AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ಮಾಡಿದ್ದು ನಿಸ್ವಾರ್ಥದ ಕೆಲಸ’; ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸುಧಾ ಮೂರ್ತಿ

Sudha Murty on The Vaccine War: ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಭಾರತದ ಮೊದಲ ಬಯೋ ಸೈನ್ಸ್ ಸಿನಿಮಾ. ಕೊವಿಡ್ ಸಂದರ್ಭದಲ್ಲಿ ಭಾರತ ಯಾವ ರೀತಿಯಲ್ಲಿ ತೊಂದರೆ ಎದುರಿಸಿತು ಮತ್ತು ಔಷಧ ಕಂಡು ಹಿಡಿಯಲು ಯಾವ ರೀತಿಯಲ್ಲಿ ಶ್ರಮ ಹಾಕಿತು ಎನ್ನುವ ಕುರಿತು ಈ ಚಿತ್ರ ಇದೆ.

‘ಅವರು ಮಾಡಿದ್ದು ನಿಸ್ವಾರ್ಥದ ಕೆಲಸ’; ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸುಧಾ ಮೂರ್ತಿ
ಪಲ್ಲವಿ-ಸುಧಾ ಮೂರ್ತಿ-ವಿವೇಕ್
ರಾಜೇಶ್ ದುಗ್ಗುಮನೆ
|

Updated on:Sep 19, 2023 | 3:27 PM

Share

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ರಿಲೀಸ್​ಗೂ ಮೊದಲೇ ಸದ್ದು ಮಾಡುತ್ತಿದೆ. ಸೆಲೆಬ್ರಿಟಿಗಳಿಗಾಗಿ ಈ ಚಿತ್ರದ ವಿಶೇಷ ಶೋ ಏರ್ಪಡಿಸಲಾಗುತ್ತಿದೆ. ಸುಧಾ ಮೂರ್ತಿ ಅವರು ಕೂಡ ಇತ್ತೀಚೆಗೆದಿ ವ್ಯಾಕ್ಸಿನ್ ವಾರ್’ಸಿನಿಮಾ ನೋಡಿದ್ದಾರೆ. ಅವರು ಚಿತ್ರದ ಬಗ್ಗೆ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಈ ಮೊದಲು ಮಾಧವನ್ ಅವರು ಸಿನಿಮಾ ನೋಡಿದ್ದರು. ಈಗ ಸುಧಾ ಮೂರ್ತಿ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ತಂಡದ ಬಲ ಹೆಚ್ಚಿದೆ.

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಭಾರತದ ಮೊದಲ ಬಯೋ ಸೈನ್ಸ್ ಸಿನಿಮಾ. ಕೊವಿಡ್ ಸಂದರ್ಭದಲ್ಲಿ ಭಾರತ ಯಾವ ರೀತಿಯಲ್ಲಿ ತೊಂದರೆ ಎದುರಿಸಿತು ಮತ್ತು ಔಷಧ ಕಂಡು ಹಿಡಿಯಲು ಯಾವ ರೀತಿಯಲ್ಲಿ ಶ್ರಮ ಹಾಕಿತು ಎನ್ನುವ ಕುರಿತು ಈ ಚಿತ್ರ ಇದೆ. ‘ದಿ ಕಾಶ್ಮೀರ್ ಫೈಲ್ಸ್’ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್ ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

‘ದಿ ವ್ಯಾಕ್ಸಿನ್ ವಾರ್’ನ ‘ಮನ ಮುಟ್ಟುವ’ಸಿನಿಮಾ ಎಂದು ಕರೆದಿದ್ದಾರೆ ಸುಧಾ ಮೂರ್ತಿ. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲಿ ಮಾತು ಆರಂಭಿಸಿ ಆ ಬಳಿಕ ಇಂಗ್ಲಿಷ್​ನಲ್ಲಿ ತಮ್ಮ ವಿಮರ್ಶೆ ತಿಳಿಸಿದರು ಸುಧಾ ಮೂರ್ತಿ. ‘ನಾನು ಮಹಿಳೆಯರ ಪಾತ್ರವನ್ನು ಅರ್ಥ ಮಾಡಿಕೊಂಡಿದ್ದೇನೆ. ಅವಳು ತಾಯಿ, ಪತ್ನಿ ಜೊತೆ ವೃತ್ತಿ ಬದುಕನ್ನು ನಡೆಸುವವಳೂ ಹೌದು. ಕುಟುಂಬ ಹಾಗೂ ಕೆಲಸವನ್ನು ಸಮದೂಗಿಸಿಕೊಂಡು ಹೋಗುವುದು ಕಷ್ಟ. ಕೆಲವರು ಈ ವಿಚಾರದಲ್ಲಿ ಅದೃಷ್ಟಶಾಲಿಗಳು. ನಾವು ಉಳಿದುಕೊಂಡ ಕಟ್ಟಡದ ಮೇಲೆ ನಮ್ಮ ತಂದೆ ತಾಯಿ ವಾಸಿಸುತ್ತಿದ್ದರು. ನಾನು ಕೆಳಗೆ ವಾಸಿಸುತ್ತಿದ್ದೆ. ಹೀಗಾಗಿ ಹೆಚ್ಚಿನ ಕೆಲಸ ಮಾಡಲು ನನಗೆ ಸಹಕಾರಿ ಆಯಿತು. ಮಕ್ಕಳನ್ನು ಬೆಳೆಸುತ್ತಾ ವೃತ್ತಿ ಜೀವನ ನಡೆಸಿಕೊಂಡು ಹೋಗೋದು ಕಷ್ಟ. ಹಾಗೆ ಮಾಡಬೇಕು ಎಂದರೆ ಕುಟುಂಬದ ಬೆಂಬಲ ಬೇಕು’ ಎಂದಿದ್ದಾರೆ ಅವರು.

ಮಹಿಳಾ ವಿಜ್ಞಾನಿಗಳು ಕೊವಿಡ್ ಸಂದರ್ಭದಲ್ಲಿ ಲ್ಯಾಬ್​ಗೆ ಬಂದು ಸಂಶೋಧನೆ ಮಾಡಿದ್ದರು. ಇದನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, ‘ಮಕ್ಕಳು ಚಿಕ್ಕವರಿರಬಹುದು. ಆದರೆ ಅವರು ತಮ್ಮ ತಾಯಿಯ ಬಗ್ಗೆ ಮತ್ತು ಅವರು ಏನು ಮಾಡಿದ್ದಾರೆಂದು ಹೆಮ್ಮೆಪಡುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಭಾರತದ ವಿಜ್ಞಾನಿಗಳು ಹೋರಾಡಿದ ಕಥೆ; ಗಮನ ಸೆಳೆದ ‘ದಿ ವ್ಯಾಕ್ಸಿನ್ ವಾರ್’ ಟ್ರೇಲರ್

‘ಕೊವಾಕ್ಸಿನ್ ಏನು ಎಂಬುದು ಸಾಮಾನ್ಯ ಜನರಿಗೆ ಅರ್ಥವಾಗುವುದಿಲ್ಲ. ಆದರೆ, ಹಿಂದಿರುವ ಶ್ರಮವನ್ನು ಈ ಸಿನಿಮಾ ತೋರಿಸುತ್ತದೆ. ಎಲ್ಲಾ ವಿಜ್ಞಾನಿಗಳು ಮಾಡಿದ್ದು ನಿಸ್ವಾರ್ಥದ ಕೆಲಸ. ಕೊವಿಡ್ ಅವಧಿಯಲ್ಲಿ ಅವರು ಗರಿಷ್ಟ ಸಮಯವನ್ನು ಔಷಧ ಕಂಡು ಹಿಡಿಯಲು ಕಳೆದರು. ಇದರಿಂದ ನಾವು ಸುಖವಾಗಿ ಬದುಕುವಂತಾಯಿತು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:21 pm, Tue, 19 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್