್ನಲಾಗಿದೆ. ಈ ಚಿತ್ರವನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ